Cyber ​​crime Facebook friendship

Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

ಮಂಡ್ಯ: ವ್ಯಕ್ತಿಯೊಬ್ಬರಿಗೆ ವಂಚಕರು ಯುವತಿಯ ಸೋಗಿನಲ್ಲಿ ಫೋಟೋ ಕಳಿಸಿ ಮದುವೆಯಾಗುವುದಾಗಿ ಲಕ್ಷಾಂತರ ರೂಪಾಯಿ ಲಪಟಾಯಿಸಿರುವ ಘಟನೆ (Cyber crime) ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ.

Join Our Telegram: https://t.me/dcgkannada

ಅರ್ಚಕನಾಗಿ ಕೆಲಸ ಮಾಡಿಕೊಂಡಿರುವ ವಿಜಯ್ ಕುಮಾರ್ ಮೋಸ ಹೋದ ವ್ಯಕ್ತಿ. ಅವರು ಸೈಬರ್ ಕ್ರೈಂ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ.

ಪಾಂಡವಪುರದ ದೇವಾಲಯದಲ್ಲಿ ಅರ್ಚಕರಾಗಿ ಕಾರ್ಯ ನಿರ್ವಹಿಸುತ್ತಿರುವ ವಿಜಯ್ ಕುಮಾರ್ ಗೆ ಫೇಸ್ ಬುಕ್ ಮೂಲಕ ವ್ಯಕ್ತಿಯೊಬ್ಬರ ಪರಿಚಯವಾಗಿದೆ. ಆಕೆಯ ಪ್ರೊಫೈಲ್ ಫೋಟೋ ಹಾಗೂ ಇತರೆ ವಿವರಗಳನ್ನು ನೋಡಿ ವಿಜಯ್ ಮೋಸ ಹೋಗಿದ್ದಾರೆ. ಆಕೆಯೂ ಸಹ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಬಳಿಕ ಪ್ರೇಮ ನಿವೇದನೆ ಮಾಡಿಕೊಂಡಿದ್ದಳು!

ಬಳಿಕ ತಾನು ಓದುತ್ತಿರುವ ವಿದ್ಯಾರ್ಥಿನಿಯಾಗಿದ್ದು ತನಗೆ ಫೀಸ್, ವಸತಿ ಹಾಗೂ ಊಟಕ್ಕೆ ಬೇಕೆಂದು ಹಣ ಪೀಕಲು ಶುರು ಮಾಡಿದ್ದಾಳೆ. ಹೀಗೆ, ಹಂತಹಂತವಾಗಿ (Cyber crime)1.38 ಲಕ್ಷ ರೂಪಾಯಿ ಕೊಟ್ಟು ವಿಜಯ್ ಕುಮಾ‌ರ್ ಕೈ ಖಾಲಿ ಮಾಡಿಕೊಂಡಿದ್ದರು.

ಇದನ್ನೂ‌ ಓದಿ: Viral Video: ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನ..! ಕಾಮಾಂಧನನ್ನು ತಿವಿದು ಬಿಸಾಕಿದ ಕಾಮಧೇನು..! (ವಿಡಿಯೋ)

ತಾನುಬ್ಬಳು ಅನಾಥ ಹುಡುಗಿಯಾಗಿದ್ದು, ತನಗೆ ತಂದೆತಾಯಿ ಯಾರೂ ಇಲ್ಲ ಎಂದು ಸುಳ್ಳು ಹೇಳಿದ್ದ ವಂಚಕಿ, ನಿಮ್ಮನ್ನೇ ಮದುವೆಯಾಗುತ್ತೇನೆ ಎಂದು ವಿಜಯ್ ಕುಮಾ‌ರ್ ಅವರಿಗೆ ನಂಬಿಸಿದ್ದಾಳೆ.

ಜೊತೆಗೆ, ತಾನು ಓದು ಮುಗಿದ ಬಳಿಕ ನಿಮ್ಮ ಎಲ್ಲ ಹಣ ವಾಪಸ್ ಸಹ ನೀಡುತ್ತೇನೆ ಎಂದು ಅವರ ಬಳಿ ಸಾಲ ಮಾಡಿಸಿ ಹಾಗೂ ಅವರ ದ್ವಿಚಕ್ರ ವಾಹನ ಮಾರಿಸಿ ಆ ಹಣವನ್ನೂ ಪಡೆದಿದ್ದಾಳೆ.

ಈ ಪ್ರಕ್ರಿಯೆ ಕೊನೆಗಾಣದಿದ್ದಾಗ ತಾನು ಮೋಸ ಹೋಗಿರುವುದು ವಿಜಯ್ ಕುಮಾ‌ರ್ ಅವರಿಗೆ ಅರಿವಾಗಿತ್ತು. ಹೀಗಾಗಿ, 9676345605 ನಂಬರ್ ನಿಂದ ಕರೆ ಮಾಡಿ ತನಗೆ ವಂಚಿಸಿರುವ ವ್ಯಕ್ತಿಯಿಂದ ನ್ಯಾಯ ಕೊಡಿಸಬೇಕೆಂದು ವಿಜಯ್ ಕುಮಾರ್ ದೂರು ದಾಖಲಿಸಿದ್ದಾರೆ.

ತಾನು ಬೆಂಗಳೂರಿನಲ್ಲಿರುವುದಾಗಿ ಹೇಳಿರುವ ಯುವತಿಯ ಸುಳಿವು ಹೈದರಾಬಾದ್ ನಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲು ಮಾಡಿಕೊಂಡಿರುವ ಸೈಬ‌ರ್ ಕ್ರೈಂ ವಿಭಾಗದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ