Country's progress only when money is in the hands of the poor: Minister Lad

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಶಿವಮೊಗ್ಗ, ಆಗಸ್ಟ್ 04 : ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು, ಬಡವರಿಗಾಗಿ ರೂಪಿಸಿರುವ ಯೋಜನೆಗಳನ್ನು ಅವರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರು ಕರೆ ನೀಡಿದರು

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದೊಂದಿಗೆ ಸೋಮವಾರ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಲೋಕಾರ್ಪಣೆ ಹಾಗೂ ಶಿವಮೊಗ್ಗ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಮಿಕರ ಕಲ್ಯಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವಪೂರ್ಣವಾದ ಮಸೂದೆಗಳನ್ನು ಅಂಗೀಕಾರ ಮಾಡಿದೆ. ಅಮೇಜಾನ್, ಸ್ವಿಗ್ಗಿ, ಝೊಮ್ಯಾಟೊ ಬ್ಲಿಂಕ್‌ಇಟ್‌ ಮುಂತಾದ ಇ ಕಾಮರ್ಸ್‌ ಸಂಸ್ಥೆಗಳಲ್ಲಿ ಕೆಲಸ ಮಾಡುವ 5 ಲಕ್ಷಕ್ಕೂ ಹೆಚ್ಚು ಗಿಗ್ ಕಾರ್ಮಿಕರು ರಾಜ್ಯದಲ್ಲಿ ಇದ್ದಾರೆ. ಅವರಿಗಾಗಿಯೇ ಪ್ರಪ್ರಥಮವಾಗಿ ಕರ್ನಾಟಕದಲ್ಲಿ ಗಿಗ್ ಬಿಲ್ ಜಾರಿ ಮಾಡಲಾಗಿದೆ. ಸಹನಟರು, ಟಿಕೆಟ್ ನೀಡುವವರು, ತಂತ್ರಜ್ಞರು, ಪೌರಾಣಿಕ ನಾಟಕಗಳ ನಟರು ಸೇರಿದಂತೆ ಇಂತಹ ಕ್ಷೇತ್ರದಲ್ಲಿ ಕೆಲಸ ಮಾಡುವ ಕೆಲಸಗಾರಗಾಗಿ ಸಿನಿ ಬಿಲ್ ಪಾಸ್ ಮಾಡಿದ್ದು, ಶೇ. 1 ರಿಂದ 2 ಸೆಸ್ ಮತ್ತು ಸರ್ಕಾರದ ಹಣ ಸೇರಿಸಿ ಅನುಕೂಲ ಮಾಡಲಾಗಿದೆ. ಹಾಗೂ ಕಮರ್ಷಿಯಲ್ ಡ್ರೈವರ್ ಕ್ಲೀನರ್, ಮೆಕ್ಯಾನಿಕ್ ಇತರೆ ಕಾರ್ಮಿಕರ ಸಾರಿಗೆ ಬಿಲ್ ಪಾಸ್ ಮಾಡಿದ್ದು, ಅಪಘಾತ, ಮರಣ ಅಥವಾ ತೊಂದರೆಯಾದಲ್ಲಿ ರೂ. 5 ಲಕ್ಷ ನೀಡುವ ಯೋಜನೆ ಜಾರಿಗೆ ತರಲಾಗಿದೆ. ಪ್ರತಿ ತಾಸಿಗೆ 20 ಸಾವಿರ ಮರಣ ಸಂಭವಿಸುತ್ತಿದ್ದು ಪ್ರತಿ ದಿನ 480 ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ದುಡಿಯುವ ವರ್ಗವೇ ಇದಕ್ಕೆ ಹೆಚ್ಚು ಬಲಿಯಾಗುತ್ತಿರುವ ಕಾರಣ ದೇಶದ ಜಿಡಿಪಿಗೆ ಶೇ.3 ನಷ್ಟವಾಗುತ್ತಿದೆ. ಸಭೆಗಳಲ್ಲಿ ಈ ಕುರಿತು ಜಿಲ್ಲಾಧಿಕಾರಿಗಳು ಅಪಘಾತ ಆಗದಂತೆ ಅರಿವು ಮೂಡಿಸಿ, ಹೆಲ್ಮೆಟ್ ಕಡ್ಡಾಯಗೊಳಿಸಬೇಕು ಎಂದರು.

20 ಜನರಿಗಿಂತ ಹೆಚ್ಚು ಕಾರ್ಮಿಕರು ಕೆಲಸ ಮಾಡುವೆಡೆ ಮಾಲೀಕರು 5 ವರ್ಷ ಕೆಲಸ ಮಾಡಿದ ಕಾರ್ಮಿಕರಿಗೆ ಕಡ್ಡಾಯವಾಗಿ ಗ್ರಾಚ್ಯುಟಿ ಪಾವತಿಸಬೇಕು. ಈ ರೀತಿಯ 6 ಸಾವಿರ ಕಂಪೆನಿಗಳು ಇಲಾಖೆಯಡಿ ನೋಂದಣಿಯಾಗಿದ್ದು, ಅಧಿಕಾರಿಗಳು ಗ್ರಾಚ್ಯುಟಿ ಪಾವತಿ ಬಗ್ಗೆ ಪರಿಶೀಲಿಸಬೇಕು ಎಂದು ಸೂಚಿಸಿದರು.

ಎಸ್‌ಸಿ/ ಎಸ್‌ಟಿ ಯವರಿಗೆ ಕೆಲಸ ನೀಡುವ ಖಾಸಗಿ ಸಂಸ್ಥೆ/ಕಂಪೆನಿಗೆ ಕಾರ್ಮಿಕ ಇಇಲಾಖೆಯಿಂದ ಅವರಿಗೆ ಪಾವತಿಸಲು ಶೇ. 50 ಹಣ ನೀಡುವ ದೇಶದಲ್ಲೇ ಪ್ರಪ್ರಥಮ ಯೋಜನೆ ‘ಆಶಾದೀಪ’ ಕಾರ್ಮಿಕರ ಪಾಲಿಗೆ ಆಶಾದೀಪವಾಗಿದೆ. ಇದೇ ಮೊದಲ ಬಾರಿಗೆ ಇಲಾಖೆಯು 91 ಸಣ್ಣ ಸಣ್ಣ ಕೆಲಸ ಮಾಡುವ ಸಮುದಾಯಗಳನ್ನು ಗುರುತಿಸಿ ಸ್ಮಾರ್ಟ್ ಕಾರ್ಡ್ ನೀಡುತ್ತಿದೆ. ಅಸಂಘಟಿತ ವರ್ಗದ ಕಾರ್ಮಿಕರ ಸಾಮಾಜಿಕ ಭದ್ರತಾ ಯೋಜನೆಗಳಿಗಾಗಿ ಡೀಸೆಲ್, ಪೆಟ್ರೋಲ್ ಸೆಸ್ ನಲ್ಲಿ ಸ್ವಲ್ಪ ಪಾಲು ನೀಡಿದರೆ ಅನುಕೂಲವಾಗುತ್ತದೆ ಎಂದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ನಡೆಯುತ್ತಿವೆ. ಸರ್ಕಾರ ರೂ. 56 ಸಾವಿರ ಕೋಟಿಯಿಂದ 60 ಸಾವಿರ ಕೋಟಿವರೆಗೆ ಇದಕ್ಕಾಗಿ ಪ್ರತಿ ವರ್ಷ ವೆಚ್ಚ ಮಾಡುತ್ತಿದೆ. 83 ಸಾವಿರ ಕೋಟಿ ಅಭಿವೃದ್ಧಿಗಾಗಿ ನೀಡಿದೆ. ಶಕ್ತಿ ಯೋಜನೆಯಿಂದ ಹೆಣ್ಣು ಮಕ್ಕಳ ಓಡಾಟ ಹೆಚ್ಚಿದೆ. ಶೇ.40 ಹೆಣ್ಣು ಮಕ್ಕಳ ಪ್ರಯಾಣ ಹೆಚ್ಚಿದೆ. ಗ್ಯಾರಂಟಿ ಯೋಜನೆಗಳಡಿ ಬಡವರಿಗೆ ನೀಡುತ್ತಿರುವುದು ಉಳಿತಾಯಕ್ಕಾಗಿ ಅಲ್ಲ. ಆ ಹಣ ಸಂಪೂರ್ಣವಾಗಿ ಮತ್ತೆ ಮಾರುಕಟ್ಟೆಗೆ ವಾಪಸ್ ಬರುತ್ತಿರುವ ಕಾರಣ ರಾಜ್ಯದ ಜಿಡಿಪಿ ಭಾರತದಲ್ಲಿ ನಂ.1 ಕ್ಕೇರಿದೆ.
ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಬೇಡಿಕೆ ಈಡೇರಿಸಲು ಪ್ರಯತ್ನಿಸುತ್ತೇವೆ. ದೇಶದ ಜಿಡಿಪಿ 4ನೇ ಸ್ಥಾನದಲ್ಲಿದೆ. ರಾಜ್ಯದ ತಲಾ ಆದಾಯ ಸರಾಸರಿ ರೂ. 2 ಲಕ್ಷ ಇದೆ. ದೇಶ ಪ್ರಗತಿ ಆಗಬೇಕಾದರೆ ಪ್ರತಿಯೊಬ್ಬರ ಕೈಯಲ್ಲಿ ಹಣ ಬರಬೇಕು. ವಿವಿಧ ದೇಶಗಳ ಅಭಿವೃದ್ದಿ, ಅನ್ವೇಷಣೆ, ಸಂಶೋಧನೆ, ವಿಜ್ಞಾನಗಳ ಬಗ್ಗೆ ಚರ್ಚಿಸಬೇಕು. ಸಮಾಜ ಸುಧಾರಣೆ ನಿಟ್ಟಿನಲ್ಲಿ ಚರ್ಚೆ ಆಗಬೇಕು. ವಿಚಾರಗಳ ಬಗ್ಗೆ ವಿಮರ್ಶೆ ಆದಾಗ ಬದಲಾವಣೆ ಸಾಧ್ಯ. ರೈತರಿಗೆ ಅನುಕೂಲವಾಗುವಂತಹ ನಿರ್ಧಾರಗಳು ಆಗಬೇಕು. ಆನ್‌ಲೈನ್ ಬೆಟ್ಟಿಂಗ್ ನಿಲ್ಲಬೇಕು ಎಂದರು.

ಸಂಸದರಾದ ಬಿ.ವೈ.ರಾಘವೇಂದ್ರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು, ಸಮಾರಂಭದಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಚಿವರು ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ಮತ್ತು ಮೃತಪಟ್ಟವರ ಅವಲಂಬಿತರಿಗೆ ಚೆಕ್ ವಿತರಿಸಿದರು.

ಶಾಸಕರಾದ ಶಾರದಾ ಪೂರ್ಯಾನಾಯ್ಕ, ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಸ್.ರವಿಕುಮಾರ್, ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ, ಸೂಡಾ ಅಧ್ಯಕ್ಷ ಸುಂದರೇಶ್, ಕಾರ್ಮಿಕ ಆಯುಕ್ತರಾದ ಡಾ.ಗೋಪಾಲಕೃಷ್ಣ , ಕಾರ್ಮಿಕ ಇಲಾಖೆ ಜಂಟಿ ನಿರ್ದೇಶಕರಾದ ಡಾ.ಎಸ್.ಬಿ ರವಿಕುಮಾರ್, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿಗಳಾದ ಭಾರತಿ, ಜಿ.ಪಂ.ಸಿಇಒ ಹೇಮಂತ್. ಕಾರ್ಮಿಕ ಕಲ್ಯಾಣ ಮಂಡಳಿ ಸದಸ್ಯರು, ಜಿಲ್ಲಾ ಕಾರ್ಮಿಕ ಅಧಿಕಾರಿ, ಮುಖಂಡರು, ಕಾರ್ಮಿಕರು, ಸಾರ್ವಜನಿಕರು ಹಾಜರಿದ್ದರು.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ