ಭ್ರಷ್ಟಾಚಾರದ ಒಲಿಂಪಿಕ್ಸ್‌ನಲ್ಲಿ ಇವರೇ ಫಸ್ಟ್, ಸೆಕೆಂಡ್, ಥರ್ಡ್..!

ಭ್ರಷ್ಟಾಚಾರದ ಒಲಿಂಪಿಕ್ಸ್‌ನಲ್ಲಿ ಇವರೇ ಫಸ್ಟ್, ಸೆಕೆಂಡ್, ಥರ್ಡ್..!

ಬೆಂಗಳೂರು: ವಿಶ್ವದ ಬಹುದೊಡ್ಡ ಕ್ರೀಡಾ ಕೂಟ ಒಲಿಂಪಿಕ್ಸ್ ಈ ಬಾರಿ ಪ್ಯಾರಿಸ್‌ನಲ್ಲಿ ನಡೆಯುತ್ತಿದ್ದು, ಭಾರತದ ಕ್ರೀಡಾಪಟುಗಳು ಒಂದೊಂದಾಗಿ ಪದಕಗಳನ್ನು ಗೆದ್ದು ಕೊಡುತ್ತಿದ್ದಾರೆ. ಆದರೆ, ಇದೇ ಸಂದರ್ಭ ರಾಜ್ಯದಲ್ಲಿ ಒಲಿಂಪಿಕ್ಸ್ ವಿಚಾರವನ್ನು ಹಿಡಿದುಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ರಾಜಕಾರಣ ಮಾಡುತ್ತಿವೆ.

ಹಗರಣ, ಭ್ರಷ್ಟಾಚಾರಗಳಲ್ಲಿ ಈ ನಾಯಕರಿಗೆ ಚಿನ್ನ, ಬೆಳ್ಳಿ, ಕಂಚಿನ ಪದಕ ಕೊಡಬೇಕೆಂದು ಉಭಯ ಪಕ್ಷಗಳು ಟೀಕೆ ಮಾಡುತ್ತಿವೆ.

ಈ ಬಗ್ಗೆ ಪೋಸ್ಟ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕಾಂಗ್ರೆ ಭ್ರಷ್ಟಾಚಾರದ ಒಲಂಪಿಕ್ಸ್ ನಲ್ಲಿ ಬಿಜೆಪಿಯೇ ನಂ1. ಗೋಲ್ಡು, ಸಿಲ್ವ‌ರ್, ಕಂಚು ಎಲ್ಲವೂ ಬಿಜೆಪಿ ಪಾಲು! ಎಂದು ಬರೆದಿದ್ದು, ಅದರೊಂದಿಗೆ ಫೋಟೋವನ್ನು ಬಿಡುಗಡೆ ಮಾಡಿದೆ.

ಫೋಟೋದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಚಿನ್ನ, ವಿಪಕ್ಷ ನಾಯಕ ಆ‌ರ್ ಅಶೋಕ್ ಗೆ ಬೆಳ್ಳಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಂಚಿನ ಪದಕ ಧರಿಸಿರುವ ರೀತಿ ಎಡಿಟ್ ಮಾಡಿ, ಇವರು ಭ್ರಷ್ಟಾಚಾರದ ಒಲಂಪಿಕ್ಸ್ ನಲ್ಲಿ ಹೆಚ್ಚು ಪದಕ ಪಡೆದವರು ಎಂದು ಬರೆದು ಟೀಕಿಸಿದೆ.

ಇತ್ತ, ಬಿಜೆಪಿಯೂ ಕಾಂಗ್ರೆಸ್‌ಗೆ ತಿರುಗೇಟು ನೀಡಿ ಮತ್ತೊಂದು ಫೋಟೋವನ್ನು ಹಂಚಿಕೊಂಡಿದೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ ಚಿನ್ನ, ಮಾಜಿ ಸಚಿವ ನಾಗೇಂದ್ರ ಬೆಳ್ಳಿ ಹಾಗೂ ಬಸವನಗೌಡ ದದ್ದಲ್ ಕಂಚಿನ ಪದಕ ಧರಿಸಿರುವ ರೀತಿ ಫೋಟೋವನ್ನು ಎಡಿಟ್ ಮಾಡಲಾಗಿದ್ದು, ಸ್ಕ್ಯಾಮ್ 2024, ₹500 ಕೋಟಿ ಎಂದು ಬರೆದು ಬಿಜೆಪಿ ಟೀಕಿಸಿದೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ