Cyber ​​crime Facebook friendship

Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

ಮಂಡ್ಯ: ವ್ಯಕ್ತಿಯೊಬ್ಬರಿಗೆ ವಂಚಕರು ಯುವತಿಯ ಸೋಗಿನಲ್ಲಿ ಫೋಟೋ ಕಳಿಸಿ ಮದುವೆಯಾಗುವುದಾಗಿ ಲಕ್ಷಾಂತರ ರೂಪಾಯಿ ಲಪಟಾಯಿಸಿರುವ ಘಟನೆ (Cyber crime) ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ.

Join Our Telegram: https://t.me/dcgkannada

ಅರ್ಚಕನಾಗಿ ಕೆಲಸ ಮಾಡಿಕೊಂಡಿರುವ ವಿಜಯ್ ಕುಮಾರ್ ಮೋಸ ಹೋದ ವ್ಯಕ್ತಿ. ಅವರು ಸೈಬರ್ ಕ್ರೈಂ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ.

ಪಾಂಡವಪುರದ ದೇವಾಲಯದಲ್ಲಿ ಅರ್ಚಕರಾಗಿ ಕಾರ್ಯ ನಿರ್ವಹಿಸುತ್ತಿರುವ ವಿಜಯ್ ಕುಮಾರ್ ಗೆ ಫೇಸ್ ಬುಕ್ ಮೂಲಕ ವ್ಯಕ್ತಿಯೊಬ್ಬರ ಪರಿಚಯವಾಗಿದೆ. ಆಕೆಯ ಪ್ರೊಫೈಲ್ ಫೋಟೋ ಹಾಗೂ ಇತರೆ ವಿವರಗಳನ್ನು ನೋಡಿ ವಿಜಯ್ ಮೋಸ ಹೋಗಿದ್ದಾರೆ. ಆಕೆಯೂ ಸಹ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಬಳಿಕ ಪ್ರೇಮ ನಿವೇದನೆ ಮಾಡಿಕೊಂಡಿದ್ದಳು!

ಬಳಿಕ ತಾನು ಓದುತ್ತಿರುವ ವಿದ್ಯಾರ್ಥಿನಿಯಾಗಿದ್ದು ತನಗೆ ಫೀಸ್, ವಸತಿ ಹಾಗೂ ಊಟಕ್ಕೆ ಬೇಕೆಂದು ಹಣ ಪೀಕಲು ಶುರು ಮಾಡಿದ್ದಾಳೆ. ಹೀಗೆ, ಹಂತಹಂತವಾಗಿ (Cyber crime)1.38 ಲಕ್ಷ ರೂಪಾಯಿ ಕೊಟ್ಟು ವಿಜಯ್ ಕುಮಾ‌ರ್ ಕೈ ಖಾಲಿ ಮಾಡಿಕೊಂಡಿದ್ದರು.

ಇದನ್ನೂ‌ ಓದಿ: Viral Video: ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನ..! ಕಾಮಾಂಧನನ್ನು ತಿವಿದು ಬಿಸಾಕಿದ ಕಾಮಧೇನು..! (ವಿಡಿಯೋ)

ತಾನುಬ್ಬಳು ಅನಾಥ ಹುಡುಗಿಯಾಗಿದ್ದು, ತನಗೆ ತಂದೆತಾಯಿ ಯಾರೂ ಇಲ್ಲ ಎಂದು ಸುಳ್ಳು ಹೇಳಿದ್ದ ವಂಚಕಿ, ನಿಮ್ಮನ್ನೇ ಮದುವೆಯಾಗುತ್ತೇನೆ ಎಂದು ವಿಜಯ್ ಕುಮಾ‌ರ್ ಅವರಿಗೆ ನಂಬಿಸಿದ್ದಾಳೆ.

ಜೊತೆಗೆ, ತಾನು ಓದು ಮುಗಿದ ಬಳಿಕ ನಿಮ್ಮ ಎಲ್ಲ ಹಣ ವಾಪಸ್ ಸಹ ನೀಡುತ್ತೇನೆ ಎಂದು ಅವರ ಬಳಿ ಸಾಲ ಮಾಡಿಸಿ ಹಾಗೂ ಅವರ ದ್ವಿಚಕ್ರ ವಾಹನ ಮಾರಿಸಿ ಆ ಹಣವನ್ನೂ ಪಡೆದಿದ್ದಾಳೆ.

ಈ ಪ್ರಕ್ರಿಯೆ ಕೊನೆಗಾಣದಿದ್ದಾಗ ತಾನು ಮೋಸ ಹೋಗಿರುವುದು ವಿಜಯ್ ಕುಮಾ‌ರ್ ಅವರಿಗೆ ಅರಿವಾಗಿತ್ತು. ಹೀಗಾಗಿ, 9676345605 ನಂಬರ್ ನಿಂದ ಕರೆ ಮಾಡಿ ತನಗೆ ವಂಚಿಸಿರುವ ವ್ಯಕ್ತಿಯಿಂದ ನ್ಯಾಯ ಕೊಡಿಸಬೇಕೆಂದು ವಿಜಯ್ ಕುಮಾರ್ ದೂರು ದಾಖಲಿಸಿದ್ದಾರೆ.

ತಾನು ಬೆಂಗಳೂರಿನಲ್ಲಿರುವುದಾಗಿ ಹೇಳಿರುವ ಯುವತಿಯ ಸುಳಿವು ಹೈದರಾಬಾದ್ ನಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲು ಮಾಡಿಕೊಂಡಿರುವ ಸೈಬ‌ರ್ ಕ್ರೈಂ ವಿಭಾಗದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Latest News

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ