Murder Case Image of murder symbol

Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತ್ನಿಗೆ ಪತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದಿದ್ದ (Crime Story). ಈ ಕುಕೃತ್ಯ ಎಸಗಿದ ಪತಿಯನ್ನು ಕೃತ್ಯ ನಡೆದ ಕೆಲವೇ ತಾಸಿನಲ್ಲಿ ಕೆಂಗೇರಿ ಠಾಣೆ ಪೊಲೀಸರು ಬುಧವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಟ್ಟಿಗನಹಳ್ಳಿ ನಿವಾಸಿ ಗೌರಿ (30) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಇನ್ನು ಈ ಕೃತ್ಯದ (Crime story) ಸಂಬಂಧ ಮೃತಳ ಪತಿ ನಾಗೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Join Our Telegram: https://t.me/dcgkannada

ಜಟ್ಟಿಗನಹಳ್ಳಿ ಸ್ಮಶಾನ ಸಮೀಪ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಕೊಂದು ನಾಗೇಶ್ ಪರಾರಿಯಾಗಿದ್ದ. ಖಾಲಿ ಪ್ರದೇಶದಲ್ಲಿ ರಕ್ತದ ಮಡುವಿನಲ್ಲಿ ಅಪರಿಚಿತ ಮೃತದೇಹವನ್ನು ಕಂಡು
ಪೊಲೀಸ್ ನಿಯಂತ್ರಣ ಕೊಠಡಿಗೆ ಬೆಳಗ್ಗೆ ಸಾರ್ವಜನಿಕರು ಕರೆ ಮಾಡಿದ್ದರು.

ಈ ಮಾಹಿತಿ ಪಡೆದು ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು, ಕೂಡಲೇ ಮೃತಳ ಗುರುತು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Murder Case: ವಿಚ್ಛೇದನ‌ ಕೇಳಿದ ಪತ್ನಿ.. ದೇಗುಲಕ್ಕೆ ಕರೆದುಕೊಂಡು ಹೋಗಿ ಹತ್ಯೆಗೈದ ಪತಿ..!

ಎಂಟು ವರ್ಷಗಳ ಹಿಂದೆ ರಾಮನಗರ ಜಿಲ್ಲೆಯ ಗೌರಿ ಹಾಗೂ ನಾಗೇಶ್ ವಿವಾಹವಾಗಿದ್ದರು. ಇತ್ತೀಚೆಗೆ ಕೌಟುಂಬಿಕ ಕಾರಣಕ್ಕೆ ದಂಪತಿ ಮಧ್ಯೆ ಮನಸ್ತಾಪವಾಗಿತ್ತು. ಇದೇ ವಿಚಾರವಾಗಿ ಪರಸರ ಜಗಳವಾಡುತ್ತಿದ್ದರು. ಕೊನೆಗೆ ದಾಂಪತ್ಯ ವಿರಸ ಕೊಲೆಯಲ್ಲಿ ಅಂತ್ಯವಾಗಿದೆ.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ