ಭ್ರಷ್ಟಾಚಾರದ ಒಲಿಂಪಿಕ್ಸ್‌ನಲ್ಲಿ ಇವರೇ ಫಸ್ಟ್, ಸೆಕೆಂಡ್, ಥರ್ಡ್..!

ಭ್ರಷ್ಟಾಚಾರದ ಒಲಿಂಪಿಕ್ಸ್‌ನಲ್ಲಿ ಇವರೇ ಫಸ್ಟ್, ಸೆಕೆಂಡ್, ಥರ್ಡ್..!

ಬೆಂಗಳೂರು: ವಿಶ್ವದ ಬಹುದೊಡ್ಡ ಕ್ರೀಡಾ ಕೂಟ ಒಲಿಂಪಿಕ್ಸ್ ಈ ಬಾರಿ ಪ್ಯಾರಿಸ್‌ನಲ್ಲಿ ನಡೆಯುತ್ತಿದ್ದು, ಭಾರತದ ಕ್ರೀಡಾಪಟುಗಳು ಒಂದೊಂದಾಗಿ ಪದಕಗಳನ್ನು ಗೆದ್ದು ಕೊಡುತ್ತಿದ್ದಾರೆ. ಆದರೆ, ಇದೇ ಸಂದರ್ಭ ರಾಜ್ಯದಲ್ಲಿ ಒಲಿಂಪಿಕ್ಸ್ ವಿಚಾರವನ್ನು ಹಿಡಿದುಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ರಾಜಕಾರಣ ಮಾಡುತ್ತಿವೆ.

ಹಗರಣ, ಭ್ರಷ್ಟಾಚಾರಗಳಲ್ಲಿ ಈ ನಾಯಕರಿಗೆ ಚಿನ್ನ, ಬೆಳ್ಳಿ, ಕಂಚಿನ ಪದಕ ಕೊಡಬೇಕೆಂದು ಉಭಯ ಪಕ್ಷಗಳು ಟೀಕೆ ಮಾಡುತ್ತಿವೆ.

ಈ ಬಗ್ಗೆ ಪೋಸ್ಟ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕಾಂಗ್ರೆ ಭ್ರಷ್ಟಾಚಾರದ ಒಲಂಪಿಕ್ಸ್ ನಲ್ಲಿ ಬಿಜೆಪಿಯೇ ನಂ1. ಗೋಲ್ಡು, ಸಿಲ್ವ‌ರ್, ಕಂಚು ಎಲ್ಲವೂ ಬಿಜೆಪಿ ಪಾಲು! ಎಂದು ಬರೆದಿದ್ದು, ಅದರೊಂದಿಗೆ ಫೋಟೋವನ್ನು ಬಿಡುಗಡೆ ಮಾಡಿದೆ.

ಫೋಟೋದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಚಿನ್ನ, ವಿಪಕ್ಷ ನಾಯಕ ಆ‌ರ್ ಅಶೋಕ್ ಗೆ ಬೆಳ್ಳಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಂಚಿನ ಪದಕ ಧರಿಸಿರುವ ರೀತಿ ಎಡಿಟ್ ಮಾಡಿ, ಇವರು ಭ್ರಷ್ಟಾಚಾರದ ಒಲಂಪಿಕ್ಸ್ ನಲ್ಲಿ ಹೆಚ್ಚು ಪದಕ ಪಡೆದವರು ಎಂದು ಬರೆದು ಟೀಕಿಸಿದೆ.

ಇತ್ತ, ಬಿಜೆಪಿಯೂ ಕಾಂಗ್ರೆಸ್‌ಗೆ ತಿರುಗೇಟು ನೀಡಿ ಮತ್ತೊಂದು ಫೋಟೋವನ್ನು ಹಂಚಿಕೊಂಡಿದೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ ಚಿನ್ನ, ಮಾಜಿ ಸಚಿವ ನಾಗೇಂದ್ರ ಬೆಳ್ಳಿ ಹಾಗೂ ಬಸವನಗೌಡ ದದ್ದಲ್ ಕಂಚಿನ ಪದಕ ಧರಿಸಿರುವ ರೀತಿ ಫೋಟೋವನ್ನು ಎಡಿಟ್ ಮಾಡಲಾಗಿದ್ದು, ಸ್ಕ್ಯಾಮ್ 2024, ₹500 ಕೋಟಿ ಎಂದು ಬರೆದು ಬಿಜೆಪಿ ಟೀಕಿಸಿದೆ.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ