B.Ed ineligible to become a primary school teacher, Supreme Court says

Court Verdict: ಕನ್ಯತ್ವ ಪರೀಕ್ಷೆ ಕೋರ್ಟ್ ಮಹತ್ವದ ಆದೇಶ

Court Verdict: ಕನ್ಯತ್ವ ಪರೀಕ್ಷೆ ಕೋರ್ಟ್ ಮಹತ್ವದ ಆದೇಶ

ಬಿಲಾಸ್ಪುರ: ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಮಹಿಳೆಯನ್ನು ಯಾವುದೇ ಕಾರಣಕ್ಕೂ ಬಲವಂತಪಡಿಸುವಂತಿಲ್ಲ ಎಂದು ಛತ್ತೀಸಗಢ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ತನ್ನ ಪತ್ನಿ ಬೇರೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಆಕೆಯನ್ನು ಕನ್ಯತ್ವ ಪರೀಕ್ಷೆಗೆ ಒಳಪಡಿಸುವಂತೆ ಕೋರಿ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ವರ್ಮಾ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಇದು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಘನತೆಯ ಹಕ್ಕಿನ ಉಲ್ಲಂಘನೆ ಎಂದು ಸ್ಪಷ್ಟವಾಗಿ ತೀರ್ಪು ನೀಡಿದೆ.

ತನ್ನ ಪತಿ ಲೈಂಗಿಕವಾಗಿ ಅಶಕ್ತನಾಗಿದ್ದು (impotent), ಸಹಜೀವನ ನಡೆಸಲು ನಿರಾಕರಿಸಿದ್ದಾನೆ ಎಂದು ಪತ್ನಿ ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಪತಿ, ಅವಳು (ಪತ್ನಿ) ತನ್ನ ಭಾವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಕನ್ಯತ್ವ ಪರೀಕ್ಷೆಗೆ ಒಳಪಡಿಸುವಂತೆ ಕೋರಿದ್ದರು.

ಅರ್ಜಿದಾರರು ತಮ್ಮ ಮೇಲಿನ ಆರೋಪಗಳು ಆಧಾರ ರಹಿತವೆಂದು ಸಾಬೀತುಪಡಿಸಲು ಬಯಸಿದರೆ, ಅವರು ಸಂಬಂಧಪಟ್ಟ ವೈದ್ಯಕೀಯ ಪರೀಕ್ಷೆಗೆ ಒಳಗಾಗಬಹುದು ಅಥವಾ ಯಾವುದೇ ಇತರ ಸಾಕ್ಷಿಗಳನ್ನು ನೀಡಬಹುದು. ಆದರೆ ಕನ್ಯತ್ವ ಪರೀಕ್ಷೆಗೆ ಒಳಪಡಿಸುವುದು ಸಂವಿಧಾನ ಬಾಹಿರವಾಗಿದೆ. ಏಕೆಂದರೆ ಇದು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಘನತೆಯ ಹಕ್ಕಿನ ಉಲ್ಲಂಘನೆ ಎಂದು ಹೈಕೋರ್ಟ್ ಹೇಳಿದೆ.

ಭಾರತದ ಸಂವಿಧಾನದ 21ನೇ ವಿಧಿಯು ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ಮಾತ್ರವಲ್ಲದೆ ಮಹಿಳೆಯರಿಗೆ ಘನತೆಯಿಂದ ಜೀವನ ನಡೆಸುವ ಹಕ್ಕನ್ನು ಸಹ ಖಾತರಿಪಡಿಸುತ್ತದೆ. ಯಾವುದೇ ಮಹಿಳೆಯನ್ನು ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಬಲವಂತಪಡಿಸುವಂತಿಲ್ಲ. ಸಂವಿಧಾನದ 21ನೇ ವಿಧಿ ‘ಮೂಲಭೂತ ಹಕ್ಕುಗಳ ಹೃದಯ’ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ಎಂದು ನ್ಯಾಯಮೂರ್ತಿ ವರ್ಮಾ ಅವರಿದ್ದ ಪೀಠ ಹೇಳಿದೆ.

ಎರಡೂ ಕಡೆಯವರು (ಪತಿ-ಪತ್ನಿ) ಪರಸ್ಪರ ಮಾಡಿರುವ ಆರೋಪಗಳು ಸಾಕ್ಷ್ಯಾಧಾರಗಳ ವಿಷಯವಾಗಿದೆ. ಸಾಕ್ಷ್ಯಾಧಾರಗಳ ಪರಿಶೀಲನೆಯ ನಂತರವೇ ತೀರ್ಮಾನಕ್ಕೆ ಬರಬಹುದು ಎಂದು ಕೋರ್ಟ್‌ ಹೇಳಿದೆ.

2023ರ ಏಪ್ರಿಲ್ 30ರಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ತನ್ನ ಪತಿ ಲೈಂಗಿಕವಾಗಿ ಅಶಕ್ತನೆಂದು ಕುಟುಂಬಸ್ಥರಿಗೆ ಹೇಳಿದ್ದ ಪತ್ನಿ ಆತನೊಂದಿಗೆ ವೈವಾಹಿಕ ಸಂಬಂಧ ಮುಂದುವರಿಸಲು ನಿರಾಕರಿಸಿದ್ದಳು.

ಅಲ್ಲದೇ 2024ರ ಜುಲೈ 2ರಂದು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಸೆಕ್ಷನ್ 144 ರ ಅಡಿಯಲ್ಲಿ ರಾಯಗಢ ಜಿಲ್ಲೆಯ ಕುಟುಂಬ ನ್ಯಾಯಾಲಯದಲ್ಲಿ ₹20,000 ಜೀವನಾಂಶವನ್ನು ಕೋರಿ ಅರ್ಜಿಯನ್ನು ಸಲ್ಲಿಸಿದರು.

ಜೀವನಾಂಶ ಅರ್ಜಿಗೆ ಪ್ರತಿಕ್ರಿಯೆಯಾಗಿ ಪತಿ, ಆಕೆ(ಪತ್ನಿ) ತನ್ನ ಭಾವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಕೋರಿದ್ದರು.

2024ರ ಅಕ್ಟೋಬರ್ 15ರಂದು, ರಾಯಗಢದ ಕೌಟುಂಬಿಕ ನ್ಯಾಯಾಲಯವು ಪತಿಯ ವಿನಂತಿಯನ್ನು ತಿರಸ್ಕರಿಸಿತ್ತು. ಬಳಿಕ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಇದನ್ನೂ ಓದಿ: Death: 10 ಸಾವಿರ ಮಂದಿ ದುರ್ಮರಣ!

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ