ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು ಕ್ರೈಂ ಪಿ.ಎಸ್.ಆಯ್ ಆರ್.ಎಸ್.ಬಂಗಿ ಹೇಳಿದರು.

ಪಟ್ಟಣದ ವಿವೇಕಾನಂದ ವಿದ್ಯಾ ಪ್ರಸಾರ ಸಮಿತಿ ಅಡಿಯಲ್ಲಿ ನಡೆಯುವ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ವಿದ್ಯಾ ಸಂಸ್ಥೆಯ 40ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ. ವ್ಯಸನಕ್ಕೆ ಒಳಗಾಗಬಾರದು. ವ್ಯಸನಮುಕ್ತ ಸದ್ಗುಣ ಯುಕ್ತ ವ್ಯಕ್ತಿಯನ್ನು ನಿರ್ಮಾಣ ಮಾಡುವಲ್ಲಿ ಮನೆ, ಶಾಲೆ, ಸಮಾಜದ ಪಾತ್ರ ಹಿರಿದಾಗಿದೆ. ಮಕ್ಕಳು ವಿದ್ಯಾರ್ಥಿಯ ದೆಸೆಯಿಂದಲೇ ತಮ್ಮ ಬದುಕನ್ನು ಕಟ್ಟಿಕೊಳ್ಳುವ ಮಹತ್ವಾಕಾಂಕ್ಷೆಯನ್ನು ಹೊಂದಿರಬೇಕು ಎಂದರು.

ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಮಾತನಾಡಿ, ಆಧುನಿಕ ಕಾಲಘಟ್ಟದಲ್ಲಿ ಪರಿವರ್ತನೆಗೆ ಬದಲಾದ ಪದ್ಧತಿ ಶಿಕ್ಷಣದಲ್ಲಿ ಮೂಡಿಬರಬೇಕಾಗಿದೆ. ವಿದ್ಯಾರ್ಥಿ ಜೀವನದ ಗುರಿ ಜ್ಞಾನಾರ್ಜನೆಯಾಗಿರಬೇಕು ಎಂದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎA.ಬೆಳಗಲ್, ನಿವೃತ್ತ ಪ್ರಾಧ್ಯಾಪಕ ಬಿ.ಎಮ್. ಹಿರೇಮಠ, ಕರ್ನಾಟಕ ಅರ್ಬನ್ ಬ್ಯಾಂಕಿನ ವ್ಯವಸ್ಥಾಪಕಿ ಸುಮಾ ನಾಡಗೌಡ, ಅಧ್ಯಕ್ಷ ಬಿ.ಪಿ.ಕುಲಕರ್ಣಿ ಸೇರಿದಂತೆ ಗಣ್ಯರು ಮಾತನಾಡಿದರು.

ಬಿ.ಎಸ್.ಎಫ್ ಸೇನೆಗೆ ಸೇರಿದ ಕಾಲೇಜಿನ ಹಿರಿಯ ವಿದ್ಯಾರ್ಥಿ ಲಾಳೆಮುಶ್ಯಾಕ್ ನಾಯ್ಕೋಡಿ ಹಾಗೂ ಕಳೆದ ವರ್ಷ ಪಿ.ಯು.ಸಿ ದ್ವಿತೀಯ ವರ್ಷದಲ್ಲಿ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶಾಲೆಗೆ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ಸಂಸ್ಥೆಯ ಉಪಾಧ್ಯಕ್ಷರಾದ ಡಾ. ಎಸ್.ಬಿ.ವಡವಡಗಿ, ಕಾರ್ಯದರ್ಶಿ ಪ್ರಭು ಕಡಿ, ಕೋಶಾಧ್ಯಕ್ಷ ಎಮ್.ಪಿ.ದಂಡಾವತಿ, ನಿರ್ದೇಶಕರುಗಳಾದ ಬಿ.ಆರ್.ಓಸ್ವಾಲ್, ಜಿ.ಎಸ್.ಓಸ್ವಾಲ್, ಲೀಲಾ ಭಟ್ಟ, ಜಿ.ಜೆ.ಪಾದಗಟ್ಟಿ, ಶಂಕರ ಬೇವಿನಗಿಡದ, ಬಸವರಾಜ ನಾಲತವಾಡ, ಶಾಂತಾ ಭಟ್ಟ, ಸುಬಾಷ್ ಬಿದಿರಕುಂದಿ, ಮೀನಾಕ್ಷೀ ಕುಲಕರ್ಣಿ, ಉದ್ಯಮಿ ಗೋಪಾಲ ನಾವಡ, ಸಾಹಿತಿ ಅಶೋಕ ಮಣಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

ಉಪನ್ಯಾಸಕಿ ರಚನಾ ಕುಲಕರ್ಣಿ ಪ್ರಾರ್ಥಿಸಿದರು.ಮುಖ್ಯಗುರುಗಳಾದ ರಾಮಚಂದ್ರ ಹೆಗಡೆ ಮತ್ತು ಶಿಕ್ಷಕಿ ರಂಜಿತಾ ಭಟ್ಟ ಸ್ವಾಗತಿಸಿದರು. ಪ್ರಾಚಾರ್ಯ ಅರುಣ ಹುನಗುಂದ ವಾರ್ಷಿಕ ವರದಿ ವಾಚಿಸಿದರು. ಉಪನ್ಯಾಸಕರಾದ ವಿ.ವಿ.ಪಾಟೀಲ್ ಮತ್ತು ಶೋಭಾ ನಾಗೂರ ಕಾರ್ಯಕ್ರಮ ನಿರ್ವಹಿಸಿದರು.ಮುಖ್ಯಶಿಕ್ಷಕಿ ಸರಸ್ವತಿ ಮಡಿವಾಳರ ವಂದಿಸಿದರು. ಶಿಕ್ಷಕರುಗಳಾದ ಬಿ.ಆರ್.ಬೆಳ್ಳಿಕಟ್ಟಿ, ಮಂಜುನಾಥ ಪಡದಾಳಿ ಸೇರಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ