B.Ed ineligible to become a primary school teacher, Supreme Court says

Court Verdict: ಕನ್ಯತ್ವ ಪರೀಕ್ಷೆ ಕೋರ್ಟ್ ಮಹತ್ವದ ಆದೇಶ

Court Verdict: ಕನ್ಯತ್ವ ಪರೀಕ್ಷೆ ಕೋರ್ಟ್ ಮಹತ್ವದ ಆದೇಶ

ಬಿಲಾಸ್ಪುರ: ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಮಹಿಳೆಯನ್ನು ಯಾವುದೇ ಕಾರಣಕ್ಕೂ ಬಲವಂತಪಡಿಸುವಂತಿಲ್ಲ ಎಂದು ಛತ್ತೀಸಗಢ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ತನ್ನ ಪತ್ನಿ ಬೇರೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಆಕೆಯನ್ನು ಕನ್ಯತ್ವ ಪರೀಕ್ಷೆಗೆ ಒಳಪಡಿಸುವಂತೆ ಕೋರಿ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ವರ್ಮಾ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಇದು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಘನತೆಯ ಹಕ್ಕಿನ ಉಲ್ಲಂಘನೆ ಎಂದು ಸ್ಪಷ್ಟವಾಗಿ ತೀರ್ಪು ನೀಡಿದೆ.

ತನ್ನ ಪತಿ ಲೈಂಗಿಕವಾಗಿ ಅಶಕ್ತನಾಗಿದ್ದು (impotent), ಸಹಜೀವನ ನಡೆಸಲು ನಿರಾಕರಿಸಿದ್ದಾನೆ ಎಂದು ಪತ್ನಿ ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಪತಿ, ಅವಳು (ಪತ್ನಿ) ತನ್ನ ಭಾವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಕನ್ಯತ್ವ ಪರೀಕ್ಷೆಗೆ ಒಳಪಡಿಸುವಂತೆ ಕೋರಿದ್ದರು.

ಅರ್ಜಿದಾರರು ತಮ್ಮ ಮೇಲಿನ ಆರೋಪಗಳು ಆಧಾರ ರಹಿತವೆಂದು ಸಾಬೀತುಪಡಿಸಲು ಬಯಸಿದರೆ, ಅವರು ಸಂಬಂಧಪಟ್ಟ ವೈದ್ಯಕೀಯ ಪರೀಕ್ಷೆಗೆ ಒಳಗಾಗಬಹುದು ಅಥವಾ ಯಾವುದೇ ಇತರ ಸಾಕ್ಷಿಗಳನ್ನು ನೀಡಬಹುದು. ಆದರೆ ಕನ್ಯತ್ವ ಪರೀಕ್ಷೆಗೆ ಒಳಪಡಿಸುವುದು ಸಂವಿಧಾನ ಬಾಹಿರವಾಗಿದೆ. ಏಕೆಂದರೆ ಇದು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಘನತೆಯ ಹಕ್ಕಿನ ಉಲ್ಲಂಘನೆ ಎಂದು ಹೈಕೋರ್ಟ್ ಹೇಳಿದೆ.

ಭಾರತದ ಸಂವಿಧಾನದ 21ನೇ ವಿಧಿಯು ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ಮಾತ್ರವಲ್ಲದೆ ಮಹಿಳೆಯರಿಗೆ ಘನತೆಯಿಂದ ಜೀವನ ನಡೆಸುವ ಹಕ್ಕನ್ನು ಸಹ ಖಾತರಿಪಡಿಸುತ್ತದೆ. ಯಾವುದೇ ಮಹಿಳೆಯನ್ನು ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಬಲವಂತಪಡಿಸುವಂತಿಲ್ಲ. ಸಂವಿಧಾನದ 21ನೇ ವಿಧಿ ‘ಮೂಲಭೂತ ಹಕ್ಕುಗಳ ಹೃದಯ’ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ಎಂದು ನ್ಯಾಯಮೂರ್ತಿ ವರ್ಮಾ ಅವರಿದ್ದ ಪೀಠ ಹೇಳಿದೆ.

ಎರಡೂ ಕಡೆಯವರು (ಪತಿ-ಪತ್ನಿ) ಪರಸ್ಪರ ಮಾಡಿರುವ ಆರೋಪಗಳು ಸಾಕ್ಷ್ಯಾಧಾರಗಳ ವಿಷಯವಾಗಿದೆ. ಸಾಕ್ಷ್ಯಾಧಾರಗಳ ಪರಿಶೀಲನೆಯ ನಂತರವೇ ತೀರ್ಮಾನಕ್ಕೆ ಬರಬಹುದು ಎಂದು ಕೋರ್ಟ್‌ ಹೇಳಿದೆ.

2023ರ ಏಪ್ರಿಲ್ 30ರಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ತನ್ನ ಪತಿ ಲೈಂಗಿಕವಾಗಿ ಅಶಕ್ತನೆಂದು ಕುಟುಂಬಸ್ಥರಿಗೆ ಹೇಳಿದ್ದ ಪತ್ನಿ ಆತನೊಂದಿಗೆ ವೈವಾಹಿಕ ಸಂಬಂಧ ಮುಂದುವರಿಸಲು ನಿರಾಕರಿಸಿದ್ದಳು.

ಅಲ್ಲದೇ 2024ರ ಜುಲೈ 2ರಂದು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಸೆಕ್ಷನ್ 144 ರ ಅಡಿಯಲ್ಲಿ ರಾಯಗಢ ಜಿಲ್ಲೆಯ ಕುಟುಂಬ ನ್ಯಾಯಾಲಯದಲ್ಲಿ ₹20,000 ಜೀವನಾಂಶವನ್ನು ಕೋರಿ ಅರ್ಜಿಯನ್ನು ಸಲ್ಲಿಸಿದರು.

ಜೀವನಾಂಶ ಅರ್ಜಿಗೆ ಪ್ರತಿಕ್ರಿಯೆಯಾಗಿ ಪತಿ, ಆಕೆ(ಪತ್ನಿ) ತನ್ನ ಭಾವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಕೋರಿದ್ದರು.

2024ರ ಅಕ್ಟೋಬರ್ 15ರಂದು, ರಾಯಗಢದ ಕೌಟುಂಬಿಕ ನ್ಯಾಯಾಲಯವು ಪತಿಯ ವಿನಂತಿಯನ್ನು ತಿರಸ್ಕರಿಸಿತ್ತು. ಬಳಿಕ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಇದನ್ನೂ ಓದಿ: Death: 10 ಸಾವಿರ ಮಂದಿ ದುರ್ಮರಣ!

Latest News

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ ಸ್ಥಾಪಿಸುವ ಯತ್ನ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ,ಕಮೀಟಿಗೆ ಸ್ಪರ್ಧಿಸಿರುವ ಅಬ್ದುಲಗಫೂರ ಮಕಾನದಾರ ಹೇಳಿದರು. ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1936ರಲ್ಲಿ ಇಲ್ಲಿನ ಅಂಜುಮನ್ ಸಂಸ್ಥೆಯನ್ನು ಹಿರಿಯರು ಹುಟ್ಟು ಹಾಕಿದ್ದಾರೆ.ಅಂಜುಮನ್ ಸಂಸ್ಥೆಯ ಬೆಳವಣಿಗೆಯಲ್ಲಿ ಹಿಂದೂ ಬಾಂಧವರ ಸಹಕಾರವೂ ಇತ್ತು.ಆದರೆ ಕಾರಣಾಂತರಗಳಿAದ ಸಂಸ್ಥೆಯ ಅಭಿವೃದ್ಧಿ ಕುಂಠಿತಗoಡಿದೆ. ಹೊಸಬರು,ಒಳ್ಳೆಯವರ ಆಯ್ಕೆಗೆ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ.ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಆಗ್ರಹಿಸಿದರು. ಬಿಜೆಪಿ ನಿಯೋಗದಿಂದ ಬರ ಅಧ್ಯಯನ ಪ್ರವಾಸ ನಡೆಸುವ ಮುನ್ನ ತಾಲ್ಲೂಕಿನ ಕುಂಟೋಜಿ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ರೈತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೇವಲ ಕೇಂದ್ರದತ್ತ ಬೆರಳು ಮಾಡದೇ