Crime news: Extortion of a businessman at Koluru Cross.. Accused arrested

Crime news: ಕೋಳೂರು ಕ್ರಾಸ್‌ನಲ್ಲಿ ಉದ್ಯಮಿಯ ಸುಲಿಗೆ.. ಆರೋಪಿಗಳ ಬಂಧನ

Crime news: ಕೋಳೂರು ಕ್ರಾಸ್‌ನಲ್ಲಿ ಉದ್ಯಮಿಯ ಸುಲಿಗೆ.. ಆರೋಪಿಗಳ ಬಂಧನ

ಮುದ್ದೇಬಿಹಾಳ : ತಾಲ್ಲೂಕಿನ ಕೋಳೂರು ಕ್ರಾಸ್‌ನಲ್ಲಿ ಕೊಲ್ಹಾಪುರದ ಉದ್ಯಮಿಯೊಬ್ಬರ ಕಾರು ಅಡ್ಡಗಟ್ಟಿ ಹಣ,ಚಿನ್ನಾಭರಣ ದೋಚಿದ್ದ ಆರೋಪಿತರನ್ನು ಶನಿವಾರ ಇಲ್ಲಿನ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಕೊಲ್ಹಾಪುರದ ಉದ್ಯಮಿ ಅಶೋಕ ಕುಲಕರ್ಣಿ ಎಂಬುವರು ಆ.29 ರಂದು ಮುದ್ದೇಬಿಹಾಳದಿಂದ ತಂಗಡಗಿ ಕಡೆಗೆ ತೆರಳುವಾಗ ಕೋಳೂರು ಕ್ರಾಸ್‌ಬಳಿ ಅವರ ಕಾರನ್ನು ಅಡ್ಡಗಟ್ಟಿ ನಿಲ್ಲಿಸಿ ಚಾಕು ತೋರಿಸಿ ಕಣ್ಣಿಗೆ ಖಾರದಪುಡಿ ಎರಚಿ ಅವರ ಬಳಿ ಇದ್ದ ಚಿನ್ನದ ಉಂಗುರು, ನಗದು ಹಣ, ಕೊರಳಲ್ಲಿದ್ದ ಚಿನ್ನದ ಸರ ಸೇರಿ ಒಟ್ಟು 61 ಸಾವಿರ ರೂ. ಮೌಲ್ಯದ ಚಿನ್ನಾಭರಣ, ನಗದು ಹಣವನ್ನು ಯಾರೋ ಇಬ್ಬರು ವ್ಯಕ್ತಿಗಳು ಸುಲಿಗೆ ಮಾಡಿದ್ದಾರೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದರ ತನಿಖೆ ನಡೆಸಿದ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ಕ್ರೈಮ್ ಪಿಎಸ್‌ಐ ಆರ್.ಎಲ್.ಮನ್ನಾಭಾಯಿ ಹಾಗೂ ತಂಡದವರು, ತಾಂತ್ರಿಕ ಸಹಾಯದಿಂದ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿತರಾದ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ರಾಕೇಶ ಸಾವಂತ, ರೋಹನ ಯೇಡಕರ, ಪ್ರಥಮೇಶ ಹವಾಲ್ದಾರ ಎಂಬುವರನ್ನು ಬಂಧಿಸಿ ಅವರನ್ನು ವಿಚಾರಣೆಗೊಳಪಡಿಸಿದಾಗ ಕೃತ್ಯದಲ್ಲಿ ಭಾಗಿಯಾಗಿದ್ದು ತಾವೆ ಎಂದು ಒಪ್ಪಿಕೊಂಡಿದ್ದು ಅವರಿಂದ ಚಿನ್ನಾಭರಣ, ನಗದು ಹಣ, ಒಂದು ಬೈಕ್, ಮೊಬೈಲ್ ಫೋನಗಳು ಸೇರಿ ಒಟ್ಟು 1.70 ಲಕ್ಷ ರೂ. ಮೌಲ್ಯದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Festivel: ಸೆ.1 ರಿಂದ ಕುಂಟೋಜಿ ಬಸವೇಶ್ವರ ಜಾತ್ರೋತ್ಸವ.. ಯಾತ್ರಾತ್ರಿಗಳಿಗೆ ಅತ್ಯಾಧುನಿಕ ಸೌಲಭ್ಯಗಳುಳ್ಳ ಕೊಠಡಿಗಳ ನಿರ್ಮಾಣ

ಆರೋಪಿತರನ್ನು ಪತ್ತೆ ಹಚ್ಚಲು ಶ್ರಮಿಸಿದ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ಕ್ರೈಮ್ ಪಿಎಸ್‌ಐ ಆರ್.ಎಲ್.ಮನ್ನಾಭಾಯಿ, ಸಿಬ್ಬಂದಿ ಬಿ.ಕೆ.ಗುಡಿಮನಿ, ಆರ್.ಎಸ್.ಪಾಟೀಲ್, ವಿ.ಎನ್.ಹಾಲಗಂಗಾಧರಮಠ, ಸಿ.ಎಸ್.ಬಿರಾದಾರ, ಆರ್.ಎಸ್.ಮಾದರ, ಎಸ್.ಎಲ್.ಹತ್ತರಕಿಹಾಳ ಅವರ ತಂಡಕ್ಕೆ ಎಸ್ಪಿ ಋಷಿಕೇಶ ಸೋನಾವಣೆ ಬಹುಮಾನ, ಪ್ರಶಂಸನಾ ಪತ್ರ ಘೋಷಣೆ ಮಾಡಿದ್ದಾರೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ