Crime News: Vice President Attacks Gramm Staff With Slippers

Crime News: ಗ್ರಾಪಂ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಉಪಾಧ್ಯಕ್ಷೆ!

Crime News: ಗ್ರಾಪಂ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಉಪಾಧ್ಯಕ್ಷೆ!

ವಿಜಯಪುರ: ತಾಲೂಕಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಗ್ರಾಮ ಪಂಚಾಯಿತಿ ಲೆಕ್ಕ ಪರಿಶೋಧನೆ ವೇಳೆ ಗಲಾಟೆ ಉಂಟಾಗಿ ಗ್ರಾಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ (Crime news) ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಹೌದು, ಕೆರೂಟಗಿ ಗ್ರಾಮದಲ್ಲಿ ಸೆಪ್ಟೆಂಬರ್ 14ರಂದು ಈ ಘಟನೆ ಜರುಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಶರಣಮ್ಮ ಸಂದಿಮನಿ ಎಂಬುವವರೇ ದಾಳಿ ಮಾಡಿದ ಉಪಾಧ್ಯಕ್ಷೆ. ಗ್ರಾಪಂ ಕಾಯಕಮಿತ್ರ ದ್ರೌಪದಿ ಹಿರೇಮಠ ಥಳಿತಕ್ಕೆ ಒಳಗಾದವರು ಎನ್ನಲಾಗಿದೆ.

ಗ್ರಾಪಂ ಲೆಕ್ಕ ಪರಿಶೋಧಕ್ಕೆ ಉಪಾಧ್ಯಕ್ಷೆ ಶರಣಮ್ಮ ಪತಿ ರಾಜಶೇಖರ್ ಸಂದಿಮನಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಜಿಲ್ಲಾ ಪಂಚಾಯಿತಿಯಿಂದ ಆಗಮಿಸಿದ್ದ ಲೆಕ್ಕ ಪರಿಶೋಧಕರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಮತ್ತು ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಗಲಾಟೆ ಕಾರಣದಿಂದ ಗ್ರಾಮ ಕಾಯಕ ಮಿತ್ರ ದ್ರೌಪದಿ ಹಿರೇಮಠ ಮನೆಗೆ ಬಂದಿದ್ದರು. ಆದರೂ, ದ್ರೌಪದಿಯ ಮನೆಗೆ ತೆರಳಿ ಉಪಾಧ್ಯಕ್ಷೆ ಶರಣಮ್ಮ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ. ಅಲ್ಲದೇ, ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತು ಹಾಕಲಾಗಿದೆ. ಇದಕ್ಕೆ ಪತ್ನಿಗೆ ಪತಿ ಕುಮ್ಮಕ್ಕು ನೀಡಿದ್ದಾನೆ ಎನ್ನಲಾಗಿದೆ.

ಬಳಿಕ ಹಲ್ಲೆಗೆ ಒಳಗಾದ ಮಹಿಳೆ ಕಲಕೇರಿ ಪೊಲೀಸ್ ಠಾಣೆಗೆ ತೆರಳಿ ರಕ್ಷಣೆ ಕೋರಿದರೂ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೂಡ ಮಾಡಲಾಗಿದೆ. ಶರಣಮ್ಮ ಹಾಗೂ ರಾಜಶೇಖರ್ ಅವರನ್ನು ಕರೆಯಿಸಿ ಕೇವಲ ಎಚ್ಚರಿಕೆ ಕೊಟ್ಟು ಪೊಲೀಸರು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ಇದಲ್ಲದೆ, ಮತ್ತೆ ಸೆ.17ರಂದು ದ್ರೌಪದಿ ಹಿರೇಮಠ ಮೇಲೆ ಉಪಾಧ್ಯಕ್ಷೆಯ ಪತಿ ರಾಜಶೇಖರ ಎರಡನೇ ಬಾರಿ ಹಲ್ಲೆ ಮಾಡಿದ್ದಾನೆ. ಇದರಿಂದ ಎಚ್ಚೆತ್ತ ಗ್ರಾಪಂ ಪಿಡಿಒ ಎ.ಟಿ.ಅಂಗಡಿ ಹಾಗೂ ಕಾರ್ಯದರ್ಶಿ ಎ.ಎಸ್. ಮುಜಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದರ ಪ್ರಕಾರ ರಾಜಶೇಖರ ಸಂದಿಮನಿ ವಿರುದ್ಧ ಸರ್ಕಾರಿ ಸೇವೆಗೆ ಅಡ್ಡಿ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೇ ವೇಳೆ, ದ್ರೌಪತಿ ಹಿರೇಮಠ ನೀಡಿದ ದೂರು ಸ್ವೀಕರಿಸಬೇಕು ಮತ್ತು ಹಲ್ಲೆ ಮಾಡಿರುವ ಗ್ರಾಪಂ ಉಪಾಧ್ಯಕ್ಷೆಯ ವಿರುದ್ಧ ಕ್ರಮ ಜರುಗಿಸಬೇಕು ಎಂಬ ಒತ್ತಾಯವನ್ನು ಸಾರ್ವಜನಿಕರು ಮಾಡಿದ್ದಾರೆ.

ಇದನ್ನೂ ಓದಿ: Ration card : ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯೇ? ಇಲ್ಲವೇ? ಪರಿಶೀಲಿಸಿ..

Latest News

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಮುದ್ದೇಬಿಹಾಳ : ಪ್ರಜಾನಾಡು ಡಿಜಿಟಲ್ ಸುದ್ದಿವಾಹಿನಿಯ ದಿನದರ್ಶಿಕೆ ಲೋಕಾರ್ಪಣೆ ಕಾರ್ಯಕ್ರಮ ಡಿ.22 ರಂದು ಸಂಜೆ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಮುದ್ದೇಬಿಹಾಳ : ಮಕ್ಕಳು ಹುಟ್ಟಿನಿಂದಲೇ ಅಂಗವೈಕಲ್ಯತೆ ಹೊಂದುವುದನ್ನು ತಪ್ಪಿಸಲು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ

T20 World Cup 2026 ಏಳು ಆಟಗಾರರು ಔಟ್!

T20 World Cup 2026 ಏಳು ಆಟಗಾರರು ಔಟ್!

T20 World Cup 2026: ಟಿ20 ವಿಶ್ವಕಪ್​​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

ಮೈಸೂರು: ರಾಜ್ಯದಲ್ಲಿ ಘೋರ ದುರಂತ ಎನ್ನುವಂತೆ ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಧಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಮೈಸೂರಲ್ಲಿ ಸಂಭವಿಸಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಜಯಗಿರಿ ಹಾಡಿಯಲ್ಲಿ ಈ ದುರಂತ ಸಂಭವಿಸಿದೆ. ರಮ್ಯಾ ಮತ್ತು ಬಸಪ್ಪ ಎಂಬುವರ ದಂಪತಿಗಳ ಪುತ್ರಿ ವೇದಾ(2) ಬಿಸಿ ನೀರಿನ ಪಾತ್ರೆಗೆ ಬಿದ್ದು ಸಾವನ್ನಪ್ಪಿದ್ದಾಳೆ. ತಾಯಿ ಸ್ನಾನ ಮಾಡಿಸೋದಕ್ಕೆ ಬಿಸಿ ನೀರು ತೋಡಿ, ತಣ್ಣೀರು ಬೆರೆಸೋದಕ್ಕೆ ತರಲು ಹೋಗಿದ್ದಾರೆ. ಈ ವೇಳೆ ವೇದಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗರಸಂಗಿ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಂಗವಾಗಿ ಶನಿವಾರ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಲಾಯಿತು. ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, "ಪೋಲಿಯೋ ಮಾರಕ ರೋಗವಾಗಿದ್ದು, ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು ಎಂದರು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಹಾಗೂ