B.Ed ineligible to become a primary school teacher, Supreme Court says

Court Verdict: ಕನ್ಯತ್ವ ಪರೀಕ್ಷೆ ಕೋರ್ಟ್ ಮಹತ್ವದ ಆದೇಶ

Court Verdict: ಕನ್ಯತ್ವ ಪರೀಕ್ಷೆ ಕೋರ್ಟ್ ಮಹತ್ವದ ಆದೇಶ

ಬಿಲಾಸ್ಪುರ: ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಮಹಿಳೆಯನ್ನು ಯಾವುದೇ ಕಾರಣಕ್ಕೂ ಬಲವಂತಪಡಿಸುವಂತಿಲ್ಲ ಎಂದು ಛತ್ತೀಸಗಢ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ತನ್ನ ಪತ್ನಿ ಬೇರೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಆಕೆಯನ್ನು ಕನ್ಯತ್ವ ಪರೀಕ್ಷೆಗೆ ಒಳಪಡಿಸುವಂತೆ ಕೋರಿ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ವರ್ಮಾ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಇದು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಘನತೆಯ ಹಕ್ಕಿನ ಉಲ್ಲಂಘನೆ ಎಂದು ಸ್ಪಷ್ಟವಾಗಿ ತೀರ್ಪು ನೀಡಿದೆ.

ತನ್ನ ಪತಿ ಲೈಂಗಿಕವಾಗಿ ಅಶಕ್ತನಾಗಿದ್ದು (impotent), ಸಹಜೀವನ ನಡೆಸಲು ನಿರಾಕರಿಸಿದ್ದಾನೆ ಎಂದು ಪತ್ನಿ ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಪತಿ, ಅವಳು (ಪತ್ನಿ) ತನ್ನ ಭಾವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಕನ್ಯತ್ವ ಪರೀಕ್ಷೆಗೆ ಒಳಪಡಿಸುವಂತೆ ಕೋರಿದ್ದರು.

ಅರ್ಜಿದಾರರು ತಮ್ಮ ಮೇಲಿನ ಆರೋಪಗಳು ಆಧಾರ ರಹಿತವೆಂದು ಸಾಬೀತುಪಡಿಸಲು ಬಯಸಿದರೆ, ಅವರು ಸಂಬಂಧಪಟ್ಟ ವೈದ್ಯಕೀಯ ಪರೀಕ್ಷೆಗೆ ಒಳಗಾಗಬಹುದು ಅಥವಾ ಯಾವುದೇ ಇತರ ಸಾಕ್ಷಿಗಳನ್ನು ನೀಡಬಹುದು. ಆದರೆ ಕನ್ಯತ್ವ ಪರೀಕ್ಷೆಗೆ ಒಳಪಡಿಸುವುದು ಸಂವಿಧಾನ ಬಾಹಿರವಾಗಿದೆ. ಏಕೆಂದರೆ ಇದು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಘನತೆಯ ಹಕ್ಕಿನ ಉಲ್ಲಂಘನೆ ಎಂದು ಹೈಕೋರ್ಟ್ ಹೇಳಿದೆ.

ಭಾರತದ ಸಂವಿಧಾನದ 21ನೇ ವಿಧಿಯು ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ಮಾತ್ರವಲ್ಲದೆ ಮಹಿಳೆಯರಿಗೆ ಘನತೆಯಿಂದ ಜೀವನ ನಡೆಸುವ ಹಕ್ಕನ್ನು ಸಹ ಖಾತರಿಪಡಿಸುತ್ತದೆ. ಯಾವುದೇ ಮಹಿಳೆಯನ್ನು ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಬಲವಂತಪಡಿಸುವಂತಿಲ್ಲ. ಸಂವಿಧಾನದ 21ನೇ ವಿಧಿ ‘ಮೂಲಭೂತ ಹಕ್ಕುಗಳ ಹೃದಯ’ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ಎಂದು ನ್ಯಾಯಮೂರ್ತಿ ವರ್ಮಾ ಅವರಿದ್ದ ಪೀಠ ಹೇಳಿದೆ.

ಎರಡೂ ಕಡೆಯವರು (ಪತಿ-ಪತ್ನಿ) ಪರಸ್ಪರ ಮಾಡಿರುವ ಆರೋಪಗಳು ಸಾಕ್ಷ್ಯಾಧಾರಗಳ ವಿಷಯವಾಗಿದೆ. ಸಾಕ್ಷ್ಯಾಧಾರಗಳ ಪರಿಶೀಲನೆಯ ನಂತರವೇ ತೀರ್ಮಾನಕ್ಕೆ ಬರಬಹುದು ಎಂದು ಕೋರ್ಟ್‌ ಹೇಳಿದೆ.

2023ರ ಏಪ್ರಿಲ್ 30ರಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ತನ್ನ ಪತಿ ಲೈಂಗಿಕವಾಗಿ ಅಶಕ್ತನೆಂದು ಕುಟುಂಬಸ್ಥರಿಗೆ ಹೇಳಿದ್ದ ಪತ್ನಿ ಆತನೊಂದಿಗೆ ವೈವಾಹಿಕ ಸಂಬಂಧ ಮುಂದುವರಿಸಲು ನಿರಾಕರಿಸಿದ್ದಳು.

ಅಲ್ಲದೇ 2024ರ ಜುಲೈ 2ರಂದು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಸೆಕ್ಷನ್ 144 ರ ಅಡಿಯಲ್ಲಿ ರಾಯಗಢ ಜಿಲ್ಲೆಯ ಕುಟುಂಬ ನ್ಯಾಯಾಲಯದಲ್ಲಿ ₹20,000 ಜೀವನಾಂಶವನ್ನು ಕೋರಿ ಅರ್ಜಿಯನ್ನು ಸಲ್ಲಿಸಿದರು.

ಜೀವನಾಂಶ ಅರ್ಜಿಗೆ ಪ್ರತಿಕ್ರಿಯೆಯಾಗಿ ಪತಿ, ಆಕೆ(ಪತ್ನಿ) ತನ್ನ ಭಾವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಕೋರಿದ್ದರು.

2024ರ ಅಕ್ಟೋಬರ್ 15ರಂದು, ರಾಯಗಢದ ಕೌಟುಂಬಿಕ ನ್ಯಾಯಾಲಯವು ಪತಿಯ ವಿನಂತಿಯನ್ನು ತಿರಸ್ಕರಿಸಿತ್ತು. ಬಳಿಕ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಇದನ್ನೂ ಓದಿ: Death: 10 ಸಾವಿರ ಮಂದಿ ದುರ್ಮರಣ!

Latest News

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ:                                                                                                                                                           ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

ಮುದ್ದೇಬಿಹಾಳ : ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 50 ಸಾವಿರ ಕೋಟಿ ರೂ.ವೆಚ್ಚ ಮಾಡುತ್ತಿದೆ.ಗ್ಯಾರಂಟಿ

ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೆ ಇಲ್ಲ. ಅದು ಹೈಕಮಾಂಡ್ ನಿರ್ಧಾರ.ಈ ವಿಷಯದ

TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಮಾರನಾಳ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮಾರನಾಳದಿಂದ ಶ್ರೀ ಘತ್ತರಗಿ ಭಾಗ್ಯವಂತಿಯವರೆಗೆ ಪಾದಯಾತ್ರೆಯನ್ನು ಗ್ರಾಮದೇವತೆ ಶ್ರೀ ಗದ್ಯಮದೇವಿ ದೇವಸ್ಥಾನದಿಂದ ಪ್ರಾರಂಭಿಸಿದರು. ಪ್ರತಿ ವರ್ಷದಂತೆ ಈ ವರ್ಷ ಸೇರಿ 23ನೇ ವರ್ಷ ಪಾದಯಾತ್ರೆ ಇದಾಗಿದ್ದು ಈ ಪಾದಯಾತ್ರೆಯಲ್ಲಿ ಮಾರನಾಳ ಊರಿನ ಗುರು ಹಿರಿಯರು ಯುವಕರು ಹಾಗೂ ಮಹಿಳೆಯರು ಸೇರಿ ಪಾದಯಾತ್ರೆ ಮಾಡುತ್ತಿದ್ದಾರೆ. ಈ ಪಾದಯಾತ್ರೆಯು ಸರಿ-ಸುಮಾರು 120 ಕಿಲೋ ಮೀಟರ್ ನಷ್ಟು ದೂರವಿದ್ಧಿ ಆದರೂ ಸಹಾ ಮಳೆ, ಗಾಳಿ, ಚಳ್ಳಿ,

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ ಕಾರ್ಯಕ್ಕೆ ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಪಾಟೀಲ ಚಾಲನೆ ನೀಡಿದರು. ಬಾಯ್ಲರ್ ಪ್ರದೀಪನಕ್ಕೂ ಮುನ್ನ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಯಿತು.ಕಾರ್ಖಾನೆಯ ನಿರ್ದೇಶಕರಾದ ಎಚ್.ಎಲ್.ಪಾಟೀಲ್,ರಾಹುಲಗೌಡ ಪಾಟೀಲ, ಶ್ರೀನಿವಾಸ ಅರಕೇರಿ,ಅಧಿಕ ಪಾಟೀಲ, ಪ್ರಜ್ವಲ ಪಾಟೀಲ,ನಾಲತವಾಡ ಪ.ಪಂ ಸದಸ್ಯ ಪೃಥ್ವಿ ನಾಡಗೌಡ, ಅಪ್ಪು ನಾಡಗೌಡ, ಮಲ್ಲಿಕಾರ್ಜುನ ನಾಡಗೌಡ ಇದ್ದರು.