B.Ed ineligible to become a primary school teacher, Supreme Court says

Court Verdict: ಕನ್ಯತ್ವ ಪರೀಕ್ಷೆ ಕೋರ್ಟ್ ಮಹತ್ವದ ಆದೇಶ

Court Verdict: ಕನ್ಯತ್ವ ಪರೀಕ್ಷೆ ಕೋರ್ಟ್ ಮಹತ್ವದ ಆದೇಶ

ಬಿಲಾಸ್ಪುರ: ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಮಹಿಳೆಯನ್ನು ಯಾವುದೇ ಕಾರಣಕ್ಕೂ ಬಲವಂತಪಡಿಸುವಂತಿಲ್ಲ ಎಂದು ಛತ್ತೀಸಗಢ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ತನ್ನ ಪತ್ನಿ ಬೇರೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಆಕೆಯನ್ನು ಕನ್ಯತ್ವ ಪರೀಕ್ಷೆಗೆ ಒಳಪಡಿಸುವಂತೆ ಕೋರಿ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ವರ್ಮಾ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಇದು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಘನತೆಯ ಹಕ್ಕಿನ ಉಲ್ಲಂಘನೆ ಎಂದು ಸ್ಪಷ್ಟವಾಗಿ ತೀರ್ಪು ನೀಡಿದೆ.

ತನ್ನ ಪತಿ ಲೈಂಗಿಕವಾಗಿ ಅಶಕ್ತನಾಗಿದ್ದು (impotent), ಸಹಜೀವನ ನಡೆಸಲು ನಿರಾಕರಿಸಿದ್ದಾನೆ ಎಂದು ಪತ್ನಿ ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಪತಿ, ಅವಳು (ಪತ್ನಿ) ತನ್ನ ಭಾವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಕನ್ಯತ್ವ ಪರೀಕ್ಷೆಗೆ ಒಳಪಡಿಸುವಂತೆ ಕೋರಿದ್ದರು.

ಅರ್ಜಿದಾರರು ತಮ್ಮ ಮೇಲಿನ ಆರೋಪಗಳು ಆಧಾರ ರಹಿತವೆಂದು ಸಾಬೀತುಪಡಿಸಲು ಬಯಸಿದರೆ, ಅವರು ಸಂಬಂಧಪಟ್ಟ ವೈದ್ಯಕೀಯ ಪರೀಕ್ಷೆಗೆ ಒಳಗಾಗಬಹುದು ಅಥವಾ ಯಾವುದೇ ಇತರ ಸಾಕ್ಷಿಗಳನ್ನು ನೀಡಬಹುದು. ಆದರೆ ಕನ್ಯತ್ವ ಪರೀಕ್ಷೆಗೆ ಒಳಪಡಿಸುವುದು ಸಂವಿಧಾನ ಬಾಹಿರವಾಗಿದೆ. ಏಕೆಂದರೆ ಇದು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಘನತೆಯ ಹಕ್ಕಿನ ಉಲ್ಲಂಘನೆ ಎಂದು ಹೈಕೋರ್ಟ್ ಹೇಳಿದೆ.

ಭಾರತದ ಸಂವಿಧಾನದ 21ನೇ ವಿಧಿಯು ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ಮಾತ್ರವಲ್ಲದೆ ಮಹಿಳೆಯರಿಗೆ ಘನತೆಯಿಂದ ಜೀವನ ನಡೆಸುವ ಹಕ್ಕನ್ನು ಸಹ ಖಾತರಿಪಡಿಸುತ್ತದೆ. ಯಾವುದೇ ಮಹಿಳೆಯನ್ನು ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಬಲವಂತಪಡಿಸುವಂತಿಲ್ಲ. ಸಂವಿಧಾನದ 21ನೇ ವಿಧಿ ‘ಮೂಲಭೂತ ಹಕ್ಕುಗಳ ಹೃದಯ’ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ಎಂದು ನ್ಯಾಯಮೂರ್ತಿ ವರ್ಮಾ ಅವರಿದ್ದ ಪೀಠ ಹೇಳಿದೆ.

ಎರಡೂ ಕಡೆಯವರು (ಪತಿ-ಪತ್ನಿ) ಪರಸ್ಪರ ಮಾಡಿರುವ ಆರೋಪಗಳು ಸಾಕ್ಷ್ಯಾಧಾರಗಳ ವಿಷಯವಾಗಿದೆ. ಸಾಕ್ಷ್ಯಾಧಾರಗಳ ಪರಿಶೀಲನೆಯ ನಂತರವೇ ತೀರ್ಮಾನಕ್ಕೆ ಬರಬಹುದು ಎಂದು ಕೋರ್ಟ್‌ ಹೇಳಿದೆ.

2023ರ ಏಪ್ರಿಲ್ 30ರಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ತನ್ನ ಪತಿ ಲೈಂಗಿಕವಾಗಿ ಅಶಕ್ತನೆಂದು ಕುಟುಂಬಸ್ಥರಿಗೆ ಹೇಳಿದ್ದ ಪತ್ನಿ ಆತನೊಂದಿಗೆ ವೈವಾಹಿಕ ಸಂಬಂಧ ಮುಂದುವರಿಸಲು ನಿರಾಕರಿಸಿದ್ದಳು.

ಅಲ್ಲದೇ 2024ರ ಜುಲೈ 2ರಂದು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಸೆಕ್ಷನ್ 144 ರ ಅಡಿಯಲ್ಲಿ ರಾಯಗಢ ಜಿಲ್ಲೆಯ ಕುಟುಂಬ ನ್ಯಾಯಾಲಯದಲ್ಲಿ ₹20,000 ಜೀವನಾಂಶವನ್ನು ಕೋರಿ ಅರ್ಜಿಯನ್ನು ಸಲ್ಲಿಸಿದರು.

ಜೀವನಾಂಶ ಅರ್ಜಿಗೆ ಪ್ರತಿಕ್ರಿಯೆಯಾಗಿ ಪತಿ, ಆಕೆ(ಪತ್ನಿ) ತನ್ನ ಭಾವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಕೋರಿದ್ದರು.

2024ರ ಅಕ್ಟೋಬರ್ 15ರಂದು, ರಾಯಗಢದ ಕೌಟುಂಬಿಕ ನ್ಯಾಯಾಲಯವು ಪತಿಯ ವಿನಂತಿಯನ್ನು ತಿರಸ್ಕರಿಸಿತ್ತು. ಬಳಿಕ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಇದನ್ನೂ ಓದಿ: Death: 10 ಸಾವಿರ ಮಂದಿ ದುರ್ಮರಣ!

Latest News

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕು ಯರಗಲ್ ಗ್ರಾಮದಲ್ಲಿ ಸನ್ 2025-26ನೆ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಯರಗಲ್ ಗ್ರಾಮದಿಂದ ದೇವೂರ ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಹಿಂದಿನ ಸರ್ಕಾರದವರು ಆರ್ಥಿಕ ಶಿಸ್ತು ಕಾಪಾಡದೇ ಮನಬಂದOತೆ ಬಾಕಿ ಉಳಿಸಿ ಹೋಗಿದ್ದರಿಂದ ನಮ್ಮ ಸರ್ಕಾರದ ಅವಧಿಯಲ್ಲಿ ಅದನ್ನು ಪಾವತಿಸುವ ಕೆಲಸ ಆಗಿದೆ.ಶಾಸಕರಿಗೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಯಶಸ್ಸು ಸಾಧ್ಯವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು. ಪಟ್ಟಣದ ವಿದ್ಯಾಚೇತನ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಪಾಲಕರು ಹಾಗೂ ಶಿಕ್ಷಕರು ಮಕ್ಕಳಲ್ಲಿರುವ ಸೂಕ್ತವಾದ ಪ್ರತಿಭೆಯನ್ನು ಗುರುತಿಸಿ ಪೂರಕವಾದ ಶೈಕ್ಷಣಿಕ ವಾತಾವರಣ ಸೃಷ್ಟಿಸಬೇಕು. ಶಿಕ್ಷಕರು ಮಗುವಿನ ಮೌಲ್ಯಮಾಪನ ಕಾರ್ಯ ನಿರಂತರ ಮಾಡಬೇಕು ಎಂದರು. ಕುAಟೋಜಿ