Crime news: Child killed in husband-wife fight..!

Crime news: ಯುವಕನ ಮರ್ಮಾಂಗವನ್ನೇ ಕತ್ತರಿಸಿದ ತೃತೀಯ ಲಿಂಗಿಗಳು!

Crime news: ಯುವಕನ ಮರ್ಮಾಂಗವನ್ನೇ ಕತ್ತರಿಸಿದ ತೃತೀಯ ಲಿಂಗಿಗಳು!

ಬೆಂಗಳೂರು: ಯುವಕನೊಬ್ಬನನ್ನು ತೃತೀಯಲಿಂಗಿಯಾಗಿ ಪರಿವರ್ತನೆಯಾಗುವಂತೆ ಒತ್ತಾಯಿಸಿ ಬಲವಂತವಾಗಿ ಆತನ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಹಿಂಸೆ ನೀಡಿದ ಆರೋಪದಲ್ಲಿ ಐವರು ತೃತೀಯ ಲಿಂಗಿಗಳ ವಿರುದ್ಧ ಪುಲಿಕೇಶಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ. (Crime news)

ಚಿತ್ರಾ, ಅಶ್ವಿನಿ, ಕಾಜಲ್, ಪ್ರೀತಿ ಹಾಗೂ ಮುಗಿಲ ಎಂಬ ತೃತೀಯ ಲಿಂಗಿಗಳ ವಿರುದ್ಧ ಪೊಲೀಸರು ಎಫ್‌ಐಆ‌ರ್ ದಾಖಲಿಸಿ ಬಲೆ ಬೀಸಿದ್ದಾರೆ.

Join Our Telegram: https://t.me/dcgkannada

ಏನಿದು ಪ್ರಕರಣ?:

ದೂರುದಾರ ಯುವಕ 3 ವರ್ಷದ ಹಿಂದೆ ಅಂಬೇಡ್ಕರ್ ಕಾಲೇಜು ಬಳಿ ಟೀ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರೋಪಿಗಳು ಟೀ ಕುಡಿಯಲು ಆಗಾಗ ಅಂಗಡಿಗೆ ಬರುತ್ತಿದ್ದರು. ಈ ವೇಳೆ ಯುವಕನನ್ನು ಪರಿಚಯಿಸಿ ಕೊಂಡು, ನೀನು ನಮ್ಮ ಜತೆ ಬಂದರೆ ಒಳ್ಳೆಯ ಮನೆ ಹೆಣ್ಣಾದರೆ ಹೆಚ್ಚು ದುಡಿಯುವೆ ಎಂದು ಯುವಕನಿಗೆ ಒತ್ತಾಯ ಅದಕ್ಕೆ ಇಂಜೆಕ್ಷನ್ ನೀಡಿ ಶಸ್ತ್ರಚಿಕಿತ್ಸೆಯಲ್ಲಿ ಇರಿಸಿ ಸಂಪಾದನೆಗೆ ದಾರಿ ಮಾಡಿಕೊಡುವು ದಾಗಿ ಪುಸಲಾಯಿಸಿದ್ದಾರೆ. ಯುವಕ ನಾನು ಬರು ವುದಿಲ್ಲ ಎಂದರೂ ಬಲವಂತವಾಗಿ ಟ್ಯಾನರಿ ರಸ್ತೆಯ ಮನೆಯೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪೋಷಕರ ಕೊಲೆ ಮಾಡುವುದಾಗಿ ಬೆದರಿಕೆ:

ನೀನು ಭಿಕ್ಷಾಟನೆ ಮಾಡದಿದ್ದರೆ, ನಿನ್ನ ಮನೆಯವರನ್ನು ಕೊಲೆ ಮಾಡುವುದಾಗಿ ಯುವಕನನ್ನು ಬೆದರಿಸಿದ್ದಾರೆ. ಬಲವಂತವಾಗಿ 3 ವರ್ಷಗಳ ಕಾಲ ಯುವಕನಿಂದ ಭಿಕ್ಷಾಟನೆ ಮಾಡಿಸಿ ಹಣ ಪಡೆದಿದ್ದಾರೆ. ಕಳೆದ ಜು.17ರಂದು ನೀನು ಗಂಡಸಾಗಿ ರುವಾಗಲೇ ಪ್ರತಿ ದಿನ 2000 ರು. ದುಡಿದು ಕೊಡುತ್ತಿರುವೆ. ನೀನು ಹೆಣ್ಣಾದರೆ ಹೆಚ್ಚು ದುಡಿಯಬಹುದು ಎಂದಿದ್ದಾರೆ. (Crime news)

ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿದರು: ಬಳಿಕ ಆರೋಪಿಗಳು ಗಾಂಜಾ, ಮದ್ಯ ಸೇವಿಸಿ ಮಹಿಳೆ ಯೊಬ್ಬಳನ್ನು ಮನೆಗೆ ಕರೆಸಿಕೊಂಡು ಬಲವಂತವಾಗಿ ಯುವಕನಿಗೆ ಇಂಜೆಕ್ಷನ್ ನೀಡಿ ಪ್ರಜ್ಞೆ ತಪ್ಪಿಸಿದ್ದಾರೆ. ನಂತರ ಆತನ ಮರ್ಮಾಂಗ ಕತ್ತರಿಸಿದ್ದಾರೆ. ಆತ ಎಚ್ಚರಗೊಂಡಾಗ ಮರ್ಮಾಂಗದ ಬಳಿ ರಕ್ತಗಾಯ ವಾಗಿದ್ದು, ಪೈಪ್‌ವೊಂದನ್ನು ಅಳವಡಿಸಿರುವುದು ಕಂಡು ಬಂದಿದೆ. ಬಳಿಕ ಆರೋಪಿಗಳು ಯುವಕನನ್ನು ಆ.3ರ ವರೆಗೂ ಆ ಮನೆಯಲ್ಲೇ ಕೂಡಿ ಹಾಕಿ ಬಳಿಕ ಬೇರೆಡೆ ಕರೆದೊಯು ಪೂಜೆ ಮಾಡಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆ ಕೆಲಸಕ್ಕೆ ಒತ್ತಾಯ:

ಇನ್ನು ಮುಂದೆ ನೀನು ಭಿಕ್ಷಾಟನೆ ಮಾಡುವುದರ ಜತೆಗೆ ಲೈಂಗಿಕ ಕಾರ್ಯಕರ್ತೆಯಾಗಿ ಕೆಲಸ ಮಾಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಯುವಕ ಒಪ್ಪದಿದ್ದಾಗ 5 ಲಕ್ಷ ರು. ಕೊಡುವಂತೆ ಒತ್ತಾಯಿಸಿದ್ದಾರೆ. ಆರೋಪಿ ಗಳ ಹಿಂಸೆ ತಾಳಲಾರದೆ ತಪ್ಪಿಸಿಕೊಂಡುದೂರು ನೀಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Astrology: ನಿಮಗೆ ಹಣದ ಸಮಸ್ಯೆ ಉಂಟಾಗುವ ಸಾಧ್ಯತೆ.. ದಿನ ಭವಿಷ್ಯ: ಬುಧವಾರ, ಆಗಸ್ಟ್ 21, 2024, ದೈನಂದಿನ ರಾಶಿ ಭವಿಷ್ಯ

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ