ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು ಕ್ರೈಂ ಪಿ.ಎಸ್.ಆಯ್ ಆರ್.ಎಸ್.ಬಂಗಿ ಹೇಳಿದರು.

ಪಟ್ಟಣದ ವಿವೇಕಾನಂದ ವಿದ್ಯಾ ಪ್ರಸಾರ ಸಮಿತಿ ಅಡಿಯಲ್ಲಿ ನಡೆಯುವ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ವಿದ್ಯಾ ಸಂಸ್ಥೆಯ 40ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ. ವ್ಯಸನಕ್ಕೆ ಒಳಗಾಗಬಾರದು. ವ್ಯಸನಮುಕ್ತ ಸದ್ಗುಣ ಯುಕ್ತ ವ್ಯಕ್ತಿಯನ್ನು ನಿರ್ಮಾಣ ಮಾಡುವಲ್ಲಿ ಮನೆ, ಶಾಲೆ, ಸಮಾಜದ ಪಾತ್ರ ಹಿರಿದಾಗಿದೆ. ಮಕ್ಕಳು ವಿದ್ಯಾರ್ಥಿಯ ದೆಸೆಯಿಂದಲೇ ತಮ್ಮ ಬದುಕನ್ನು ಕಟ್ಟಿಕೊಳ್ಳುವ ಮಹತ್ವಾಕಾಂಕ್ಷೆಯನ್ನು ಹೊಂದಿರಬೇಕು ಎಂದರು.

ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಮಾತನಾಡಿ, ಆಧುನಿಕ ಕಾಲಘಟ್ಟದಲ್ಲಿ ಪರಿವರ್ತನೆಗೆ ಬದಲಾದ ಪದ್ಧತಿ ಶಿಕ್ಷಣದಲ್ಲಿ ಮೂಡಿಬರಬೇಕಾಗಿದೆ. ವಿದ್ಯಾರ್ಥಿ ಜೀವನದ ಗುರಿ ಜ್ಞಾನಾರ್ಜನೆಯಾಗಿರಬೇಕು ಎಂದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎA.ಬೆಳಗಲ್, ನಿವೃತ್ತ ಪ್ರಾಧ್ಯಾಪಕ ಬಿ.ಎಮ್. ಹಿರೇಮಠ, ಕರ್ನಾಟಕ ಅರ್ಬನ್ ಬ್ಯಾಂಕಿನ ವ್ಯವಸ್ಥಾಪಕಿ ಸುಮಾ ನಾಡಗೌಡ, ಅಧ್ಯಕ್ಷ ಬಿ.ಪಿ.ಕುಲಕರ್ಣಿ ಸೇರಿದಂತೆ ಗಣ್ಯರು ಮಾತನಾಡಿದರು.

ಬಿ.ಎಸ್.ಎಫ್ ಸೇನೆಗೆ ಸೇರಿದ ಕಾಲೇಜಿನ ಹಿರಿಯ ವಿದ್ಯಾರ್ಥಿ ಲಾಳೆಮುಶ್ಯಾಕ್ ನಾಯ್ಕೋಡಿ ಹಾಗೂ ಕಳೆದ ವರ್ಷ ಪಿ.ಯು.ಸಿ ದ್ವಿತೀಯ ವರ್ಷದಲ್ಲಿ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶಾಲೆಗೆ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ಸಂಸ್ಥೆಯ ಉಪಾಧ್ಯಕ್ಷರಾದ ಡಾ. ಎಸ್.ಬಿ.ವಡವಡಗಿ, ಕಾರ್ಯದರ್ಶಿ ಪ್ರಭು ಕಡಿ, ಕೋಶಾಧ್ಯಕ್ಷ ಎಮ್.ಪಿ.ದಂಡಾವತಿ, ನಿರ್ದೇಶಕರುಗಳಾದ ಬಿ.ಆರ್.ಓಸ್ವಾಲ್, ಜಿ.ಎಸ್.ಓಸ್ವಾಲ್, ಲೀಲಾ ಭಟ್ಟ, ಜಿ.ಜೆ.ಪಾದಗಟ್ಟಿ, ಶಂಕರ ಬೇವಿನಗಿಡದ, ಬಸವರಾಜ ನಾಲತವಾಡ, ಶಾಂತಾ ಭಟ್ಟ, ಸುಬಾಷ್ ಬಿದಿರಕುಂದಿ, ಮೀನಾಕ್ಷೀ ಕುಲಕರ್ಣಿ, ಉದ್ಯಮಿ ಗೋಪಾಲ ನಾವಡ, ಸಾಹಿತಿ ಅಶೋಕ ಮಣಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

ಉಪನ್ಯಾಸಕಿ ರಚನಾ ಕುಲಕರ್ಣಿ ಪ್ರಾರ್ಥಿಸಿದರು.ಮುಖ್ಯಗುರುಗಳಾದ ರಾಮಚಂದ್ರ ಹೆಗಡೆ ಮತ್ತು ಶಿಕ್ಷಕಿ ರಂಜಿತಾ ಭಟ್ಟ ಸ್ವಾಗತಿಸಿದರು. ಪ್ರಾಚಾರ್ಯ ಅರುಣ ಹುನಗುಂದ ವಾರ್ಷಿಕ ವರದಿ ವಾಚಿಸಿದರು. ಉಪನ್ಯಾಸಕರಾದ ವಿ.ವಿ.ಪಾಟೀಲ್ ಮತ್ತು ಶೋಭಾ ನಾಗೂರ ಕಾರ್ಯಕ್ರಮ ನಿರ್ವಹಿಸಿದರು.ಮುಖ್ಯಶಿಕ್ಷಕಿ ಸರಸ್ವತಿ ಮಡಿವಾಳರ ವಂದಿಸಿದರು. ಶಿಕ್ಷಕರುಗಳಾದ ಬಿ.ಆರ್.ಬೆಳ್ಳಿಕಟ್ಟಿ, ಮಂಜುನಾಥ ಪಡದಾಳಿ ಸೇರಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

Latest News

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಮುದ್ದೇಬಿಹಾಳ : ಬಿರು ಬಿಸಿಲಿನ ತಾಪದ ತೀವ್ರತೆಗೆ ಗುಡಿಸಲು ಹಾಗೂ ಜಾನುವಾರು ಕಟ್ಟುವ ಶೆಡ್‌ಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಎರಡು ಮೇಕೆ ಹಾಗೂ 20ಕ್ಕೂ ಅಧಿಕ ಕೋಳಿಗಳು ಸಜೀವ ದಹನಗೊಂಡಿರುವ ಘಟನೆ ತಾಲ್ಲೂಕಿನ ಅಡವಿ ಹುಲಗಬಾಳದಲ್ಲಿ ಶನಿವಾರ ನಡೆದಿದೆ. ಅಡವಿ ಹುಲಗಬಾಳ ಗ್ರಾಮದ ಮೋತಿಲಾಲ ರಾಠೋಡ ಅವರ ಹೊಲದಲ್ಲಿದ್ದ ವಾಸಕ್ಕಿದ್ದ ಶೆಡ್ ಹಾಗೂ ಪ್ರಾಣಿಗಳಿದ್ದ ಶೆಡ್‌ಗೆ ಬೆಂಕಿ ತಗುಲಿದೆ.ಈ ವೇಳೆ 23 ಮೇಕೆಗಳ ಪೈಕಿ 2 ಮೇಕೆಗಳು ಹಾಗೂ 20ಕ್ಕೂ