Murder Case Image of murder symbol

Crime news: ಪಾಗಲ್ ಪ್ರೇಮಿಯಿಂದ ಹುಡುಗಿ ತಾಯಿಗೆ ಚಾಕು ಇರಿತ!

Crime news: ಪಾಗಲ್ ಪ್ರೇಮಿಯಿಂದ ಹುಡುಗಿ ತಾಯಿಗೆ ಚಾಕು ಇರಿತ!

ಹುಬ್ಬಳ್ಳಿ: ಪ್ರೀತ್ಸೆ ಪ್ರೀತ್ಸೆ ಅಂತ ಹುಡುಗಿಯ ಹಿಂದ ಬಿದ್ದ ಪಾಗಲ್ ಪ್ರೇಮಿ, ತಾನು ಪ್ರೀತಿಸುತ್ತಿರುವ ಹುಡುಗಿಯ ತಾಯಿಗೆ ಚಾಕು ಇರಿದ ಘಟನೆ ನಗರದ ಲೋಹಿಯಾ ನಗರದಲ್ಲಿ ನಡೆದಿದೆ. (Crime news)

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ‌ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಮಹೇಶ್ (24) ಎಂಬಾತನೇ ನೀಲಾ ಹಂಪಣ್ಣವ‌ರ್ ಎಂಬ ಮಹಿಳೆಗೆ ಹೊಟ್ಟೆ ಭಾಗಕ್ಕೆ ಚಾಕು ಇರಿದು ಪರಾರಿಯಾಗಿದ್ದ. ಘಟನೆ ನಡೆದ ಕೆಲವೊತ್ತಿನಲ್ಲೇ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿರುವ ಪ್ರಕರಣ ನಡೆದಿದೆ.

ನೀಲಾ ಹಂಪಣ್ಣನವರ ಎಂಬ ಮಹಿಳೆಯ ಮೇಲೆ ಸಂಜೆ 4 ಗಂಟೆಯ ಸುಮಾರಿಗೆ ಮಹೇಶ ಚಾಕು ಇರಿದುಪರಾರಿಯಾಗಿದ್ದಾನೆ. ಕೂಡಲೇ ಸ್ಥಳೀಯರ ಸಹಾಯದಿಂದ ಗಾಯಗೊಂಡ ಮಹಿಳೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಈ ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾ‌ರ್ ಭೇಟಿ ನೀಡಿ ಗಾಯಾಳು ಹಾಗೂ ಆಕೆಯ ಕುಟುಂಬಸ್ಥರಿಂದ ಮಾಹಿತಿ ಪಡೆದ ಕೆಲವೊತ್ತಿನಲ್ಲಿ ಆರೋಪಿಯನ್ನ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗುಂಡು ತಿಂದಿರುವ ಆರೋಪಿ ಹಾಗೂ ಗಾಯಾಳು ಅಧಿಕಾರಿಯನ್ನ ಕಿಮ್ಸ್‌ಗೆ ದಾಖಲು ಮಾಡಲಾಗಿದೆ.

ಮಹೇಶನನ್ನು ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಲಾರಿ – ಕಾರು ಮುಖಾಮುಖಿ ಡಿಕ್ಕಿ, ನಾಲ್ವರು ಸ್ಥಳದಲ್ಲೇ ದುರ್ಮರಣ

Latest News

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮುದ್ದೇಬಿಹಾಳ : ರಂಜಾನ್ ಹಬ್ಬದ ನಿಮಿತ್ಯ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಮಾ.15 ರಂದು ಸಂಜೆ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾಟರ‍್ಸ್ನಲ್ಲಿ ಪೊಲೀಸ್ ಠಾಣೆಯನ್ನು

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ಭಾಗದ ನಾರಾಯಣಪೂರ ಹಾಗೂ ಆಲಮಟ್ಟಿ ಜಲಾಶಯದ ಮಧ್ಯೆದಲ್ಲಿ ಬರುವ ಕೃಷ್ಣಾ

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ಮುದ್ದೇಬಿಹಾಳ : ಮನೆ ಕಟ್ಟಡಕ್ಕೆ ನೀರು ಹೊಡೆಯುವ ಸಂದರ್ಭದಲ್ಲಿ ಮೋಟರ್‌ಗೆ ಪೈಪ್ ಜೋಡಿಸುವ ವೇಳೆ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ಅಮ್ಮನವರ ಜಾತ್ರಾ ಮಹೋತ್ಸವ ಮಾ.12,13 ರಂದು ನಡೆಯಲಿದ್ದು ಇದರಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಮಾ.12 ರಂದು ಬೆಳಗ್ಗೆ ಮಂಗಲವಾದ್ಯ ಘೋಷಣೆ,8ಕ್ಕೆ ಪದ್ಮಾವತಿ ದೇವಿಯ ಕಳಸ,ಪಲ್ಲಕ್ಕಿ,ರಥದ ಹಗ್ಗದ ಮೆರವಣಿಗೆ,ಪಂಚಾಮೃತ ಅಭಿಷೇಕ ಪೂಜೆ ನಡೆಯಲಿದೆ. ಮದ್ಯಾಹ್ನ 12ಕ್ಕೆ ಚಡಾವು ಸವಾಲು.ಮದ್ಯಾಹ್ನ 1ಕ್ಕೆ ಉತ್ಸವ ಮೂರ್ತಿಗಳ ರಥಾರೋಹಣ ನಂತರ ಅನ್ನಸಂತರ್ಪಣೆ ನಡೆಯಲಿದೆ.ಮದ್ಯಾಹ್ನ 2ಕ್ಕೆ ಧರ್ಮಸಭೆ ಮತ್ತು ಸಾಧಕರ ಸನ್ಮಾನ ಜರುಗಲಿದೆ. ಸಭೆಯ ಅಧ್ಯಕ್ಷತೆಯನ್ನು ಪದ್ಮಾವತಿ ಟ್ರಸ್ಟ್ ಕಮಿಟಿ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿಜಯಪುರ,ಇಂಡಿ,ಸಿOದಗಿ,ಮುದ್ದೇಬಿಹಾಳ, ತಾಳಿಕೋಟಿ,ಬ.ಬಾಗೇವಾಡಿಯಿಂದ ವಿಶೇಷ ಬಸ್‌ಗಳು ಸಂಚರಿಸಲಿವೆ.ವಿಜಯಪುರದಿAದ 970 ರೂ., ಇಂಡಿಯಿAದ 950 ರೂ., ಸಿಂದಗಿಯಿOದ 875 ರೂ.,ಮುದ್ದೇಬಿಹಾಳದಿಂದ 830 ರೂ., ತಾಳಿಕೋಟೆಯಿಂದ 825 ರೂ., ಬ.ಬಾಗೇವಾಡಿಯಿಂದ 890 ರೂ.