Cyber ​​crime Facebook friendship

Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

ಮಂಡ್ಯ: ವ್ಯಕ್ತಿಯೊಬ್ಬರಿಗೆ ವಂಚಕರು ಯುವತಿಯ ಸೋಗಿನಲ್ಲಿ ಫೋಟೋ ಕಳಿಸಿ ಮದುವೆಯಾಗುವುದಾಗಿ ಲಕ್ಷಾಂತರ ರೂಪಾಯಿ ಲಪಟಾಯಿಸಿರುವ ಘಟನೆ (Cyber crime) ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ.

Join Our Telegram: https://t.me/dcgkannada

ಅರ್ಚಕನಾಗಿ ಕೆಲಸ ಮಾಡಿಕೊಂಡಿರುವ ವಿಜಯ್ ಕುಮಾರ್ ಮೋಸ ಹೋದ ವ್ಯಕ್ತಿ. ಅವರು ಸೈಬರ್ ಕ್ರೈಂ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ.

ಪಾಂಡವಪುರದ ದೇವಾಲಯದಲ್ಲಿ ಅರ್ಚಕರಾಗಿ ಕಾರ್ಯ ನಿರ್ವಹಿಸುತ್ತಿರುವ ವಿಜಯ್ ಕುಮಾರ್ ಗೆ ಫೇಸ್ ಬುಕ್ ಮೂಲಕ ವ್ಯಕ್ತಿಯೊಬ್ಬರ ಪರಿಚಯವಾಗಿದೆ. ಆಕೆಯ ಪ್ರೊಫೈಲ್ ಫೋಟೋ ಹಾಗೂ ಇತರೆ ವಿವರಗಳನ್ನು ನೋಡಿ ವಿಜಯ್ ಮೋಸ ಹೋಗಿದ್ದಾರೆ. ಆಕೆಯೂ ಸಹ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಬಳಿಕ ಪ್ರೇಮ ನಿವೇದನೆ ಮಾಡಿಕೊಂಡಿದ್ದಳು!

ಬಳಿಕ ತಾನು ಓದುತ್ತಿರುವ ವಿದ್ಯಾರ್ಥಿನಿಯಾಗಿದ್ದು ತನಗೆ ಫೀಸ್, ವಸತಿ ಹಾಗೂ ಊಟಕ್ಕೆ ಬೇಕೆಂದು ಹಣ ಪೀಕಲು ಶುರು ಮಾಡಿದ್ದಾಳೆ. ಹೀಗೆ, ಹಂತಹಂತವಾಗಿ (Cyber crime)1.38 ಲಕ್ಷ ರೂಪಾಯಿ ಕೊಟ್ಟು ವಿಜಯ್ ಕುಮಾ‌ರ್ ಕೈ ಖಾಲಿ ಮಾಡಿಕೊಂಡಿದ್ದರು.

ಇದನ್ನೂ‌ ಓದಿ: Viral Video: ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನ..! ಕಾಮಾಂಧನನ್ನು ತಿವಿದು ಬಿಸಾಕಿದ ಕಾಮಧೇನು..! (ವಿಡಿಯೋ)

ತಾನುಬ್ಬಳು ಅನಾಥ ಹುಡುಗಿಯಾಗಿದ್ದು, ತನಗೆ ತಂದೆತಾಯಿ ಯಾರೂ ಇಲ್ಲ ಎಂದು ಸುಳ್ಳು ಹೇಳಿದ್ದ ವಂಚಕಿ, ನಿಮ್ಮನ್ನೇ ಮದುವೆಯಾಗುತ್ತೇನೆ ಎಂದು ವಿಜಯ್ ಕುಮಾ‌ರ್ ಅವರಿಗೆ ನಂಬಿಸಿದ್ದಾಳೆ.

ಜೊತೆಗೆ, ತಾನು ಓದು ಮುಗಿದ ಬಳಿಕ ನಿಮ್ಮ ಎಲ್ಲ ಹಣ ವಾಪಸ್ ಸಹ ನೀಡುತ್ತೇನೆ ಎಂದು ಅವರ ಬಳಿ ಸಾಲ ಮಾಡಿಸಿ ಹಾಗೂ ಅವರ ದ್ವಿಚಕ್ರ ವಾಹನ ಮಾರಿಸಿ ಆ ಹಣವನ್ನೂ ಪಡೆದಿದ್ದಾಳೆ.

ಈ ಪ್ರಕ್ರಿಯೆ ಕೊನೆಗಾಣದಿದ್ದಾಗ ತಾನು ಮೋಸ ಹೋಗಿರುವುದು ವಿಜಯ್ ಕುಮಾ‌ರ್ ಅವರಿಗೆ ಅರಿವಾಗಿತ್ತು. ಹೀಗಾಗಿ, 9676345605 ನಂಬರ್ ನಿಂದ ಕರೆ ಮಾಡಿ ತನಗೆ ವಂಚಿಸಿರುವ ವ್ಯಕ್ತಿಯಿಂದ ನ್ಯಾಯ ಕೊಡಿಸಬೇಕೆಂದು ವಿಜಯ್ ಕುಮಾರ್ ದೂರು ದಾಖಲಿಸಿದ್ದಾರೆ.

ತಾನು ಬೆಂಗಳೂರಿನಲ್ಲಿರುವುದಾಗಿ ಹೇಳಿರುವ ಯುವತಿಯ ಸುಳಿವು ಹೈದರಾಬಾದ್ ನಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲು ಮಾಡಿಕೊಂಡಿರುವ ಸೈಬ‌ರ್ ಕ್ರೈಂ ವಿಭಾಗದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Latest News

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಸನ್ 2019-2026ರವರೆಗೆ ಬೆಳೆವಿಮೆ ತುಂಬಿದ ರೈತರಿಗೆ ವಿಮೆ ಹಣ ದೊರೆಯದಂತೆ ಅಧಿಕಾರಿಗಳು ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಆರೋಪಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮಂಗಳವಾರ