Murder Case Image of murder symbol

Crime news: ಪಾಗಲ್ ಪ್ರೇಮಿಯಿಂದ ಹುಡುಗಿ ತಾಯಿಗೆ ಚಾಕು ಇರಿತ!

Crime news: ಪಾಗಲ್ ಪ್ರೇಮಿಯಿಂದ ಹುಡುಗಿ ತಾಯಿಗೆ ಚಾಕು ಇರಿತ!

ಹುಬ್ಬಳ್ಳಿ: ಪ್ರೀತ್ಸೆ ಪ್ರೀತ್ಸೆ ಅಂತ ಹುಡುಗಿಯ ಹಿಂದ ಬಿದ್ದ ಪಾಗಲ್ ಪ್ರೇಮಿ, ತಾನು ಪ್ರೀತಿಸುತ್ತಿರುವ ಹುಡುಗಿಯ ತಾಯಿಗೆ ಚಾಕು ಇರಿದ ಘಟನೆ ನಗರದ ಲೋಹಿಯಾ ನಗರದಲ್ಲಿ ನಡೆದಿದೆ. (Crime news)

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ‌ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಮಹೇಶ್ (24) ಎಂಬಾತನೇ ನೀಲಾ ಹಂಪಣ್ಣವ‌ರ್ ಎಂಬ ಮಹಿಳೆಗೆ ಹೊಟ್ಟೆ ಭಾಗಕ್ಕೆ ಚಾಕು ಇರಿದು ಪರಾರಿಯಾಗಿದ್ದ. ಘಟನೆ ನಡೆದ ಕೆಲವೊತ್ತಿನಲ್ಲೇ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿರುವ ಪ್ರಕರಣ ನಡೆದಿದೆ.

ನೀಲಾ ಹಂಪಣ್ಣನವರ ಎಂಬ ಮಹಿಳೆಯ ಮೇಲೆ ಸಂಜೆ 4 ಗಂಟೆಯ ಸುಮಾರಿಗೆ ಮಹೇಶ ಚಾಕು ಇರಿದುಪರಾರಿಯಾಗಿದ್ದಾನೆ. ಕೂಡಲೇ ಸ್ಥಳೀಯರ ಸಹಾಯದಿಂದ ಗಾಯಗೊಂಡ ಮಹಿಳೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಈ ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾ‌ರ್ ಭೇಟಿ ನೀಡಿ ಗಾಯಾಳು ಹಾಗೂ ಆಕೆಯ ಕುಟುಂಬಸ್ಥರಿಂದ ಮಾಹಿತಿ ಪಡೆದ ಕೆಲವೊತ್ತಿನಲ್ಲಿ ಆರೋಪಿಯನ್ನ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗುಂಡು ತಿಂದಿರುವ ಆರೋಪಿ ಹಾಗೂ ಗಾಯಾಳು ಅಧಿಕಾರಿಯನ್ನ ಕಿಮ್ಸ್‌ಗೆ ದಾಖಲು ಮಾಡಲಾಗಿದೆ.

ಮಹೇಶನನ್ನು ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಲಾರಿ – ಕಾರು ಮುಖಾಮುಖಿ ಡಿಕ್ಕಿ, ನಾಲ್ವರು ಸ್ಥಳದಲ್ಲೇ ದುರ್ಮರಣ

Latest News

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ ಹೊಸ ತಂತ್ರಾoಶವು ಶಿಕ್ಷಣ ಇಲಾಖೆಯಲ್ಲಿ ನಡೆದಿದ್ದ ಹಲವು ಅಕ್ರಮಗಳಿಗೆ ತಡೆ ನೀಡುವ ಉದ್ದೇಶ ಹೊಂದಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಕರೆಂದರೆ ದೇಶದ ಸಂಸ್ಕೃತಿ ಎತ್ತಿ ಹಿಡಿಯುವವರು.ಅತ್ಯುನ್ನತ ವ್ರತ್ತಿಯಲ್ಲಿರುವವರು.ಸರ್ಕಾರಿ ಶಾಲೆಯ

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಮುದ್ದೇಬಿಹಾಳ : ರಾಷ್ಟ್ರೀಯ ಮಟ್ಟದ ಇಬಿಕ್ ರೀಡಥಾನ್ -2,2025ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಟ್ಟಣದ ಬಸವ ಇಂಟರ್‌ನ್ಯಾಶನಲ್ ಶಾಲೆಯ ವಿದ್ಯಾರ್ಥಿಗಳು ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಹರ್ಲಾಪೂರ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ಬಸವ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಮಂಗಳವಾರ ನಡೆದ ಸಾಧನೆ ತೋರಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರನ್ನು ಸನ್ಮಾನಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವುದರ ಜೊತೆಗೆ