Countdown to village deity fair: Muddebihala city beautified like a bride

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.

ಮೇ.30 ರಂದು ದೇವಿ ಪ್ರತಿಷ್ಠಾಪನೆಗೊಳ್ಳಲಿದ್ದು ವಿದ್ಯುಕ್ತವಾದ ಚಾಲನೆ ಸಿಗಲಿದೆ. ಜಾತ್ರೆಯ ಅಂಗವಾಗಿ ಎಲ್ಲ ಸಿದ್ಧತೆಗಳನ್ನು ಜಾತ್ರಾ ಕಮೀಟಿಯ ಪ್ರಮುಖ ಮಾಡಿಕೊಂಡಿದ್ದಾರೆ. ಇಡೀ ಮುದ್ದೇಬಿಹಾಳ ಪಟ್ಟಣದ ತುಂಬೆಲ್ಲಾ ಜನನಿಬಿಡ ರಸ್ತೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಪ್ರಮುಖ ವೃತ್ತಗಳಾದ ಬಸವೇಶ್ವರ, ಇಂದಿರಾ, ಅಂಬೇಡ್ಕರ್, ಬನಶಂಕರಿ ವೃತ್ತಗಳನ್ನು ವೃತ್ತಾಕಾರದಲ್ಲಿ ವಿದ್ಯುತ್ ದೀಪ ಅಳವಡಿಸಿದ್ದು ಜನರ ಮನಸೂರೆಗೊಂಡಿದೆ.

ಶಾರದಾ ದೇವಿ ಹಾಗೂ ದ್ಯಾಮವ್ವ ದೇವಿಯರನ್ನು ಮೆರವಣಿಗೆಯಲ್ಲಿ ಕರೆತರಲು ಹೊಸ ಎತ್ತಿನ ಬಂಡಿಗಳನ್ನು ಸಿದ್ದಪಡಿಸಲಾಗಿದೆ. ಜಾತ್ರೆಗೆ ಬಂದ ಭಕ್ತರಿಗೆ ಹೊಟ್ಟೆ ತುಂಬಿಸಲು ಐದು ದಿನಗಳ ಕಾಲ ಪ್ರಸಾದದ ವ್ಯವಸ್ಥೆ ಬೆಳಗ್ಗೆ 12 ರಿಂದ ರಾತ್ರಿ 10ರವರೆಗೆ ಉಣಬಡಿಸಲು ಕಮೀಟಿ ಸಿದ್ಧತೆ ಮಾಡಿಕೊಂಡಿದೆ. ದೇವಸ್ಥಾನ, ಮಸೀದಿಗಳಿಗೆ ದೀಪಾಲಂಕಾರ ಮಾಡಲಾಗಿದ್ದು ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಭಾವೈಕ್ಯತೆಯನ್ನು ಸಾರುವ ಜಾತ್ರೆ ತನ್ನ ವೈಭವ ಇಮ್ಮಡಿಸಿಕೊಂಡಿದೆ.

ಇದು ನಮ್ಮೂರು ಜಾತ್ರೆಯಾಗಿದ್ದು ಜಾತಿ, ಧರ್ಮ, ಮತ, ಬೇಧವಿಲ್ಲದೇ ಎಲ್ಲರೂ ಒಗ್ಗೂಡಿ ಆಚರಿಸುತ್ತಿದ್ದೇವೆ. ಹಲವು ಕಲಾತಂಡಗಳು ಆಗಮಿಸಿದ್ದು ಮೆರವಣಿಗೆ ನೋಡುವುದೇ ಕಣ್ಣಿಗೆ ಒಂದು ಹಬ್ಬದಂತಿರಲಿದೆ.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ