Crime news: Extortion of a businessman at Koluru Cross.. Accused arrested

Crime news: ಕೋಳೂರು ಕ್ರಾಸ್‌ನಲ್ಲಿ ಉದ್ಯಮಿಯ ಸುಲಿಗೆ.. ಆರೋಪಿಗಳ ಬಂಧನ

Crime news: ಕೋಳೂರು ಕ್ರಾಸ್‌ನಲ್ಲಿ ಉದ್ಯಮಿಯ ಸುಲಿಗೆ.. ಆರೋಪಿಗಳ ಬಂಧನ

ಮುದ್ದೇಬಿಹಾಳ : ತಾಲ್ಲೂಕಿನ ಕೋಳೂರು ಕ್ರಾಸ್‌ನಲ್ಲಿ ಕೊಲ್ಹಾಪುರದ ಉದ್ಯಮಿಯೊಬ್ಬರ ಕಾರು ಅಡ್ಡಗಟ್ಟಿ ಹಣ,ಚಿನ್ನಾಭರಣ ದೋಚಿದ್ದ ಆರೋಪಿತರನ್ನು ಶನಿವಾರ ಇಲ್ಲಿನ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಕೊಲ್ಹಾಪುರದ ಉದ್ಯಮಿ ಅಶೋಕ ಕುಲಕರ್ಣಿ ಎಂಬುವರು ಆ.29 ರಂದು ಮುದ್ದೇಬಿಹಾಳದಿಂದ ತಂಗಡಗಿ ಕಡೆಗೆ ತೆರಳುವಾಗ ಕೋಳೂರು ಕ್ರಾಸ್‌ಬಳಿ ಅವರ ಕಾರನ್ನು ಅಡ್ಡಗಟ್ಟಿ ನಿಲ್ಲಿಸಿ ಚಾಕು ತೋರಿಸಿ ಕಣ್ಣಿಗೆ ಖಾರದಪುಡಿ ಎರಚಿ ಅವರ ಬಳಿ ಇದ್ದ ಚಿನ್ನದ ಉಂಗುರು, ನಗದು ಹಣ, ಕೊರಳಲ್ಲಿದ್ದ ಚಿನ್ನದ ಸರ ಸೇರಿ ಒಟ್ಟು 61 ಸಾವಿರ ರೂ. ಮೌಲ್ಯದ ಚಿನ್ನಾಭರಣ, ನಗದು ಹಣವನ್ನು ಯಾರೋ ಇಬ್ಬರು ವ್ಯಕ್ತಿಗಳು ಸುಲಿಗೆ ಮಾಡಿದ್ದಾರೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದರ ತನಿಖೆ ನಡೆಸಿದ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ಕ್ರೈಮ್ ಪಿಎಸ್‌ಐ ಆರ್.ಎಲ್.ಮನ್ನಾಭಾಯಿ ಹಾಗೂ ತಂಡದವರು, ತಾಂತ್ರಿಕ ಸಹಾಯದಿಂದ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿತರಾದ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ರಾಕೇಶ ಸಾವಂತ, ರೋಹನ ಯೇಡಕರ, ಪ್ರಥಮೇಶ ಹವಾಲ್ದಾರ ಎಂಬುವರನ್ನು ಬಂಧಿಸಿ ಅವರನ್ನು ವಿಚಾರಣೆಗೊಳಪಡಿಸಿದಾಗ ಕೃತ್ಯದಲ್ಲಿ ಭಾಗಿಯಾಗಿದ್ದು ತಾವೆ ಎಂದು ಒಪ್ಪಿಕೊಂಡಿದ್ದು ಅವರಿಂದ ಚಿನ್ನಾಭರಣ, ನಗದು ಹಣ, ಒಂದು ಬೈಕ್, ಮೊಬೈಲ್ ಫೋನಗಳು ಸೇರಿ ಒಟ್ಟು 1.70 ಲಕ್ಷ ರೂ. ಮೌಲ್ಯದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Festivel: ಸೆ.1 ರಿಂದ ಕುಂಟೋಜಿ ಬಸವೇಶ್ವರ ಜಾತ್ರೋತ್ಸವ.. ಯಾತ್ರಾತ್ರಿಗಳಿಗೆ ಅತ್ಯಾಧುನಿಕ ಸೌಲಭ್ಯಗಳುಳ್ಳ ಕೊಠಡಿಗಳ ನಿರ್ಮಾಣ

ಆರೋಪಿತರನ್ನು ಪತ್ತೆ ಹಚ್ಚಲು ಶ್ರಮಿಸಿದ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ಕ್ರೈಮ್ ಪಿಎಸ್‌ಐ ಆರ್.ಎಲ್.ಮನ್ನಾಭಾಯಿ, ಸಿಬ್ಬಂದಿ ಬಿ.ಕೆ.ಗುಡಿಮನಿ, ಆರ್.ಎಸ್.ಪಾಟೀಲ್, ವಿ.ಎನ್.ಹಾಲಗಂಗಾಧರಮಠ, ಸಿ.ಎಸ್.ಬಿರಾದಾರ, ಆರ್.ಎಸ್.ಮಾದರ, ಎಸ್.ಎಲ್.ಹತ್ತರಕಿಹಾಳ ಅವರ ತಂಡಕ್ಕೆ ಎಸ್ಪಿ ಋಷಿಕೇಶ ಸೋನಾವಣೆ ಬಹುಮಾನ, ಪ್ರಶಂಸನಾ ಪತ್ರ ಘೋಷಣೆ ಮಾಡಿದ್ದಾರೆ.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ