Crime news: Child killed in husband-wife fight..!

Crime news: ಯುವಕನ ಮರ್ಮಾಂಗವನ್ನೇ ಕತ್ತರಿಸಿದ ತೃತೀಯ ಲಿಂಗಿಗಳು!

Crime news: ಯುವಕನ ಮರ್ಮಾಂಗವನ್ನೇ ಕತ್ತರಿಸಿದ ತೃತೀಯ ಲಿಂಗಿಗಳು!

ಬೆಂಗಳೂರು: ಯುವಕನೊಬ್ಬನನ್ನು ತೃತೀಯಲಿಂಗಿಯಾಗಿ ಪರಿವರ್ತನೆಯಾಗುವಂತೆ ಒತ್ತಾಯಿಸಿ ಬಲವಂತವಾಗಿ ಆತನ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಹಿಂಸೆ ನೀಡಿದ ಆರೋಪದಲ್ಲಿ ಐವರು ತೃತೀಯ ಲಿಂಗಿಗಳ ವಿರುದ್ಧ ಪುಲಿಕೇಶಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ. (Crime news)

ಚಿತ್ರಾ, ಅಶ್ವಿನಿ, ಕಾಜಲ್, ಪ್ರೀತಿ ಹಾಗೂ ಮುಗಿಲ ಎಂಬ ತೃತೀಯ ಲಿಂಗಿಗಳ ವಿರುದ್ಧ ಪೊಲೀಸರು ಎಫ್‌ಐಆ‌ರ್ ದಾಖಲಿಸಿ ಬಲೆ ಬೀಸಿದ್ದಾರೆ.

Join Our Telegram: https://t.me/dcgkannada

ಏನಿದು ಪ್ರಕರಣ?:

ದೂರುದಾರ ಯುವಕ 3 ವರ್ಷದ ಹಿಂದೆ ಅಂಬೇಡ್ಕರ್ ಕಾಲೇಜು ಬಳಿ ಟೀ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರೋಪಿಗಳು ಟೀ ಕುಡಿಯಲು ಆಗಾಗ ಅಂಗಡಿಗೆ ಬರುತ್ತಿದ್ದರು. ಈ ವೇಳೆ ಯುವಕನನ್ನು ಪರಿಚಯಿಸಿ ಕೊಂಡು, ನೀನು ನಮ್ಮ ಜತೆ ಬಂದರೆ ಒಳ್ಳೆಯ ಮನೆ ಹೆಣ್ಣಾದರೆ ಹೆಚ್ಚು ದುಡಿಯುವೆ ಎಂದು ಯುವಕನಿಗೆ ಒತ್ತಾಯ ಅದಕ್ಕೆ ಇಂಜೆಕ್ಷನ್ ನೀಡಿ ಶಸ್ತ್ರಚಿಕಿತ್ಸೆಯಲ್ಲಿ ಇರಿಸಿ ಸಂಪಾದನೆಗೆ ದಾರಿ ಮಾಡಿಕೊಡುವು ದಾಗಿ ಪುಸಲಾಯಿಸಿದ್ದಾರೆ. ಯುವಕ ನಾನು ಬರು ವುದಿಲ್ಲ ಎಂದರೂ ಬಲವಂತವಾಗಿ ಟ್ಯಾನರಿ ರಸ್ತೆಯ ಮನೆಯೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪೋಷಕರ ಕೊಲೆ ಮಾಡುವುದಾಗಿ ಬೆದರಿಕೆ:

ನೀನು ಭಿಕ್ಷಾಟನೆ ಮಾಡದಿದ್ದರೆ, ನಿನ್ನ ಮನೆಯವರನ್ನು ಕೊಲೆ ಮಾಡುವುದಾಗಿ ಯುವಕನನ್ನು ಬೆದರಿಸಿದ್ದಾರೆ. ಬಲವಂತವಾಗಿ 3 ವರ್ಷಗಳ ಕಾಲ ಯುವಕನಿಂದ ಭಿಕ್ಷಾಟನೆ ಮಾಡಿಸಿ ಹಣ ಪಡೆದಿದ್ದಾರೆ. ಕಳೆದ ಜು.17ರಂದು ನೀನು ಗಂಡಸಾಗಿ ರುವಾಗಲೇ ಪ್ರತಿ ದಿನ 2000 ರು. ದುಡಿದು ಕೊಡುತ್ತಿರುವೆ. ನೀನು ಹೆಣ್ಣಾದರೆ ಹೆಚ್ಚು ದುಡಿಯಬಹುದು ಎಂದಿದ್ದಾರೆ. (Crime news)

ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿದರು: ಬಳಿಕ ಆರೋಪಿಗಳು ಗಾಂಜಾ, ಮದ್ಯ ಸೇವಿಸಿ ಮಹಿಳೆ ಯೊಬ್ಬಳನ್ನು ಮನೆಗೆ ಕರೆಸಿಕೊಂಡು ಬಲವಂತವಾಗಿ ಯುವಕನಿಗೆ ಇಂಜೆಕ್ಷನ್ ನೀಡಿ ಪ್ರಜ್ಞೆ ತಪ್ಪಿಸಿದ್ದಾರೆ. ನಂತರ ಆತನ ಮರ್ಮಾಂಗ ಕತ್ತರಿಸಿದ್ದಾರೆ. ಆತ ಎಚ್ಚರಗೊಂಡಾಗ ಮರ್ಮಾಂಗದ ಬಳಿ ರಕ್ತಗಾಯ ವಾಗಿದ್ದು, ಪೈಪ್‌ವೊಂದನ್ನು ಅಳವಡಿಸಿರುವುದು ಕಂಡು ಬಂದಿದೆ. ಬಳಿಕ ಆರೋಪಿಗಳು ಯುವಕನನ್ನು ಆ.3ರ ವರೆಗೂ ಆ ಮನೆಯಲ್ಲೇ ಕೂಡಿ ಹಾಕಿ ಬಳಿಕ ಬೇರೆಡೆ ಕರೆದೊಯು ಪೂಜೆ ಮಾಡಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆ ಕೆಲಸಕ್ಕೆ ಒತ್ತಾಯ:

ಇನ್ನು ಮುಂದೆ ನೀನು ಭಿಕ್ಷಾಟನೆ ಮಾಡುವುದರ ಜತೆಗೆ ಲೈಂಗಿಕ ಕಾರ್ಯಕರ್ತೆಯಾಗಿ ಕೆಲಸ ಮಾಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಯುವಕ ಒಪ್ಪದಿದ್ದಾಗ 5 ಲಕ್ಷ ರು. ಕೊಡುವಂತೆ ಒತ್ತಾಯಿಸಿದ್ದಾರೆ. ಆರೋಪಿ ಗಳ ಹಿಂಸೆ ತಾಳಲಾರದೆ ತಪ್ಪಿಸಿಕೊಂಡುದೂರು ನೀಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Astrology: ನಿಮಗೆ ಹಣದ ಸಮಸ್ಯೆ ಉಂಟಾಗುವ ಸಾಧ್ಯತೆ.. ದಿನ ಭವಿಷ್ಯ: ಬುಧವಾರ, ಆಗಸ್ಟ್ 21, 2024, ದೈನಂದಿನ ರಾಶಿ ಭವಿಷ್ಯ

Latest News

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಗುರಡ್ಡಿ ಪೆಟ್ರೋಲ್ ಪಂಪ್ ಹತ್ತಿರದಲ್ಲಿರುವ ಆಕ್ಸಫರ್ಡ್ಸ್ ಪಾಟೀಲ್ಸ್

ನೌಕಾಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ:                                ತವರಿಗೆ ಮರಳಿದ ಸತೀಶ ನಾಯ್ಕಗೆ ಅದ್ದೂರಿ ಸ್ವಾಗತ

ನೌಕಾಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ: ತವರಿಗೆ ಮರಳಿದ ಸತೀಶ ನಾಯ್ಕಗೆ ಅದ್ದೂರಿ ಸ್ವಾಗತ

ಮುದ್ದೇಬಿಹಾಳ : ಭಾರತೀಯ ನೌಕಾಸೇನೆಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಗುರುವಾರ

50 ಲಕ್ಷ ರೂ.ಸ್ಕಾಲರ್‌ಶಿಪ್ ಗೆಲ್ಲುವ ಅವಕಾಶ:                       ಫೆ.22 ರಂದು ಬಿಎಎಸ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

50 ಲಕ್ಷ ರೂ.ಸ್ಕಾಲರ್‌ಶಿಪ್ ಗೆಲ್ಲುವ ಅವಕಾಶ: ಫೆ.22 ರಂದು ಬಿಎಎಸ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಶಾಲೆಯಲ್ಲಿ ಫೆ.22 ರಂದು ಬಿಎಎಸ್

ಜೆಇಇ-1 ಪರೀಕ್ಷೆ ಫಲಿತಾಂಶ :                                  ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಜೆಇಇ-1 ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಮುದ್ದೇಬಿಹಾಳ : ಜೆಇಇ ಸೆಷನ್-1 ರ ಪರೀಕ್ಷೆಯಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು

‘ರಾಷ್ಟ್ರದ್ವಜ ಹಿಡಿದು ಶತ್ರು ಸಂಹಾರ ಮಾಡ್ತೀನಿ,ಇಲ್ಲಂದ್ರೆ ಮೈಮೇಲೆ ಅದೇ ಧ್ವಜ ಹೊತ್ತು ಬರ‍್ತೀನಿ’

‘ರಾಷ್ಟ್ರದ್ವಜ ಹಿಡಿದು ಶತ್ರು ಸಂಹಾರ ಮಾಡ್ತೀನಿ,ಇಲ್ಲಂದ್ರೆ ಮೈಮೇಲೆ ಅದೇ ಧ್ವಜ ಹೊತ್ತು ಬರ‍್ತೀನಿ’

ಮುದ್ದೇಬಿಹಾಳ : ನಾನು ಸೈನ್ಯಕ್ಕೆ ಸೇರುತ್ತಿದ್ದಂತೆ ನನ್ನ ತಾಯಿ ‘ನೀ ಹೆಣ್ಣು ಮಗಳಾಗಿ ಗಡಿ ಕಾಯೂದ ಹೆಂಗ ಮಾಡ್ತಿ ?’ ಅಂದಾಗ ನಾನು “ಅವ್ವಾ ನೀ ತಲಿಕೆಡಿಸ್ಕೋ ಬ್ಯಾಡ ಬೇ, ನಾ ಅಲ್ಲಿ ಹೋಗಿ ನಮ್ಮ ದೇಶಕ್ಕೆ ಕಂಟಕರಾದವ್ರನ್ನ ಸಂಹಾರ ಮಾಡ್ತೀನಿ ಇಲ್ಲ ಇಲ್ಲಾಂದ್ರ ಅದೇ ಧ್ವಜ ಮೈಮ್ಯಾಲೆ ಹೊತ್ಕೊಂಡು ಬರ್ತಿನಿ” ಎಂದು ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಕಾಶೀಬಾಯಿ ಚಲವಾದಿ ಹೇಳಿದರು. ಪಟ್ಟಣದ ಕಾರ್ಗಿಲ್ ವೀರಯೋಧರ ಸ್ಮಾರಕ ಸಮಿತಿಯಿಂದ ಈಚೇಗೆ

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ಮುದ್ದೇಬಿಹಾಳ : ನನ್ನ ಕನಸು ಸೈನ್ಸ್ ಕಾಲೇಜು ಆರಂಭಿಸಬೇಕು ಎಂಬುದಿತ್ತು.ದುಡ್ಡು ಮಾಡುವುದಕ್ಕಾಗಿ ಸೈನ್ಸ್ ಕಾಲೇಜು ಮಾಡಿಲ್ಲ.ರಾಯಚೂರು,ವಿಜಯಪುರ,ಬಾಗಲಕೋಟೆ,ಕೊಪ್ಪಳ ಜಿಲ್ಲೆಗಳಂತಹ ಹಿಂದುಳಿದ ಜಿಲ್ಲೆಗಳ ರೈತಾಪಿ ವರ್ಗದ ಮಕ್ಕಳನ್ನು ಮೇಲೆ ತರಬೇಕು ಎಂಬ ಉದ್ದೇಶದಿಂದ ಸೈನ್ಸ್ ಕಾಲೇಜು ಆರಂಭಿಸಿದ್ದೇವೆ ಎಂದು ನಾಗರಬೆಟ್ಟ ಆಕ್ಸಫರ್ಡ್ ಸಮೂಹ ಶಿಕ್ಷಣ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ ಹೇಳಿದರು. ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಆಕ್ಸಫರ್ಡ್ ಕಲಾಸಂಭ್ರಮ-2026 ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಅವರು