ಶಿವರಾತ್ರಿ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ: ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಿ-ಕಾಶೀಬಾಯಿ ರಾಂಪೂರ

ಶಿವರಾತ್ರಿ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ: ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಸಮಾಜದಲ್ಲಿ ಸಾಕಷ್ಟು ಜನ ಸಂಪತ್ತು ಹೊಂದಿದವರಿದ್ದಾರೆ.ಆದರೆ ಕೊಡುವ ಮನಸ್ಸು ಎಲ್ಲರಲ್ಲೂ ಇರುವುದಿಲ್ಲ.ನಿಸ್ವಾರ್ಥದಿಂದ ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ನಿಕಟಪೂರ್ವ ಕಾರ್ಯದರ್ಶಿ ಕಾಶೀಬಾಯಿ ರಾಂಪೂರ ಹೇಳಿದರು.

ಪಟ್ಟಣದ ನೇತಾಜಿ ನಗರದಲ್ಲಿ ಮಂಗಳವಾರ ಕಡುಬಡ ಮಹಿಳೆಯರಿಗೆ ಶಿವರಾತ್ರಿ ಹಬ್ಬದ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ ಮಾಡಿ ಅವರು ಮಾತನಾಡಿದರು.

ಸಮಾಜದಲ್ಲಿ ಸಾಕಷ್ಟು ಜನ ನಿರ್ಗತಿಕರಿರುತ್ತಾರೆ.ನಾವು ಬರುವಾಗ ಏನು ತಂದಿಲ್ಲ,ಹೋಗುವಾಗಲೂ ಏನೂ ಒಯ್ಯುವುದಿಲ್ಲ.ಆದರೆ ಜೀವಿತಾವಧಿಯಲ್ಲಿ ನಾಲ್ಕು ಜನರಿಗೆ ಸಹಾಯ ಆಗುವ ಕೆಲಸ ಮಾಡಿದರೆ ನಮಗೆ ಆತ್ಮತೃಪ್ತಿ ದೊರೆಯುತ್ತದೆ.ಕೆಲವೇ ಜನಕ್ಕೆ ಹಬ್ಬಕ್ಕೆ ಆಗುವಷ್ಟು ದಿನಸಿ,ಬಟ್ಟೆ ಕೊಟ್ಟಿರುವ ಉದ್ದೇಶ ನಮ್ಮ ಕುಟುಂಬದಿOದ ಕಳೆದ ಮೂವ್ವತ್ತು ವರ್ಷಗಳಿಂದ ಈ ಸೇವೆ ಮಾಡಿಕೊಂಡು ಬಂದಿದ್ದೇವೆ ಎಂದು ತಿಳಿಸಿದರು.

ನೇತಾಜಿ ನಗರದ ನಿವಾಸಿ ರೇಣುಕಾ ಬಾಗೇವಾಡಿ ಮಾತನಾಡಿ, ಸಮಾಜದಲ್ಲಿ ಉಳ್ಳವರು ಸಾಕಷ್ಟು ಜನ ಇದ್ದಾರೆ.ಆದರೆ ಕೊಡುವ ಮನಸ್ಸು ಇರುವುದಿಲ್ಲ.ಆದರೆ ಕಾಶೀಬಾಯಿ ರಾಂಪೂರ ಅವರು ನಮ್ಮ ಹಿಂದುಳಿದ ಪ್ರದೇಶಕ್ಕೆ ಬಂದು ಕಡುಬಡ,ನಿರ್ಗತಿಕರನ್ನು ಗುರುತಿಸಿ ಕಿಟ್ ವಿತರಿಸಿರುವುದನ್ನು ಅಭಿನಂದಿಸುತ್ತೇವೆ.ಅವರ ಜನಸೇವೆ ನಿರಂತರವಾಗಿ ಸಾಗಲಿ ಎಂದು ಹೇಳಿದರು.

ನೇತಾಜಿ ನಗರದ ನಿವಾಸಿ ಸುಜಾತಾ ಬಂಡಿವಡ್ಡರ ಮಾತನಾಡಿದರು.ವಿ.ಎಚ್.ಪಿ ತಾಲ್ಲೂಕು ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ,ಸುವರ್ಣಾ ಕತ್ತಿ,ಬಿಜೆಪಿ ಮುಖಂಡ ಶೇಖರ ಢವಳಗಿ,ಶಿವಮ್ಮ ವಡ್ಡರ ಇದ್ದರು.ಶಿವರಾತ್ರಿ ಹಬ್ಬದ ಆಚರಣೆ ಸಲುವಾಗಿ ಹತ್ತು ಜನಕ್ಕೆ ದಿನಸಿ ಕಿಟ್, ಸೀರೆ,ನಗದು ಹಣಕಾಸಿನ ಸಹಾಯ ಮಾಡಿದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,