ಭ್ರಷ್ಟಾಚಾರದ ಒಲಿಂಪಿಕ್ಸ್‌ನಲ್ಲಿ ಇವರೇ ಫಸ್ಟ್, ಸೆಕೆಂಡ್, ಥರ್ಡ್..!

ಭ್ರಷ್ಟಾಚಾರದ ಒಲಿಂಪಿಕ್ಸ್‌ನಲ್ಲಿ ಇವರೇ ಫಸ್ಟ್, ಸೆಕೆಂಡ್, ಥರ್ಡ್..!

ಬೆಂಗಳೂರು: ವಿಶ್ವದ ಬಹುದೊಡ್ಡ ಕ್ರೀಡಾ ಕೂಟ ಒಲಿಂಪಿಕ್ಸ್ ಈ ಬಾರಿ ಪ್ಯಾರಿಸ್‌ನಲ್ಲಿ ನಡೆಯುತ್ತಿದ್ದು, ಭಾರತದ ಕ್ರೀಡಾಪಟುಗಳು ಒಂದೊಂದಾಗಿ ಪದಕಗಳನ್ನು ಗೆದ್ದು ಕೊಡುತ್ತಿದ್ದಾರೆ. ಆದರೆ, ಇದೇ ಸಂದರ್ಭ ರಾಜ್ಯದಲ್ಲಿ ಒಲಿಂಪಿಕ್ಸ್ ವಿಚಾರವನ್ನು ಹಿಡಿದುಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ರಾಜಕಾರಣ ಮಾಡುತ್ತಿವೆ.

ಹಗರಣ, ಭ್ರಷ್ಟಾಚಾರಗಳಲ್ಲಿ ಈ ನಾಯಕರಿಗೆ ಚಿನ್ನ, ಬೆಳ್ಳಿ, ಕಂಚಿನ ಪದಕ ಕೊಡಬೇಕೆಂದು ಉಭಯ ಪಕ್ಷಗಳು ಟೀಕೆ ಮಾಡುತ್ತಿವೆ.

ಈ ಬಗ್ಗೆ ಪೋಸ್ಟ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕಾಂಗ್ರೆ ಭ್ರಷ್ಟಾಚಾರದ ಒಲಂಪಿಕ್ಸ್ ನಲ್ಲಿ ಬಿಜೆಪಿಯೇ ನಂ1. ಗೋಲ್ಡು, ಸಿಲ್ವ‌ರ್, ಕಂಚು ಎಲ್ಲವೂ ಬಿಜೆಪಿ ಪಾಲು! ಎಂದು ಬರೆದಿದ್ದು, ಅದರೊಂದಿಗೆ ಫೋಟೋವನ್ನು ಬಿಡುಗಡೆ ಮಾಡಿದೆ.

ಫೋಟೋದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಚಿನ್ನ, ವಿಪಕ್ಷ ನಾಯಕ ಆ‌ರ್ ಅಶೋಕ್ ಗೆ ಬೆಳ್ಳಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಂಚಿನ ಪದಕ ಧರಿಸಿರುವ ರೀತಿ ಎಡಿಟ್ ಮಾಡಿ, ಇವರು ಭ್ರಷ್ಟಾಚಾರದ ಒಲಂಪಿಕ್ಸ್ ನಲ್ಲಿ ಹೆಚ್ಚು ಪದಕ ಪಡೆದವರು ಎಂದು ಬರೆದು ಟೀಕಿಸಿದೆ.

ಇತ್ತ, ಬಿಜೆಪಿಯೂ ಕಾಂಗ್ರೆಸ್‌ಗೆ ತಿರುಗೇಟು ನೀಡಿ ಮತ್ತೊಂದು ಫೋಟೋವನ್ನು ಹಂಚಿಕೊಂಡಿದೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ ಚಿನ್ನ, ಮಾಜಿ ಸಚಿವ ನಾಗೇಂದ್ರ ಬೆಳ್ಳಿ ಹಾಗೂ ಬಸವನಗೌಡ ದದ್ದಲ್ ಕಂಚಿನ ಪದಕ ಧರಿಸಿರುವ ರೀತಿ ಫೋಟೋವನ್ನು ಎಡಿಟ್ ಮಾಡಲಾಗಿದ್ದು, ಸ್ಕ್ಯಾಮ್ 2024, ₹500 ಕೋಟಿ ಎಂದು ಬರೆದು ಬಿಜೆಪಿ ಟೀಕಿಸಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ