Murder Case Image of murder symbol

Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತ್ನಿಗೆ ಪತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದಿದ್ದ (Crime Story). ಈ ಕುಕೃತ್ಯ ಎಸಗಿದ ಪತಿಯನ್ನು ಕೃತ್ಯ ನಡೆದ ಕೆಲವೇ ತಾಸಿನಲ್ಲಿ ಕೆಂಗೇರಿ ಠಾಣೆ ಪೊಲೀಸರು ಬುಧವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಟ್ಟಿಗನಹಳ್ಳಿ ನಿವಾಸಿ ಗೌರಿ (30) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಇನ್ನು ಈ ಕೃತ್ಯದ (Crime story) ಸಂಬಂಧ ಮೃತಳ ಪತಿ ನಾಗೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Join Our Telegram: https://t.me/dcgkannada

ಜಟ್ಟಿಗನಹಳ್ಳಿ ಸ್ಮಶಾನ ಸಮೀಪ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಕೊಂದು ನಾಗೇಶ್ ಪರಾರಿಯಾಗಿದ್ದ. ಖಾಲಿ ಪ್ರದೇಶದಲ್ಲಿ ರಕ್ತದ ಮಡುವಿನಲ್ಲಿ ಅಪರಿಚಿತ ಮೃತದೇಹವನ್ನು ಕಂಡು
ಪೊಲೀಸ್ ನಿಯಂತ್ರಣ ಕೊಠಡಿಗೆ ಬೆಳಗ್ಗೆ ಸಾರ್ವಜನಿಕರು ಕರೆ ಮಾಡಿದ್ದರು.

ಈ ಮಾಹಿತಿ ಪಡೆದು ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು, ಕೂಡಲೇ ಮೃತಳ ಗುರುತು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Murder Case: ವಿಚ್ಛೇದನ‌ ಕೇಳಿದ ಪತ್ನಿ.. ದೇಗುಲಕ್ಕೆ ಕರೆದುಕೊಂಡು ಹೋಗಿ ಹತ್ಯೆಗೈದ ಪತಿ..!

ಎಂಟು ವರ್ಷಗಳ ಹಿಂದೆ ರಾಮನಗರ ಜಿಲ್ಲೆಯ ಗೌರಿ ಹಾಗೂ ನಾಗೇಶ್ ವಿವಾಹವಾಗಿದ್ದರು. ಇತ್ತೀಚೆಗೆ ಕೌಟುಂಬಿಕ ಕಾರಣಕ್ಕೆ ದಂಪತಿ ಮಧ್ಯೆ ಮನಸ್ತಾಪವಾಗಿತ್ತು. ಇದೇ ವಿಚಾರವಾಗಿ ಪರಸರ ಜಗಳವಾಡುತ್ತಿದ್ದರು. ಕೊನೆಗೆ ದಾಂಪತ್ಯ ವಿರಸ ಕೊಲೆಯಲ್ಲಿ ಅಂತ್ಯವಾಗಿದೆ.

Latest News

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

ಮುದ್ದೇಬಿಹಾಳ : ಬರಗಾಲ ಬಿದ್ದಿದೆ.ಹೊಲದಲ್ಲಿ ಬಿತ್ತಿರುವ ಬೆಳೆಗಳು ಒಣಗಿ ಹೋಗುತ್ತಿವೆ.ದನ-ಕರುಗಳಿಗೆ ಕುಡಿಯಲು ನೀರಿಲ್ಲ. ಹೊಲಕ್ಕೆ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು ಜತನದಿಂದ ಕಾಪಾಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಮಹಿಳಾಪರ ಚಿಂತಕಿ ರಾಜೇಶ್ವರಿ ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 80 ನೇ ಸ್ವಾತಂತ್ರ್ಯೋ್ತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಕ್ಕಳಲ್ಲಿ ದೇಶಾಭಿಮಾನ,ದೇಶಪ್ರೇಮ ಭಾವನೆ ಮೂಡಿಸಲು ಶಿಕ್ಷಕರು ,ಪಾಲಕರು ಶ್ರಮಿಸಬೇಕು ಎಂದರು. ಶಾಲೆಯ ಅಧ್ಯಕ್ಷ ಬಸಮ್ಮ ಸಿದರಡ್ಡಿ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಪೊಲೀಸ  ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಎಎಸ್ಐ ಎಂ.ಪಿ.ಹೋಕಳೆ, ಪೊಲೀಸ ಸಿಬ್ಬಂದಿ ಬಸವರಾಜ ಸಜ್ಜನ ಹಾಗೂ ತಂಗಡಗಿ ಗ್ರಾಮದ ವಿಕಾಸ ಕಮಲಾಪೂರ ಹಾಗೂ ಬಂಡಿನಾಥ ಕಮಲಾಪೂರ ,ರವಿ ಹಾಲ್ಯಾಳ ಅವರನ್ನು ಸನ್ಮಾನಿಸಲಾಯಿತು. ಎಎಸ್ಐ ಎಂ.ಪಿ.ಹೋಕಳೆ ಧ್ವಜಾರೋಹಣ ಮಾಡಿದರು.ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ, ಮುಖಂಡರಾದ ರಾಜುಗೌಡ ಕೊಂಗಿ,ಸ್ನೇಹಸಿರಿ ಸೇವಾ ಸಂಘದ ಸಂಚಾಲಕ ಬಸವರಾಜ ನಿಡಗುಂದಿ ಸೇರಿದಂತೆ