ಭ್ರಷ್ಟಾಚಾರದ ಒಲಿಂಪಿಕ್ಸ್‌ನಲ್ಲಿ ಇವರೇ ಫಸ್ಟ್, ಸೆಕೆಂಡ್, ಥರ್ಡ್..!

ಭ್ರಷ್ಟಾಚಾರದ ಒಲಿಂಪಿಕ್ಸ್‌ನಲ್ಲಿ ಇವರೇ ಫಸ್ಟ್, ಸೆಕೆಂಡ್, ಥರ್ಡ್..!

ಬೆಂಗಳೂರು: ವಿಶ್ವದ ಬಹುದೊಡ್ಡ ಕ್ರೀಡಾ ಕೂಟ ಒಲಿಂಪಿಕ್ಸ್ ಈ ಬಾರಿ ಪ್ಯಾರಿಸ್‌ನಲ್ಲಿ ನಡೆಯುತ್ತಿದ್ದು, ಭಾರತದ ಕ್ರೀಡಾಪಟುಗಳು ಒಂದೊಂದಾಗಿ ಪದಕಗಳನ್ನು ಗೆದ್ದು ಕೊಡುತ್ತಿದ್ದಾರೆ. ಆದರೆ, ಇದೇ ಸಂದರ್ಭ ರಾಜ್ಯದಲ್ಲಿ ಒಲಿಂಪಿಕ್ಸ್ ವಿಚಾರವನ್ನು ಹಿಡಿದುಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ರಾಜಕಾರಣ ಮಾಡುತ್ತಿವೆ.

ಹಗರಣ, ಭ್ರಷ್ಟಾಚಾರಗಳಲ್ಲಿ ಈ ನಾಯಕರಿಗೆ ಚಿನ್ನ, ಬೆಳ್ಳಿ, ಕಂಚಿನ ಪದಕ ಕೊಡಬೇಕೆಂದು ಉಭಯ ಪಕ್ಷಗಳು ಟೀಕೆ ಮಾಡುತ್ತಿವೆ.

ಈ ಬಗ್ಗೆ ಪೋಸ್ಟ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕಾಂಗ್ರೆ ಭ್ರಷ್ಟಾಚಾರದ ಒಲಂಪಿಕ್ಸ್ ನಲ್ಲಿ ಬಿಜೆಪಿಯೇ ನಂ1. ಗೋಲ್ಡು, ಸಿಲ್ವ‌ರ್, ಕಂಚು ಎಲ್ಲವೂ ಬಿಜೆಪಿ ಪಾಲು! ಎಂದು ಬರೆದಿದ್ದು, ಅದರೊಂದಿಗೆ ಫೋಟೋವನ್ನು ಬಿಡುಗಡೆ ಮಾಡಿದೆ.

ಫೋಟೋದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಚಿನ್ನ, ವಿಪಕ್ಷ ನಾಯಕ ಆ‌ರ್ ಅಶೋಕ್ ಗೆ ಬೆಳ್ಳಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಂಚಿನ ಪದಕ ಧರಿಸಿರುವ ರೀತಿ ಎಡಿಟ್ ಮಾಡಿ, ಇವರು ಭ್ರಷ್ಟಾಚಾರದ ಒಲಂಪಿಕ್ಸ್ ನಲ್ಲಿ ಹೆಚ್ಚು ಪದಕ ಪಡೆದವರು ಎಂದು ಬರೆದು ಟೀಕಿಸಿದೆ.

ಇತ್ತ, ಬಿಜೆಪಿಯೂ ಕಾಂಗ್ರೆಸ್‌ಗೆ ತಿರುಗೇಟು ನೀಡಿ ಮತ್ತೊಂದು ಫೋಟೋವನ್ನು ಹಂಚಿಕೊಂಡಿದೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ ಚಿನ್ನ, ಮಾಜಿ ಸಚಿವ ನಾಗೇಂದ್ರ ಬೆಳ್ಳಿ ಹಾಗೂ ಬಸವನಗೌಡ ದದ್ದಲ್ ಕಂಚಿನ ಪದಕ ಧರಿಸಿರುವ ರೀತಿ ಫೋಟೋವನ್ನು ಎಡಿಟ್ ಮಾಡಲಾಗಿದ್ದು, ಸ್ಕ್ಯಾಮ್ 2024, ₹500 ಕೋಟಿ ಎಂದು ಬರೆದು ಬಿಜೆಪಿ ಟೀಕಿಸಿದೆ.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು