Crime News: Vice President Attacks Gramm Staff With Slippers

Crime News: ಗ್ರಾಪಂ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಉಪಾಧ್ಯಕ್ಷೆ!

Crime News: ಗ್ರಾಪಂ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಉಪಾಧ್ಯಕ್ಷೆ!

ವಿಜಯಪುರ: ತಾಲೂಕಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಗ್ರಾಮ ಪಂಚಾಯಿತಿ ಲೆಕ್ಕ ಪರಿಶೋಧನೆ ವೇಳೆ ಗಲಾಟೆ ಉಂಟಾಗಿ ಗ್ರಾಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ (Crime news) ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಹೌದು, ಕೆರೂಟಗಿ ಗ್ರಾಮದಲ್ಲಿ ಸೆಪ್ಟೆಂಬರ್ 14ರಂದು ಈ ಘಟನೆ ಜರುಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಶರಣಮ್ಮ ಸಂದಿಮನಿ ಎಂಬುವವರೇ ದಾಳಿ ಮಾಡಿದ ಉಪಾಧ್ಯಕ್ಷೆ. ಗ್ರಾಪಂ ಕಾಯಕಮಿತ್ರ ದ್ರೌಪದಿ ಹಿರೇಮಠ ಥಳಿತಕ್ಕೆ ಒಳಗಾದವರು ಎನ್ನಲಾಗಿದೆ.

ಗ್ರಾಪಂ ಲೆಕ್ಕ ಪರಿಶೋಧಕ್ಕೆ ಉಪಾಧ್ಯಕ್ಷೆ ಶರಣಮ್ಮ ಪತಿ ರಾಜಶೇಖರ್ ಸಂದಿಮನಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಜಿಲ್ಲಾ ಪಂಚಾಯಿತಿಯಿಂದ ಆಗಮಿಸಿದ್ದ ಲೆಕ್ಕ ಪರಿಶೋಧಕರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಮತ್ತು ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಗಲಾಟೆ ಕಾರಣದಿಂದ ಗ್ರಾಮ ಕಾಯಕ ಮಿತ್ರ ದ್ರೌಪದಿ ಹಿರೇಮಠ ಮನೆಗೆ ಬಂದಿದ್ದರು. ಆದರೂ, ದ್ರೌಪದಿಯ ಮನೆಗೆ ತೆರಳಿ ಉಪಾಧ್ಯಕ್ಷೆ ಶರಣಮ್ಮ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ. ಅಲ್ಲದೇ, ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತು ಹಾಕಲಾಗಿದೆ. ಇದಕ್ಕೆ ಪತ್ನಿಗೆ ಪತಿ ಕುಮ್ಮಕ್ಕು ನೀಡಿದ್ದಾನೆ ಎನ್ನಲಾಗಿದೆ.

ಬಳಿಕ ಹಲ್ಲೆಗೆ ಒಳಗಾದ ಮಹಿಳೆ ಕಲಕೇರಿ ಪೊಲೀಸ್ ಠಾಣೆಗೆ ತೆರಳಿ ರಕ್ಷಣೆ ಕೋರಿದರೂ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೂಡ ಮಾಡಲಾಗಿದೆ. ಶರಣಮ್ಮ ಹಾಗೂ ರಾಜಶೇಖರ್ ಅವರನ್ನು ಕರೆಯಿಸಿ ಕೇವಲ ಎಚ್ಚರಿಕೆ ಕೊಟ್ಟು ಪೊಲೀಸರು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ಇದಲ್ಲದೆ, ಮತ್ತೆ ಸೆ.17ರಂದು ದ್ರೌಪದಿ ಹಿರೇಮಠ ಮೇಲೆ ಉಪಾಧ್ಯಕ್ಷೆಯ ಪತಿ ರಾಜಶೇಖರ ಎರಡನೇ ಬಾರಿ ಹಲ್ಲೆ ಮಾಡಿದ್ದಾನೆ. ಇದರಿಂದ ಎಚ್ಚೆತ್ತ ಗ್ರಾಪಂ ಪಿಡಿಒ ಎ.ಟಿ.ಅಂಗಡಿ ಹಾಗೂ ಕಾರ್ಯದರ್ಶಿ ಎ.ಎಸ್. ಮುಜಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದರ ಪ್ರಕಾರ ರಾಜಶೇಖರ ಸಂದಿಮನಿ ವಿರುದ್ಧ ಸರ್ಕಾರಿ ಸೇವೆಗೆ ಅಡ್ಡಿ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೇ ವೇಳೆ, ದ್ರೌಪತಿ ಹಿರೇಮಠ ನೀಡಿದ ದೂರು ಸ್ವೀಕರಿಸಬೇಕು ಮತ್ತು ಹಲ್ಲೆ ಮಾಡಿರುವ ಗ್ರಾಪಂ ಉಪಾಧ್ಯಕ್ಷೆಯ ವಿರುದ್ಧ ಕ್ರಮ ಜರುಗಿಸಬೇಕು ಎಂಬ ಒತ್ತಾಯವನ್ನು ಸಾರ್ವಜನಿಕರು ಮಾಡಿದ್ದಾರೆ.

ಇದನ್ನೂ ಓದಿ: Ration card : ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯೇ? ಇಲ್ಲವೇ? ಪರಿಶೀಲಿಸಿ..

Latest News

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಮುದ್ದೇಬಿಹಾಳ : ಬೇಸಿಗೆಯ ಧಗೆಯಲ್ಲಿ ಪ್ರಾಣಿ ಪಕ್ಷಿಗಳು ಕುಡಿಯುವ ನೀರು, ಆಹಾರ ಇಲ್ಲದೇ ಬಹಳ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ(ವೆಂಕಟೇಶ ನಗರ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬಸು

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ತಮಗೆ ಸಾಷ್ಟಾಂಗ ಹಾಕಿರುವುದಾಗಿ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ಶಾಸಕ ನಾಡಗೌಡರು

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

ಮುದ್ದೇಬಿಹಾಳ : ಪಟ್ಟಣದ ಐದು ಪರೀಕ್ಷಾ ಕೇಂದ್ರಗಳು ಸೇರಿದಂತೆ ಮುದ್ದೇಬಿಹಾಳ,ತಾಳಿಕೋಟಿ,ನಾಗರಬೆಟ್ಟ ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಗಳು ಅತ್ಯಂತ ಬಿಗಿ ಭದ್ರತೆಯಲ್ಲಿ ಕಟ್ಟುನಿಟ್ಟಾಗಿ ನಡೆದಿರುವುದಾಗಿ ವರದಿಯಾಗಿದೆ. ಪಟ್ಟಣದ ವಿಬಿಸಿ ಪ್ರೌಢಶಾಲೆ,ಜ್ಞಾನ ಭಾರತಿ ವಿದ್ಯಾಮಂದಿರ, ಚಿನ್ಮಯ ಜೆ.ಸಿ.ಆಂಗ್ಲಮಾಧ್ಯಮ ಪ್ರೌಢಶಾಲೆ,ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಶಿರೋಳ,ಅಭ್ಯುದಯ ಆಂಗ್ಲಮಾಧ್ಯಮ ಪ್ರೌಢಶಾಲೆ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಭಾಗದ ಪರೀಕ್ಷಾ ಕೇಂದ್ರಗಳಲ್ಲೂ ಯಾವುದೇ ಗೊಂದಲವಿಲ್ಲದೇ ಕಟ್ಟುನಿಟ್ಟಾಗಿ ಪರೀಕ್ಷೆಗಳು ನಡೆದಿವೆ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಧ್ಯಕ್ಷರು,ತಹಶೀಲ್ದಾರ್ ಕೀರ್ತಿ ಚಾಲಕ ತಿಳಿಸಿದರು.

ಸೌಹಾರ್ದತೆ ಮೆರೆದ ಮನಿಯಾರ್ :                                          ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಸೌಹಾರ್ದತೆ ಮೆರೆದ ಮನಿಯಾರ್ : ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಮುದ್ದೇಬಿಹಾಳ : ಸಮಾಜದಲ್ಲಿ ಆರ್ಥಿಕವಾಗಿ ಸಬಲತೆ ಸಾಧಿಸಿದವರು ಬಡವರು,ನಿರ್ಗತಿಕರಿಗೆ ಹಬ್ಬದ ಸಮಯಗಳಲ್ಲಿ ನೆರವಾಗುವ ಕಾರ್ಯ ಮಾಡಬೇಕು ಎಂದು ಸಿಪಿಐ ಮೊಹ್ಮದ್ ಫಸಿವುದ್ದೀನ್ ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಉದ್ಯಮಿ ಅಯ್ಯೂಬ ಮನಿಯಾರ್ ಅವರ ಮನಿಯಾರ್ ಚಾರಿಟೇಬಲ್ ಟ್ರಸ್ಟ್ನಿಂದ ಮಂಗಳವಾರ ರಂಜಾನ್ ಹಬ್ಬದ ನಿಮಿತ್ಯ ಬಡವರಿಗೆ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮನಿಯಾರ್ ಅವರು ತಮ್ಮ ತಂದೆ ತಾಯಿ ಸ್ಮರಣಾರ್ಥ ಈ ಕಿಟ್‌ಗಳನ್ನು ವಿತರಿಸುತ್ತಿದ್ದಾರೆ.ಆರ್ಥಿಕ ಸಬಲತೆ ಸಾಧಿಸಿದವರು ಇಂತಹ ಕಾರ್ಯಗಳನ್ನು ಮಾಡುತ್ತಿದ್ದರೆ