B.Ed ineligible to become a primary school teacher, Supreme Court says

Court Verdict: ಕನ್ಯತ್ವ ಪರೀಕ್ಷೆ ಕೋರ್ಟ್ ಮಹತ್ವದ ಆದೇಶ

Court Verdict: ಕನ್ಯತ್ವ ಪರೀಕ್ಷೆ ಕೋರ್ಟ್ ಮಹತ್ವದ ಆದೇಶ

ಬಿಲಾಸ್ಪುರ: ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಮಹಿಳೆಯನ್ನು ಯಾವುದೇ ಕಾರಣಕ್ಕೂ ಬಲವಂತಪಡಿಸುವಂತಿಲ್ಲ ಎಂದು ಛತ್ತೀಸಗಢ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ತನ್ನ ಪತ್ನಿ ಬೇರೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಆಕೆಯನ್ನು ಕನ್ಯತ್ವ ಪರೀಕ್ಷೆಗೆ ಒಳಪಡಿಸುವಂತೆ ಕೋರಿ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ವರ್ಮಾ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಇದು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಘನತೆಯ ಹಕ್ಕಿನ ಉಲ್ಲಂಘನೆ ಎಂದು ಸ್ಪಷ್ಟವಾಗಿ ತೀರ್ಪು ನೀಡಿದೆ.

ತನ್ನ ಪತಿ ಲೈಂಗಿಕವಾಗಿ ಅಶಕ್ತನಾಗಿದ್ದು (impotent), ಸಹಜೀವನ ನಡೆಸಲು ನಿರಾಕರಿಸಿದ್ದಾನೆ ಎಂದು ಪತ್ನಿ ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಪತಿ, ಅವಳು (ಪತ್ನಿ) ತನ್ನ ಭಾವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಕನ್ಯತ್ವ ಪರೀಕ್ಷೆಗೆ ಒಳಪಡಿಸುವಂತೆ ಕೋರಿದ್ದರು.

ಅರ್ಜಿದಾರರು ತಮ್ಮ ಮೇಲಿನ ಆರೋಪಗಳು ಆಧಾರ ರಹಿತವೆಂದು ಸಾಬೀತುಪಡಿಸಲು ಬಯಸಿದರೆ, ಅವರು ಸಂಬಂಧಪಟ್ಟ ವೈದ್ಯಕೀಯ ಪರೀಕ್ಷೆಗೆ ಒಳಗಾಗಬಹುದು ಅಥವಾ ಯಾವುದೇ ಇತರ ಸಾಕ್ಷಿಗಳನ್ನು ನೀಡಬಹುದು. ಆದರೆ ಕನ್ಯತ್ವ ಪರೀಕ್ಷೆಗೆ ಒಳಪಡಿಸುವುದು ಸಂವಿಧಾನ ಬಾಹಿರವಾಗಿದೆ. ಏಕೆಂದರೆ ಇದು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಘನತೆಯ ಹಕ್ಕಿನ ಉಲ್ಲಂಘನೆ ಎಂದು ಹೈಕೋರ್ಟ್ ಹೇಳಿದೆ.

ಭಾರತದ ಸಂವಿಧಾನದ 21ನೇ ವಿಧಿಯು ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ಮಾತ್ರವಲ್ಲದೆ ಮಹಿಳೆಯರಿಗೆ ಘನತೆಯಿಂದ ಜೀವನ ನಡೆಸುವ ಹಕ್ಕನ್ನು ಸಹ ಖಾತರಿಪಡಿಸುತ್ತದೆ. ಯಾವುದೇ ಮಹಿಳೆಯನ್ನು ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಬಲವಂತಪಡಿಸುವಂತಿಲ್ಲ. ಸಂವಿಧಾನದ 21ನೇ ವಿಧಿ ‘ಮೂಲಭೂತ ಹಕ್ಕುಗಳ ಹೃದಯ’ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ಎಂದು ನ್ಯಾಯಮೂರ್ತಿ ವರ್ಮಾ ಅವರಿದ್ದ ಪೀಠ ಹೇಳಿದೆ.

ಎರಡೂ ಕಡೆಯವರು (ಪತಿ-ಪತ್ನಿ) ಪರಸ್ಪರ ಮಾಡಿರುವ ಆರೋಪಗಳು ಸಾಕ್ಷ್ಯಾಧಾರಗಳ ವಿಷಯವಾಗಿದೆ. ಸಾಕ್ಷ್ಯಾಧಾರಗಳ ಪರಿಶೀಲನೆಯ ನಂತರವೇ ತೀರ್ಮಾನಕ್ಕೆ ಬರಬಹುದು ಎಂದು ಕೋರ್ಟ್‌ ಹೇಳಿದೆ.

2023ರ ಏಪ್ರಿಲ್ 30ರಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ತನ್ನ ಪತಿ ಲೈಂಗಿಕವಾಗಿ ಅಶಕ್ತನೆಂದು ಕುಟುಂಬಸ್ಥರಿಗೆ ಹೇಳಿದ್ದ ಪತ್ನಿ ಆತನೊಂದಿಗೆ ವೈವಾಹಿಕ ಸಂಬಂಧ ಮುಂದುವರಿಸಲು ನಿರಾಕರಿಸಿದ್ದಳು.

ಅಲ್ಲದೇ 2024ರ ಜುಲೈ 2ರಂದು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಸೆಕ್ಷನ್ 144 ರ ಅಡಿಯಲ್ಲಿ ರಾಯಗಢ ಜಿಲ್ಲೆಯ ಕುಟುಂಬ ನ್ಯಾಯಾಲಯದಲ್ಲಿ ₹20,000 ಜೀವನಾಂಶವನ್ನು ಕೋರಿ ಅರ್ಜಿಯನ್ನು ಸಲ್ಲಿಸಿದರು.

ಜೀವನಾಂಶ ಅರ್ಜಿಗೆ ಪ್ರತಿಕ್ರಿಯೆಯಾಗಿ ಪತಿ, ಆಕೆ(ಪತ್ನಿ) ತನ್ನ ಭಾವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಕೋರಿದ್ದರು.

2024ರ ಅಕ್ಟೋಬರ್ 15ರಂದು, ರಾಯಗಢದ ಕೌಟುಂಬಿಕ ನ್ಯಾಯಾಲಯವು ಪತಿಯ ವಿನಂತಿಯನ್ನು ತಿರಸ್ಕರಿಸಿತ್ತು. ಬಳಿಕ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಇದನ್ನೂ ಓದಿ: Death: 10 ಸಾವಿರ ಮಂದಿ ದುರ್ಮರಣ!

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು