Cup for RCB: Excitement of fans beyond measure

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಸಂಭ್ರಮಾಚರಣೆ ವೇಳೆ ಪೊಲೀಸರಿಂದ ಲಾಠಿ ಪ್ರಹಾರ

ಮುದ್ದೇಬಿಹಾಳ : ಬೆಂಗಳೂರಿನ ರಾಯಲ್ ಚಾಲೆಂರ‍್ಸ್ ತಂಡ 18 ವರ್ಷದ ಬಳಿಕ ಕಪ್ ಗೆಲುವು ಸಾಧಿಸುತ್ತಿದ್ದಂತೆ ಅಭಿಮಾನಿಗಳ ಉತ್ಸಾಹ ಮೇರೆ ಮೀರಿದ್ದು ಸಂಭ್ರಮಾಚಾರಣೆ ವೇಳೆ ಪೊಲೀಸರು ಬೀಸಿದ ಲಾಠಿ ಏಟಿಗೆ ಒಬ್ಬ ಯುವಕ ಗಾಯಗೊಂಡಿದ್ದು ಸಂಭ್ರಮಾಚರಣೆಯ ವೇಳೆ ಸಂಭವನೀಯ ಅವಘಡ ತಪ್ಪಿಸಲು ಹೋದ ಪೊಲೀಸ್ ಪೇದೆಗೂ ಒಳಪೆಟ್ಟಾಗಿರುವ ಘಟನೆ ಮಂಗಳವಾರ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ನಡೆದಿದೆ.

ಪಟ್ಟಣದಲ್ಲಿ ಮೂರು ವರ್ಷಕ್ಕೊಮ್ಮೆ ಗ್ರಾಮದೇವತೆ ಜಾತ್ರೆ ಜರುಗುತ್ತಿದ್ದು ಮಂಗಳವಾರ ಜಾತ್ರೆಯ ಕಡೆಯ ದಿನವಾಗಿತ್ತು. ರಾತ್ರಿ ಹೆಚ್ಚಿನ ಜನಸಂದಣಿ ಬಸವೇಶ್ವರ ವೃತ್ತ, ವಿಬಿಸಿ ಹೈಸ್ಕೂಲ್ ಮೈದಾನ, ಗ್ರಾಮದೇವತೆ ವೇದಿಕೆ ಬಳಿ ಜಮಾಯಿಸಿದ್ದರು. ಆರ್.ಸಿ.ಬಿ ಪಂದ್ಯದ ಪ್ರತಿ ಕ್ಷಣವನ್ನೂ ಅಭಿಮಾನಿಗಳು ತಮ್ಮ ಮೊಬೈಲ್‌ದಲ್ಲಿ ವೀಕ್ಷಿಸುತ್ತಿದ್ದರು.

ಕಡೆಯ ಓವರ್‌ನಲ್ಲಿ ಆರ್.ಸಿ.ಬಿ ಪಂದ್ಯ ಗೆಲುವು ಸಾಧಿಸಿ ಎನ್ನುವುದು ತಿಳಿಯುತ್ತಿದ್ದಂತೆ ಜಾತ್ರೆಗೆ ಆಗಮಿಸಿದ್ದ ಜನರನ್ನು ಲೆಕ್ಕಿಸದೇ ಅಭಿಮಾನಿಗಳ ಹುಚ್ಚಾಟ ಮೇರೆ ಮೀರಿತು. ಸಾವಿರಾರು ಸಂಖ್ಯೆಯಲ್ಲಿ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಅಭಿಮಾನಿಗಳು ಆರ್.ಸಿ.ಬಿ., ಆರ್.ಸಿ.ಬಿ., ಎಂದು ಘೋಷಣೆ ಹಾಕುತ್ತಾ ಕುಣಿದು ಕುಪ್ಪಳಿಸ ತೊಡಗಿದ್ದರು.

ಇದರಿಂದಾಗಿ ಜಾತ್ರೆಗೆ ಆಗಮಿಸಿದ್ದ ಗರ್ಭಿಣಿಯರು, ಮಹಿಳೆಯರು ಮಕ್ಕಳಿಗೆ ತೊಂದರೆ ಉಂಟಾಯಿತು. ಕೂಡಲೇ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ ಪೊಲೀಸರು ಗುಂಪು ಸೇರಿ ಸಮಸ್ಯೆ ಸೃಷ್ಟಿಸದಂತೆ ಎಚ್ಚರಿಕೆ ನೀಡಿದರೂ ಗಮನ ಹರಿಸದೇ ಮತ್ತಷ್ಟು ಯುವಕರು ವೃತ್ತಕ್ಕೆ ಬಂದು ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಲು ಶುರು ಮಾಡಿದರು. ಒಂದು ಗುಂಪು ಆರ್.ಸಿ.ಬಿ ಎನ್ನುತ್ತಾ ಮೆರವಣಿಗೆ ಹೊರಟಿದ್ದನ್ನು ಕಂಡ ಪಿಎಸ್‌ಐ ಸಂಜಯ ತಿಪರೆಡ್ಡಿ ಕೂಡಲೇ ಇದನ್ನು ನಿಲ್ಲಿಸುವಂತೆ ಸೂಚಿಸಿದರು.

ಆದರೆ ಕೆಲವರು ಅವರ ಮಾತಿಗೆ ಬೆಲೆ ನೀಡದೇ ಇದ್ದರಿಂದ ತಮ್ಮ ಸಿಬ್ಬಂದಿಗೆ ಸೂಚಿಸಿ ಲಾಠಿ ಪ್ರಹಾರ ನಡೆಸಿ ಯುವಕರನ್ನು ಚದುರಿಸಿದರು. ಕೈಗೆ ಸಿಕ್ಕವರ ಮೇಲೆ ಲಾಠಿ ಬೀಸಿ ಯುವಕರನ್ನು ಉತ್ಸಾಹಕ್ಕೆ ಬ್ರೇಕ್ ಹಾಕಿದರು. ಘಟನೆಯಲ್ಲಿ ಓರ್ವನಿಗೆ ಬಾಸುಂಡೆ ಬಂದಿದ್ದು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡರು.

ಪೇದೆ ಸಂಗಮೇಶ ಚಲವಾದಿ ಅವರಿಗೆ ಗದ್ದಲದಲ್ಲಿ ಒಳಪೆಟ್ಟಾಗಿದ್ದು ಅವರು ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡರು. ಘಟನೆಗೆ ಸಂಬಂಧಿಸಿದಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಮಾತನಾಡಿ, ಒಮ್ಮೇಲೆ ಸಾವಿರಾರು ಸಂಖ್ಯೆಯಲ್ಲಿ ಬಂದ ಯುವಕರು ಟ್ರಾಫಿಕ್ ಸಂಚಾರಕ್ಕೆ ಅಡ್ಡಿಪಡಿಸಲು ಮುಂದಾದರು. ಟ್ರಕ್ ಮೇಲೆ ಜೋರಾದ ಸೌಂಡ್ ಹಾಕಿಕೊಂಡು ಗದ್ದಲ ಸೃಷ್ಟಿಸಲು ಮುಂದಾದರು. ತಕ್ಷಣ ನಿಯಂತ್ರಣಕ್ಕೆ ತರಲು ಲಾಠಿ ಬೀಸಿದ್ದೇವೆ. ಘಟನೆಯಲ್ಲಿ ನಮ್ಮವರಿಗೂ ಗಾಯವಾಗಿದೆ. ಘಟನೆಯ ವಿಡಿಯೋ ಪರಿಶೀಲನೆ ನಡೆಸುತ್ತಿದ್ದು ಪ್ರಕರಣ ದಾಖಲಿಸಿಕೊಳ್ಳುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಕುಣಿದು ಕುಪ್ಪಳಿಸಿದ ಬಿಗ್‌ಬಾಸ್ ವಿಜೇತ ಹಣಮಂತ ಲಮಾಣಿ: ಆರ್.ಸಿ.ಬಿ ಪಂದ್ಯ ಗೆಲ್ಲುತ್ತಿದ್ದಂತೆ ಮುದ್ದೇಬಿಹಾಳದ ಗ್ರಾಮ ದೇವತೆ ಜಾತ್ರೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಆಗಮಿಸಿದ್ದ ಬಿಗ್ ಬಾಸ್ ವಿಜೇತ ಹಣಮಂತ ಲಮಾಣಿ ವೇದಿಕೆಯಲ್ಲಿಯೇ ಕುಣಿದಾಡಿ ಸಂಭ್ರಮಿಸಿದರು. ಅವರನ್ನು ಹೆಗಲ ಮೇಲೆ ಹೊತ್ತುಕೊಂಡ ಯುವಕ ಅನಿಲ್ ನಾಯಕ, ವಿಷ್ಣು ಲಮಾಣಿ ವಿಜಯೋತ್ಸವವನ್ನು ಆಚರಿಸಿದರು. ಅಲ್ಲದೇ ವೇದಿಕೆಯಲ್ಲಿ ಆಗಮಿಸಿದ್ದ ಕಲಾವಿದರಾದ ದಿಯಾ ಹೆಗಡೆ, ಸುಹಾನಾ ಸಯ್ಯದ, ರೇವಣಸಿದ್ದ ಪುಲಾರಿ, ಶ್ರೀರಾಮ ಕಾಸರ, ಸಮನ್ವಿ ರೈ, ಕರಿಬಸವ ತಡಕಲ್ಲ, ಭೂಮಿಕಾ, ಗೋಪಾಲ ಹೂಗಾರ, ಶ್ರೀಶೈಲ ಹೂಗಾರ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಸೇರಿದ್ದ 20ಸಾವಿರಕ್ಕೂ ಅಧಿಕ ಸಂಖ್ಯೆಯ ಜನ ಆರ್.ಸಿ.ಬಿ ಗೆಲುವು ಸಂಭ್ರಮಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ