Consumer Accident Insurance Payment by bank itself

ಗ್ರಾಹಕರ ಅಪಘಾತ ವಿಮೆ ಬ್ಯಾಂಕಿನಿಂದಲೇ ಪಾವತಿ..ಗ್ರಾಹಕರ ಮೇಲೆ ಹೆಚ್ಚಿನ ಬಡ್ಡಿ ಹೊರೆ ಹಾಕಲು ಸಿದ್ಧರಿಲ್ಲ: ಓಸ್ವಾಲ್

ಗ್ರಾಹಕರ ಅಪಘಾತ ವಿಮೆ ಬ್ಯಾಂಕಿನಿಂದಲೇ ಪಾವತಿ..ಗ್ರಾಹಕರ ಮೇಲೆ ಹೆಚ್ಚಿನ ಬಡ್ಡಿ ಹೊರೆ ಹಾಕಲು ಸಿದ್ಧರಿಲ್ಲ: ಓಸ್ವಾಲ್

ಮುದ್ದೇಬಿಹಾಳ : ಗ್ರಾಹಕರಿಗೆ ಬಡ್ಡಿ ಹೊರೆ ಆಗಬಾರದು ಎಂಬ ಕಾರಣಕ್ಕೆ ಲಾಭಾಂಶದ ಪ್ರಮಾಣ ಹೆಚ್ಚಿಸಿಲ್ಲ ಎಂದು ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ್ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಏಪಿಎಂಸಿಯಲ್ಲಿರುವ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ 65ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಬ್ಯಾಂಕು 395.65 ಲಕ್ಷ ರೂ.ಆದಾಯ ಗಳಿಸಿದ್ದು ಅದರಲ್ಲಿ ನಿವ್ವಳ 96.87 ಲಕ್ಷ ರೂ.ಲಾಭ ಗಳಿಸಿದೆ.ಪ್ರಸಕ್ತ ಸಾಲಿನಲ್ಲಿ ಎಲ್ಲ ಸದಸ್ಯರಿಗೆ ಅಪಘಾತ ವಿಮೆ ಸೌಲಭ್ಯ ಕಲ್ಪಿಸುತ್ತಿದ್ದು ಅದಕ್ಕೆ ತಗಲುವ ವಿಮೆ ಕಂತಿನ ಹಣವನ್ನು ಪ್ರತಿ ವರ್ಷ ಬ್ಯಾಂಕಿನಿಂದಲೇ ಭರಣಾ ಮಾಡಲು ಆಡಳಿತ ಮಂಡಳಿ ತೀರ್ಮಾನಿಸಿದೆ.

9268 ಸದಸ್ಯರಿಗೆ ವಿಮೆ ಪಾವತಿಸಲಾಗುತ್ತಿದೆ. ಅಪಘಾತವಾಗಿ ಅಂಗವೈಕಲ್ಯ ಉಂಟಾದರೆ ಒಂದು ಲಕ್ಷ,ಮೃತಪಟ್ಟರೆ ಎರಡು ಲಕ್ಷ ರೂ.ಮೃತರ ಅವಲಂಬಿತರಿಗೆ ವಿಮಾ ಕಂಪನಿಯಿಂದ ನೀಡಲಾಗುತ್ತದೆ ಎಂದು ತಿಳಿಸಿದರು.

ಗ್ರಾಹಕರಾದ ಬಸನಗೌಡ ಪಾಟೀಲ್, ಬಾಬು ಬಿರಾದಾರ, ಶರಣಯ್ಯ ಹಿರೇಮಠ, ಬಿ.ಎಸ್.ಮೇಟಿ ಮಾತನಾಡಿ, ಬ್ಯಾಂಕಿನಿಂದ ಕಳೆದ ಮೂರು ವರ್ಷಗಳಿಂದ ಗ್ರಾಹಕರಿಗೆ ಲಾಭಾಂಶದ ಪ್ರಮಾಣದಲ್ಲಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇದ್ದರೂ ಅದನ್ನು ಈಡೇರಿಸಿಲ್ಲ. ಡಿವ್ಹಿಡೆಂಡ್ ಹೆಚ್ಚಿಸಿ ಎಂದು ಒತ್ತಾಯಿಸಿದರು.ಇದಕ್ಕೆ ಉತ್ತರಿಸಿದ ಅಧ್ಯಕ್ಷ ಓಸ್ವಾಲ್,ನಮ್ಮ ಬ್ಯಾಂಕ್ ಗ್ರಾಹಕರು ಪಡೆದುಕೊಳ್ಳುವ ಸಾಲದ ಮೇಲೆ ಬಡ್ಡಿದರ ಹೆಚ್ಚಳ ಮಾಡಿ ಅದರಿಂದ ಬಂದ ಆದಾಯವನ್ನು ಲಾಭಾಂಶದ ರೂಪದಲ್ಲಿ ಹೆಚ್ಚಿಸಿಕೊಡುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.

ಹಿರಿಯ ನಿರ್ದೇಶಕರಾದ ಎಸ್.ಎಸ್.ಮಾಲಗತ್ತಿ, ವೆಂಕನಗೌಡ ಪಾಟೀಲ್ ಮಾತನಾಡಿದರು.

ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿದರಕುಂದಿ, ಉಪಾಧ್ಯಕ್ಷ ಸಿ.ಎಲ್.ಬಿರಾದಾರ, ನಿರ್ದೇಶಕರಾದ ರಾಜಶೇಖರ ಕರಡ್ಡಿ, ಪ್ರಭುದೇವ ಕಲ್ಬುರ್ಗಿ, ರುದ್ರಪ್ಪ ಕಡಿ, ಜಿ.ಬಿ.ಪಾಟೀಲ್, ಶ್ರೀದೇವಿ ಮದರಿ, ವೃತ್ತಿಪರ ನಿರ್ದೇಶಕ ಸುನೀಲ ಇಲ್ಲೂರ ಇದ್ದರು.

ಇದನ್ನೂ ಓದಿ: ಚುನಾವಣೆ ನಡೆದ ನಾಲ್ಕರಲ್ಲಿ ಮೂರು ಸ್ಥಾನ BJP ಪಾಲು.. ಆದ್ರೂ PLD ಬ್ಯಾಂಕ್ ಗದ್ದುಗೆ ಕಾಂಗ್ರೆಸ್ ಪಾಲು..! ( ವಿಡಿಯೋ ನೋಡಿ)

ವೃತ್ತಿಪರ ನಿರ್ದೇಶಕ ನಾಗಭೂಷಣ ನಾವದಗಿ ಸ್ವಾಗತಿಸಿದರು. ಎಂ.ಕೆ.ರಾಯಗೊಂಡ ಸುಮಾ ನಾಡಗೌಡ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ