ಭ್ರಷ್ಟಾಚಾರದ ಒಲಿಂಪಿಕ್ಸ್‌ನಲ್ಲಿ ಇವರೇ ಫಸ್ಟ್, ಸೆಕೆಂಡ್, ಥರ್ಡ್..!

ಭ್ರಷ್ಟಾಚಾರದ ಒಲಿಂಪಿಕ್ಸ್‌ನಲ್ಲಿ ಇವರೇ ಫಸ್ಟ್, ಸೆಕೆಂಡ್, ಥರ್ಡ್..!

ಬೆಂಗಳೂರು: ವಿಶ್ವದ ಬಹುದೊಡ್ಡ ಕ್ರೀಡಾ ಕೂಟ ಒಲಿಂಪಿಕ್ಸ್ ಈ ಬಾರಿ ಪ್ಯಾರಿಸ್‌ನಲ್ಲಿ ನಡೆಯುತ್ತಿದ್ದು, ಭಾರತದ ಕ್ರೀಡಾಪಟುಗಳು ಒಂದೊಂದಾಗಿ ಪದಕಗಳನ್ನು ಗೆದ್ದು ಕೊಡುತ್ತಿದ್ದಾರೆ. ಆದರೆ, ಇದೇ ಸಂದರ್ಭ ರಾಜ್ಯದಲ್ಲಿ ಒಲಿಂಪಿಕ್ಸ್ ವಿಚಾರವನ್ನು ಹಿಡಿದುಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ರಾಜಕಾರಣ ಮಾಡುತ್ತಿವೆ.

ಹಗರಣ, ಭ್ರಷ್ಟಾಚಾರಗಳಲ್ಲಿ ಈ ನಾಯಕರಿಗೆ ಚಿನ್ನ, ಬೆಳ್ಳಿ, ಕಂಚಿನ ಪದಕ ಕೊಡಬೇಕೆಂದು ಉಭಯ ಪಕ್ಷಗಳು ಟೀಕೆ ಮಾಡುತ್ತಿವೆ.

ಈ ಬಗ್ಗೆ ಪೋಸ್ಟ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕಾಂಗ್ರೆ ಭ್ರಷ್ಟಾಚಾರದ ಒಲಂಪಿಕ್ಸ್ ನಲ್ಲಿ ಬಿಜೆಪಿಯೇ ನಂ1. ಗೋಲ್ಡು, ಸಿಲ್ವ‌ರ್, ಕಂಚು ಎಲ್ಲವೂ ಬಿಜೆಪಿ ಪಾಲು! ಎಂದು ಬರೆದಿದ್ದು, ಅದರೊಂದಿಗೆ ಫೋಟೋವನ್ನು ಬಿಡುಗಡೆ ಮಾಡಿದೆ.

ಫೋಟೋದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಚಿನ್ನ, ವಿಪಕ್ಷ ನಾಯಕ ಆ‌ರ್ ಅಶೋಕ್ ಗೆ ಬೆಳ್ಳಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಂಚಿನ ಪದಕ ಧರಿಸಿರುವ ರೀತಿ ಎಡಿಟ್ ಮಾಡಿ, ಇವರು ಭ್ರಷ್ಟಾಚಾರದ ಒಲಂಪಿಕ್ಸ್ ನಲ್ಲಿ ಹೆಚ್ಚು ಪದಕ ಪಡೆದವರು ಎಂದು ಬರೆದು ಟೀಕಿಸಿದೆ.

ಇತ್ತ, ಬಿಜೆಪಿಯೂ ಕಾಂಗ್ರೆಸ್‌ಗೆ ತಿರುಗೇಟು ನೀಡಿ ಮತ್ತೊಂದು ಫೋಟೋವನ್ನು ಹಂಚಿಕೊಂಡಿದೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ ಚಿನ್ನ, ಮಾಜಿ ಸಚಿವ ನಾಗೇಂದ್ರ ಬೆಳ್ಳಿ ಹಾಗೂ ಬಸವನಗೌಡ ದದ್ದಲ್ ಕಂಚಿನ ಪದಕ ಧರಿಸಿರುವ ರೀತಿ ಫೋಟೋವನ್ನು ಎಡಿಟ್ ಮಾಡಲಾಗಿದ್ದು, ಸ್ಕ್ಯಾಮ್ 2024, ₹500 ಕೋಟಿ ಎಂದು ಬರೆದು ಬಿಜೆಪಿ ಟೀಕಿಸಿದೆ.

Latest News

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ