ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸರ್ಕಾರಿ ನೌಕರರ ಕ್ರಿಕೆಟ್‌ ಪಂದ್ಯಾವಳಿ

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸರ್ಕಾರಿ ನೌಕರರ ಕ್ರಿಕೆಟ್‌ ಪಂದ್ಯಾವಳಿ

ಲಕ್ಷ್ಮೇಶ್ವರ: ಇಲಾಖೆಗಳಲ್ಲಿ ವರ್ಷಪೂರ್ತಿ ಕೆಲಸದ ಒತ್ತಡದಿಂದ ಕುಗ್ಗಿ ಜರ್ಜರಿತರಾದ ಸಿಬ್ಬಂದಿಗೆ ಮಾನಸಿಕವಾಗಿ ನಿರಾಳತೆ, ಸಕ್ರಿಯವಾಗಿ ತಮ್ಮ ಕರ್ತವ್ಯದಲ್ಲಿ ಉತ್ಸಾಹ, ಹುಮ್ಮಸ್ಸಿನಿಂದ ಕರ್ತವ್ಯ ನಿರ್ವಹಿಸಲು ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಲು ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಾ ದಂಡಾಧಿಕಾರಿಗಳು ಮತ್ತು ತಹಶೀಲ್ದಾರ್ ವಿ ವಾಸುದೇವ ಹೇಳಿದರು.

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪಟ್ಟಣದಲ್ಲಿ ಸರಿಕಾರಿ ವಿವಿಧ ಇಲಾಖೆಗಳ ಸಿಬ್ಬಂದಿಗಳ ಕ್ರಿಕೆಟ್‌ ಪಂದ್ಯಾವಳಿಯನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಎಲ್ಲ ಇಲಾಖೆಯ ಸಿಬ್ಬಂದಿ ಒಬ್ಬರಿಗೊಬ್ಬರು ಪರಿಚಿತರಾಗಲು ಒಳ್ಳೆಯ ಸ್ನೇಹ ಸಂಬಂಧದ ಸೇತುವೆಯಾಗಿ ಈ ಕ್ರಿಕೆಟ್ ಕ್ರಿಡೆ ಸಹಾಯವಾಗಲಿದೆ, ಜೊತೆಗೆ ಪ್ರೇರಣೆಯಾಗಿದೆ ಎಂದು ಹೇಳಿದರು.

ಸ್ವತಃ ಲಕ್ಷ್ಮೇಶ್ವರ ತಾಲ್ಲೂಕ ತಹಶೀಲ್ದಾರ್ ಕ್ರಿಕೆಟ್ ಆಟದಲ್ಲಿ ತಮ್ಮ ಕಂದಾಯ ಇಲಾಖೆಯ ಮುಖ್ಯ ನಾಯಕರಾಗಿ ಮೈದಾನದಲ್ಲಿ ಉತ್ತಮ ಆಟ ಪ್ರದರ್ಶಿಸುವವ ತಮ್ಮ ಸಿಬ್ಬಂದಿಗೆ ಮತ್ತು ಎದುರು ಆಟಗಾರರಿಗೂ ಚಪ್ಪಳೆ ತಟ್ಟುವುದರ ಮೂಲಕ ಹುರಿದುಂಬಿಸಿ ಉತ್ಸಹ ತುಂಬುತ್ತಿದ್ದರು. ತಾಲೂಕ ಪಂಚಾಯತ ಉಪ ನಿರ್ದೇಶಕರ ಧರ್ಮಣ್ಣ ಅವರ ವೀಕ್ಷಕರ ವಿವರಣೆ (ಕಾಮೆಂಟ್ರಿ) ಉತ್ತಮವಾಗಿತ್ತು. ಮತ್ತು ಎಲ್ಲಾ ತಂಡದವರಿಗೂ ಉತ್ಸಾಹ ತುಂಬುವಂತಿತ್ತು. ಕ್ರಿಡೆ ವೀಕ್ಷಿಸುವ ವೀಕ್ಷಕರ ಮೆಚ್ಚುಗೆಯ ಮಾತುಗಳೂ ಕೇಳಿ ಬಂದವು.

ಲಕ್ಷ್ಮೇಶ್ವರ ಸಬ್ ಇನ್ಸ್‌ಪೆಕ್ಟರ್ ಈರಣ್ಣ ರಿತ್ತಿ, ತಾಲೂಕ ಪಂಚಾಯತಿ ಉಪ ನಿರ್ದೇಕರು ಧರ್ಮಣ್ಣ, ತಾಲೂಕಾ ಗ್ರೇಡ್ ಟೂ ತಹಶಿಲ್ದಾರ ಮಂಜುನಾಥ ಅಮಾಸಿ, ಉಪ ತಹಶಿಲ್ದಾರ ಕಿಮ್ಮಾಯಿ, ತಾಲೂಕಾ ಕಂದಾಯ ಇಲಾಖೆ ರಾಜಸ್ವ ಅಧಿಕಾರಿ ನಧಾಪ ಇದ್ದರು.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.