Cyber ​​crime Facebook friendship

Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

ಮಂಡ್ಯ: ವ್ಯಕ್ತಿಯೊಬ್ಬರಿಗೆ ವಂಚಕರು ಯುವತಿಯ ಸೋಗಿನಲ್ಲಿ ಫೋಟೋ ಕಳಿಸಿ ಮದುವೆಯಾಗುವುದಾಗಿ ಲಕ್ಷಾಂತರ ರೂಪಾಯಿ ಲಪಟಾಯಿಸಿರುವ ಘಟನೆ (Cyber crime) ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ.

Join Our Telegram: https://t.me/dcgkannada

ಅರ್ಚಕನಾಗಿ ಕೆಲಸ ಮಾಡಿಕೊಂಡಿರುವ ವಿಜಯ್ ಕುಮಾರ್ ಮೋಸ ಹೋದ ವ್ಯಕ್ತಿ. ಅವರು ಸೈಬರ್ ಕ್ರೈಂ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ.

ಪಾಂಡವಪುರದ ದೇವಾಲಯದಲ್ಲಿ ಅರ್ಚಕರಾಗಿ ಕಾರ್ಯ ನಿರ್ವಹಿಸುತ್ತಿರುವ ವಿಜಯ್ ಕುಮಾರ್ ಗೆ ಫೇಸ್ ಬುಕ್ ಮೂಲಕ ವ್ಯಕ್ತಿಯೊಬ್ಬರ ಪರಿಚಯವಾಗಿದೆ. ಆಕೆಯ ಪ್ರೊಫೈಲ್ ಫೋಟೋ ಹಾಗೂ ಇತರೆ ವಿವರಗಳನ್ನು ನೋಡಿ ವಿಜಯ್ ಮೋಸ ಹೋಗಿದ್ದಾರೆ. ಆಕೆಯೂ ಸಹ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಬಳಿಕ ಪ್ರೇಮ ನಿವೇದನೆ ಮಾಡಿಕೊಂಡಿದ್ದಳು!

ಬಳಿಕ ತಾನು ಓದುತ್ತಿರುವ ವಿದ್ಯಾರ್ಥಿನಿಯಾಗಿದ್ದು ತನಗೆ ಫೀಸ್, ವಸತಿ ಹಾಗೂ ಊಟಕ್ಕೆ ಬೇಕೆಂದು ಹಣ ಪೀಕಲು ಶುರು ಮಾಡಿದ್ದಾಳೆ. ಹೀಗೆ, ಹಂತಹಂತವಾಗಿ (Cyber crime)1.38 ಲಕ್ಷ ರೂಪಾಯಿ ಕೊಟ್ಟು ವಿಜಯ್ ಕುಮಾ‌ರ್ ಕೈ ಖಾಲಿ ಮಾಡಿಕೊಂಡಿದ್ದರು.

ಇದನ್ನೂ‌ ಓದಿ: Viral Video: ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನ..! ಕಾಮಾಂಧನನ್ನು ತಿವಿದು ಬಿಸಾಕಿದ ಕಾಮಧೇನು..! (ವಿಡಿಯೋ)

ತಾನುಬ್ಬಳು ಅನಾಥ ಹುಡುಗಿಯಾಗಿದ್ದು, ತನಗೆ ತಂದೆತಾಯಿ ಯಾರೂ ಇಲ್ಲ ಎಂದು ಸುಳ್ಳು ಹೇಳಿದ್ದ ವಂಚಕಿ, ನಿಮ್ಮನ್ನೇ ಮದುವೆಯಾಗುತ್ತೇನೆ ಎಂದು ವಿಜಯ್ ಕುಮಾ‌ರ್ ಅವರಿಗೆ ನಂಬಿಸಿದ್ದಾಳೆ.

ಜೊತೆಗೆ, ತಾನು ಓದು ಮುಗಿದ ಬಳಿಕ ನಿಮ್ಮ ಎಲ್ಲ ಹಣ ವಾಪಸ್ ಸಹ ನೀಡುತ್ತೇನೆ ಎಂದು ಅವರ ಬಳಿ ಸಾಲ ಮಾಡಿಸಿ ಹಾಗೂ ಅವರ ದ್ವಿಚಕ್ರ ವಾಹನ ಮಾರಿಸಿ ಆ ಹಣವನ್ನೂ ಪಡೆದಿದ್ದಾಳೆ.

ಈ ಪ್ರಕ್ರಿಯೆ ಕೊನೆಗಾಣದಿದ್ದಾಗ ತಾನು ಮೋಸ ಹೋಗಿರುವುದು ವಿಜಯ್ ಕುಮಾ‌ರ್ ಅವರಿಗೆ ಅರಿವಾಗಿತ್ತು. ಹೀಗಾಗಿ, 9676345605 ನಂಬರ್ ನಿಂದ ಕರೆ ಮಾಡಿ ತನಗೆ ವಂಚಿಸಿರುವ ವ್ಯಕ್ತಿಯಿಂದ ನ್ಯಾಯ ಕೊಡಿಸಬೇಕೆಂದು ವಿಜಯ್ ಕುಮಾರ್ ದೂರು ದಾಖಲಿಸಿದ್ದಾರೆ.

ತಾನು ಬೆಂಗಳೂರಿನಲ್ಲಿರುವುದಾಗಿ ಹೇಳಿರುವ ಯುವತಿಯ ಸುಳಿವು ಹೈದರಾಬಾದ್ ನಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲು ಮಾಡಿಕೊಂಡಿರುವ ಸೈಬ‌ರ್ ಕ್ರೈಂ ವಿಭಾಗದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ