B.Ed ineligible to become a primary school teacher, Supreme Court says

Court Verdict: ಕನ್ಯತ್ವ ಪರೀಕ್ಷೆ ಕೋರ್ಟ್ ಮಹತ್ವದ ಆದೇಶ

Court Verdict: ಕನ್ಯತ್ವ ಪರೀಕ್ಷೆ ಕೋರ್ಟ್ ಮಹತ್ವದ ಆದೇಶ

ಬಿಲಾಸ್ಪುರ: ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಮಹಿಳೆಯನ್ನು ಯಾವುದೇ ಕಾರಣಕ್ಕೂ ಬಲವಂತಪಡಿಸುವಂತಿಲ್ಲ ಎಂದು ಛತ್ತೀಸಗಢ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ತನ್ನ ಪತ್ನಿ ಬೇರೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಆಕೆಯನ್ನು ಕನ್ಯತ್ವ ಪರೀಕ್ಷೆಗೆ ಒಳಪಡಿಸುವಂತೆ ಕೋರಿ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ವರ್ಮಾ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಇದು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಘನತೆಯ ಹಕ್ಕಿನ ಉಲ್ಲಂಘನೆ ಎಂದು ಸ್ಪಷ್ಟವಾಗಿ ತೀರ್ಪು ನೀಡಿದೆ.

ತನ್ನ ಪತಿ ಲೈಂಗಿಕವಾಗಿ ಅಶಕ್ತನಾಗಿದ್ದು (impotent), ಸಹಜೀವನ ನಡೆಸಲು ನಿರಾಕರಿಸಿದ್ದಾನೆ ಎಂದು ಪತ್ನಿ ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಪತಿ, ಅವಳು (ಪತ್ನಿ) ತನ್ನ ಭಾವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಕನ್ಯತ್ವ ಪರೀಕ್ಷೆಗೆ ಒಳಪಡಿಸುವಂತೆ ಕೋರಿದ್ದರು.

ಅರ್ಜಿದಾರರು ತಮ್ಮ ಮೇಲಿನ ಆರೋಪಗಳು ಆಧಾರ ರಹಿತವೆಂದು ಸಾಬೀತುಪಡಿಸಲು ಬಯಸಿದರೆ, ಅವರು ಸಂಬಂಧಪಟ್ಟ ವೈದ್ಯಕೀಯ ಪರೀಕ್ಷೆಗೆ ಒಳಗಾಗಬಹುದು ಅಥವಾ ಯಾವುದೇ ಇತರ ಸಾಕ್ಷಿಗಳನ್ನು ನೀಡಬಹುದು. ಆದರೆ ಕನ್ಯತ್ವ ಪರೀಕ್ಷೆಗೆ ಒಳಪಡಿಸುವುದು ಸಂವಿಧಾನ ಬಾಹಿರವಾಗಿದೆ. ಏಕೆಂದರೆ ಇದು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಘನತೆಯ ಹಕ್ಕಿನ ಉಲ್ಲಂಘನೆ ಎಂದು ಹೈಕೋರ್ಟ್ ಹೇಳಿದೆ.

ಭಾರತದ ಸಂವಿಧಾನದ 21ನೇ ವಿಧಿಯು ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ಮಾತ್ರವಲ್ಲದೆ ಮಹಿಳೆಯರಿಗೆ ಘನತೆಯಿಂದ ಜೀವನ ನಡೆಸುವ ಹಕ್ಕನ್ನು ಸಹ ಖಾತರಿಪಡಿಸುತ್ತದೆ. ಯಾವುದೇ ಮಹಿಳೆಯನ್ನು ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಬಲವಂತಪಡಿಸುವಂತಿಲ್ಲ. ಸಂವಿಧಾನದ 21ನೇ ವಿಧಿ ‘ಮೂಲಭೂತ ಹಕ್ಕುಗಳ ಹೃದಯ’ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ಎಂದು ನ್ಯಾಯಮೂರ್ತಿ ವರ್ಮಾ ಅವರಿದ್ದ ಪೀಠ ಹೇಳಿದೆ.

ಎರಡೂ ಕಡೆಯವರು (ಪತಿ-ಪತ್ನಿ) ಪರಸ್ಪರ ಮಾಡಿರುವ ಆರೋಪಗಳು ಸಾಕ್ಷ್ಯಾಧಾರಗಳ ವಿಷಯವಾಗಿದೆ. ಸಾಕ್ಷ್ಯಾಧಾರಗಳ ಪರಿಶೀಲನೆಯ ನಂತರವೇ ತೀರ್ಮಾನಕ್ಕೆ ಬರಬಹುದು ಎಂದು ಕೋರ್ಟ್‌ ಹೇಳಿದೆ.

2023ರ ಏಪ್ರಿಲ್ 30ರಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ತನ್ನ ಪತಿ ಲೈಂಗಿಕವಾಗಿ ಅಶಕ್ತನೆಂದು ಕುಟುಂಬಸ್ಥರಿಗೆ ಹೇಳಿದ್ದ ಪತ್ನಿ ಆತನೊಂದಿಗೆ ವೈವಾಹಿಕ ಸಂಬಂಧ ಮುಂದುವರಿಸಲು ನಿರಾಕರಿಸಿದ್ದಳು.

ಅಲ್ಲದೇ 2024ರ ಜುಲೈ 2ರಂದು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಸೆಕ್ಷನ್ 144 ರ ಅಡಿಯಲ್ಲಿ ರಾಯಗಢ ಜಿಲ್ಲೆಯ ಕುಟುಂಬ ನ್ಯಾಯಾಲಯದಲ್ಲಿ ₹20,000 ಜೀವನಾಂಶವನ್ನು ಕೋರಿ ಅರ್ಜಿಯನ್ನು ಸಲ್ಲಿಸಿದರು.

ಜೀವನಾಂಶ ಅರ್ಜಿಗೆ ಪ್ರತಿಕ್ರಿಯೆಯಾಗಿ ಪತಿ, ಆಕೆ(ಪತ್ನಿ) ತನ್ನ ಭಾವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಕೋರಿದ್ದರು.

2024ರ ಅಕ್ಟೋಬರ್ 15ರಂದು, ರಾಯಗಢದ ಕೌಟುಂಬಿಕ ನ್ಯಾಯಾಲಯವು ಪತಿಯ ವಿನಂತಿಯನ್ನು ತಿರಸ್ಕರಿಸಿತ್ತು. ಬಳಿಕ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಇದನ್ನೂ ಓದಿ: Death: 10 ಸಾವಿರ ಮಂದಿ ದುರ್ಮರಣ!

Latest News

ಸುಡುಗಾಡ ಸಿದ್ಧರ ಕುಟುಂಬಗಳಿಗೆ ನೆರವು:                         ಸಿಎಂ ಪರಿಹಾರ ನಿಧಿಯಿಂದ ಆರು ಲಕ್ಷ ರೂ. ಪರಿಹಾರ ಧನ ಬಿಡುಗಡೆ

ಸುಡುಗಾಡ ಸಿದ್ಧರ ಕುಟುಂಬಗಳಿಗೆ ನೆರವು: ಸಿಎಂ ಪರಿಹಾರ ನಿಧಿಯಿಂದ ಆರು ಲಕ್ಷ ರೂ. ಪರಿಹಾರ ಧನ ಬಿಡುಗಡೆ

ಮುದ್ದೇಬಿಹಾಳ : ತಾಲ್ಲೂಕಿನ ಶಿರೋಳ ಗ್ರಾಮದ ಹತ್ತಿರ ಕಾಲುವೆಯಲ್ಲಿ ನ.11, 2025ರಂದು ಒಂದೇ ಕುಟುಂಬದ

ಶಿವರಾತ್ರಿ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ:               ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಿ-ಕಾಶೀಬಾಯಿ ರಾಂಪೂರ

ಶಿವರಾತ್ರಿ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ: ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಸಮಾಜದಲ್ಲಿ ಸಾಕಷ್ಟು ಜನ ಸಂಪತ್ತು ಹೊಂದಿದವರಿದ್ದಾರೆ.ಆದರೆ ಕೊಡುವ ಮನಸ್ಸು ಎಲ್ಲರಲ್ಲೂ ಇರುವುದಿಲ್ಲ.ನಿಸ್ವಾರ್ಥದಿಂದ

ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಮಾಡಿದ ಮೋಮಿನ: ಮುದ್ದೇಬಿಹಾಳ : ಸಂತೆ ಕರ 15 ಲಕ್ಷ ರೂ.ಗೆ ಹರಾಜು

ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಮಾಡಿದ ಮೋಮಿನ: ಮುದ್ದೇಬಿಹಾಳ : ಸಂತೆ ಕರ 15 ಲಕ್ಷ ರೂ.ಗೆ ಹರಾಜು

ಮುದ್ದೇಬಿಹಾಳ : ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿರುವ ಜಾಗೆಯಲ್ಲಿ ದೈನಂದಿನ ಸಂತೆ ಕರ ವಸೂಲಿಗಾಗಿ ಮಂಗಳವಾರ

‘ರಾಷ್ಟ್ರದ್ವಜ ಹಿಡಿದು ಶತ್ರು ಸಂಹಾರ ಮಾಡ್ತೀನಿ,ಇಲ್ಲಂದ್ರೆ ಮೈಮೇಲೆ ಅದೇ ಧ್ವಜ ಹೊತ್ತು ಬರ‍್ತೀನಿ’

‘ರಾಷ್ಟ್ರದ್ವಜ ಹಿಡಿದು ಶತ್ರು ಸಂಹಾರ ಮಾಡ್ತೀನಿ,ಇಲ್ಲಂದ್ರೆ ಮೈಮೇಲೆ ಅದೇ ಧ್ವಜ ಹೊತ್ತು ಬರ‍್ತೀನಿ’

ಮುದ್ದೇಬಿಹಾಳ : ನಾನು ಸೈನ್ಯಕ್ಕೆ ಸೇರುತ್ತಿದ್ದಂತೆ ನನ್ನ ತಾಯಿ ‘ನೀ ಹೆಣ್ಣು ಮಗಳಾಗಿ ಗಡಿ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ ನಿಂತುಕೊoಡು ಈಶ್ವರ ಲಿಂಗದ ದರ್ಶನ ಪಡೆದುಕೊಂಡು ಪುನೀತರಾದರು. ದಿನವೀಡಿ ಉಪವಾಸ ವ್ರತ ಆಚರಿಸಿದ ಶಿವನ ಆರಾಧಕರು ಸಂಜೆ ವೇಳೆ ವಿವಿಧ ವಿಶೇಷ ಖಾದ್ಯಗಳನ್ನು ತಯಾರಿಸಿ ಶಿವಲಿಂಗಕ್ಕೆ ನೈವೇದ್ಯ ಅರ್ಪಿಸಿ ಉಪವಾಸ ವ್ರತ ಅಂತ್ಯಗೊಳಿಸಿದರು. ಪಟ್ಟಣದ ಕಿಲ್ಲಾದ ಹಳೇ ಈಶ್ವರಲಿಂಗ ದೇವಸ್ಥಾನ, ವಿಜಯ ವಿಠ್ಠಲ ಮಂದಿರ,ಕಾಶೀ ವಿಶ್ವನಾಥ ದೇವಸ್ಥಾನ,ಮರುಳಸಿದ್ದಪ್ಪನ ಗುಡಿ, ಹಳೇ ಕೋರ್ಟ್ ಆವರಣದಲ್ಲಿರುವ ಈಶ್ವರ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ:            ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ ಕಾಲು ಹಿಡಿದು ಜಗ್ಗುವವರು ಬಹಳ ಜನ ಇದ್ದಾರೆ.ಆದರೆ ಶಿಕ್ಷಣಕ್ಕಾಗಿ ಪ್ರಭುಗೌಡ ದೇಸಾಯಿ ಅವರಂತಹವರು ಜಮೀನು ಕೊಟ್ಟು ಮತ್ತೊಬ್ಬರನ್ನು ಬೆಳೆಸುವಂತವರು ವಿರಳ ಜನ ಇದ್ದಾರೆ.ಅವರು ನಿಜವಾದ ದೈವಿಯ ಗುಣ ಹೊಂದಿದವರು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ಶನಿವಾರ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನ ನೂತನ ಕಟ್ಟಡವನ್ನು ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸಿ ಅವರು ಮಾತನಾಡಿದರು.