Consumer Accident Insurance Payment by bank itself

ಗ್ರಾಹಕರ ಅಪಘಾತ ವಿಮೆ ಬ್ಯಾಂಕಿನಿಂದಲೇ ಪಾವತಿ..ಗ್ರಾಹಕರ ಮೇಲೆ ಹೆಚ್ಚಿನ ಬಡ್ಡಿ ಹೊರೆ ಹಾಕಲು ಸಿದ್ಧರಿಲ್ಲ: ಓಸ್ವಾಲ್

ಗ್ರಾಹಕರ ಅಪಘಾತ ವಿಮೆ ಬ್ಯಾಂಕಿನಿಂದಲೇ ಪಾವತಿ..ಗ್ರಾಹಕರ ಮೇಲೆ ಹೆಚ್ಚಿನ ಬಡ್ಡಿ ಹೊರೆ ಹಾಕಲು ಸಿದ್ಧರಿಲ್ಲ: ಓಸ್ವಾಲ್

ಮುದ್ದೇಬಿಹಾಳ : ಗ್ರಾಹಕರಿಗೆ ಬಡ್ಡಿ ಹೊರೆ ಆಗಬಾರದು ಎಂಬ ಕಾರಣಕ್ಕೆ ಲಾಭಾಂಶದ ಪ್ರಮಾಣ ಹೆಚ್ಚಿಸಿಲ್ಲ ಎಂದು ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ್ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಏಪಿಎಂಸಿಯಲ್ಲಿರುವ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ 65ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಬ್ಯಾಂಕು 395.65 ಲಕ್ಷ ರೂ.ಆದಾಯ ಗಳಿಸಿದ್ದು ಅದರಲ್ಲಿ ನಿವ್ವಳ 96.87 ಲಕ್ಷ ರೂ.ಲಾಭ ಗಳಿಸಿದೆ.ಪ್ರಸಕ್ತ ಸಾಲಿನಲ್ಲಿ ಎಲ್ಲ ಸದಸ್ಯರಿಗೆ ಅಪಘಾತ ವಿಮೆ ಸೌಲಭ್ಯ ಕಲ್ಪಿಸುತ್ತಿದ್ದು ಅದಕ್ಕೆ ತಗಲುವ ವಿಮೆ ಕಂತಿನ ಹಣವನ್ನು ಪ್ರತಿ ವರ್ಷ ಬ್ಯಾಂಕಿನಿಂದಲೇ ಭರಣಾ ಮಾಡಲು ಆಡಳಿತ ಮಂಡಳಿ ತೀರ್ಮಾನಿಸಿದೆ.

9268 ಸದಸ್ಯರಿಗೆ ವಿಮೆ ಪಾವತಿಸಲಾಗುತ್ತಿದೆ. ಅಪಘಾತವಾಗಿ ಅಂಗವೈಕಲ್ಯ ಉಂಟಾದರೆ ಒಂದು ಲಕ್ಷ,ಮೃತಪಟ್ಟರೆ ಎರಡು ಲಕ್ಷ ರೂ.ಮೃತರ ಅವಲಂಬಿತರಿಗೆ ವಿಮಾ ಕಂಪನಿಯಿಂದ ನೀಡಲಾಗುತ್ತದೆ ಎಂದು ತಿಳಿಸಿದರು.

ಗ್ರಾಹಕರಾದ ಬಸನಗೌಡ ಪಾಟೀಲ್, ಬಾಬು ಬಿರಾದಾರ, ಶರಣಯ್ಯ ಹಿರೇಮಠ, ಬಿ.ಎಸ್.ಮೇಟಿ ಮಾತನಾಡಿ, ಬ್ಯಾಂಕಿನಿಂದ ಕಳೆದ ಮೂರು ವರ್ಷಗಳಿಂದ ಗ್ರಾಹಕರಿಗೆ ಲಾಭಾಂಶದ ಪ್ರಮಾಣದಲ್ಲಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇದ್ದರೂ ಅದನ್ನು ಈಡೇರಿಸಿಲ್ಲ. ಡಿವ್ಹಿಡೆಂಡ್ ಹೆಚ್ಚಿಸಿ ಎಂದು ಒತ್ತಾಯಿಸಿದರು.ಇದಕ್ಕೆ ಉತ್ತರಿಸಿದ ಅಧ್ಯಕ್ಷ ಓಸ್ವಾಲ್,ನಮ್ಮ ಬ್ಯಾಂಕ್ ಗ್ರಾಹಕರು ಪಡೆದುಕೊಳ್ಳುವ ಸಾಲದ ಮೇಲೆ ಬಡ್ಡಿದರ ಹೆಚ್ಚಳ ಮಾಡಿ ಅದರಿಂದ ಬಂದ ಆದಾಯವನ್ನು ಲಾಭಾಂಶದ ರೂಪದಲ್ಲಿ ಹೆಚ್ಚಿಸಿಕೊಡುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.

ಹಿರಿಯ ನಿರ್ದೇಶಕರಾದ ಎಸ್.ಎಸ್.ಮಾಲಗತ್ತಿ, ವೆಂಕನಗೌಡ ಪಾಟೀಲ್ ಮಾತನಾಡಿದರು.

ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿದರಕುಂದಿ, ಉಪಾಧ್ಯಕ್ಷ ಸಿ.ಎಲ್.ಬಿರಾದಾರ, ನಿರ್ದೇಶಕರಾದ ರಾಜಶೇಖರ ಕರಡ್ಡಿ, ಪ್ರಭುದೇವ ಕಲ್ಬುರ್ಗಿ, ರುದ್ರಪ್ಪ ಕಡಿ, ಜಿ.ಬಿ.ಪಾಟೀಲ್, ಶ್ರೀದೇವಿ ಮದರಿ, ವೃತ್ತಿಪರ ನಿರ್ದೇಶಕ ಸುನೀಲ ಇಲ್ಲೂರ ಇದ್ದರು.

ಇದನ್ನೂ ಓದಿ: ಚುನಾವಣೆ ನಡೆದ ನಾಲ್ಕರಲ್ಲಿ ಮೂರು ಸ್ಥಾನ BJP ಪಾಲು.. ಆದ್ರೂ PLD ಬ್ಯಾಂಕ್ ಗದ್ದುಗೆ ಕಾಂಗ್ರೆಸ್ ಪಾಲು..! ( ವಿಡಿಯೋ ನೋಡಿ)

ವೃತ್ತಿಪರ ನಿರ್ದೇಶಕ ನಾಗಭೂಷಣ ನಾವದಗಿ ಸ್ವಾಗತಿಸಿದರು. ಎಂ.ಕೆ.ರಾಯಗೊಂಡ ಸುಮಾ ನಾಡಗೌಡ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

Latest News

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ:            ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ದೇಶದ ಗಡಿ ಕಾಯುವ ಸೇವೆಯನ್ನು ಆಯ್ಕೆ ಮಾಡಿಕೊಂಡ ಆಯೇಷಾ ವಾಲೀಕಾರ, ಕಾಶೀಬಾಯಿ ಚಲವಾದಿ ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ಗಡಿ ಕಾಯುವ ಕೆಲಸ ಸಾಮಾನ್ಯವಾದದ್ದಲ್ಲ.ಅದಕ್ಕೆ ಸಾಕಷ್ಟು ತಯಾರಿ ಬೇಕಾಗುತ್ತದೆ.ಬಡತನದಲ್ಲಿ ಇಂತಹ ದೊಡ್ಡ ಸಾಧನೆ ಮಾಡಿದ ನಮ್ಮ ತಾಲ್ಲೂಕಿನ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಹಾಗೂ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಯೋಜನೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಪ್ರಕಟಿಸಿದ್ದಾರೆ. ಪರೀಕ್ಷೆ ಎರಡು ವಿಭಾಗಗಳಲ್ಲಿ ನಡೆಯಲಿದ್ದು ದಿನಾಂಕ 8-03-2026 ರಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಪರೀಕ್ಷೆಗೆ 4ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು ಇದರಲ್ಲಿ ಪಾಲ್ಗೊಳ್ಳುವ ಮಕ್ಕಳಲ್ಲಿ ಮೊದಲ ಹತ್ತು