ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ ಪಾತ್ರವಾಗಿದೆ.ಕೋವಿಡ್ ಸಮಯದಲ್ಲಿ ಲಕ್ಷಾಂತರ ಜನರ ಜೀವ ಉಳಿಸಲು ಶ್ರಮಿಸಿದ ಅವರನ್ನು ಆಕ್ಸಿಜನ್ ಮ್ಯಾನ್ ಎಂದೇ ಗುರುತಿಸಲಾಗಿದೆ ಎಂದು ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ ಹೇಳಿದರು.

ಪಟ್ಟಣದ ಬಸವೇಶ್ವರ ಸರ್ಕಲ್‌ನಲ್ಲಿ ಎನ್.ಎಸ್.ಯೂ.ಐ ಹಾಗೂ ಯುವ ಕಾಂಗ್ರೆಸ್ ಸಂಘಟನೆ ವತಿಯಿಂದ ಮಂಗಳವಾರ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಸಂಭ್ರಮಾಚರಣೆಯಲ್ಲಿ ಅವರು ಮಾತನಾಡಿದರು.

ಪಕ್ಷ ಸಂದಿಗ್ದ ಪರಿಸ್ಥಿತಿಯಲ್ಲಿ ಪಕ್ಷದ ಜವಾಬ್ದಾರಿ ವಹಿಸಿಕೊಂಡ ಡಿ.ಕೆ.ಶಿವಕುಮಾರ ಅವರು ಪಕ್ಷವನ್ನು ಅಧಿಕಾರಕ್ಕೆ ತರಲು ಕಷ್ಟಪಟ್ಟಿದ್ದಾರೆ ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ನಾಮನಿರ್ದೇಶಿತ ಸದಸ್ಯ ರಫೀಕ ಶಿರೋಳ ಮಾತನಾಡಿ, ಕೇಂದ್ರದಲ್ಲಿ ಸಿದ್ಧರಾಮಯ್ಯ ಪ್ರಧಾನಿ ಹುದ್ದೆಗೇರಿ ರಾಜ್ಯದಲ್ಲಿ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿ ಎಂದು ಹೇಳಿದರು.

ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಮುಖAಡ ಬಾಬಾಪಟೇಲ್ ಬಿರಾದಾರ ಗುಡ್ನಾಳ, ಮುತ್ತು ಚಲವಾದಿ ಮಾತನಾಡಿದರು. ಹೆಸ್ಕಾಂ ಸಲಹಾ ಸಮೀತಿ ನಾಮನಿರ್ದೇಶಿತ ಸದಸ್ಯ ಸಿಕಂದರ್ ಜಾನ್ವೇಕರ, ಪ್ರಮುಖರಾದ ಹುಸೇನ್ ಮುಲ್ಲಾ, ರಾಮಣ್ಣಾ ನಾಯಕಮಕ್ಕಳ, ಸಮೀರ್ ದ್ರಾಕ್ಷಿ, ದಾವಲ್ ಗೊಳಸಂಗಿ, ರಂಜಾನ್ ನದಾಫ, ಅಬೂಬಕರ್ ಹಡಗಲಿ,ಕಯ್ಯೂಮ್ ಮೋಮಿನ , ಬಸವರಾಜ ಚಲವಾದಿ, ಚಂದ್ರು ಚಲವಾದಿ, ಅಭಿ ಕಲಾಲ, ಅಬ್ದುಲ್‌ಸಲಾಂ ಮುಲ್ಲಾ, ಬಂದೇನವಾಜ ಮ್ಯಾಗೇರಿ, ಮಂಜುನಾಥ ಮುರಾಳ, ಪ್ರದೀಪ್ ರಾಥೋಡ , ಇನಾಯತ್ ಮೋಮಿನ್,ರಾಜು ಪಾಟೀಲ್, ಶೇಖರ್ ಬಿರಾದಾರ ಇದ್ದರು.ಕೇಕ್ ಕತ್ತರಿಸಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯಿತು.

Latest News

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ : ತೀವ್ರ ತುರುಸಿನಿಂದ ಕೂಡಿದ ಇಲ್ಲಿನ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ಸೋಮವಾರ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು ಒಟ್ಟು ಶೇ.92.95ರಷ್ಟು ಮತದಾನ ಆಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 2625 ಮತದಾರರಲ್ಲಿ 2440 ಮತದಾರರು ತಮ್ಮ ಹಕ್ಕು ಚಲಾಯಿಸಿದರು.ಆರಂಭದಲ್ಲಿ ಚುರುಕುಗೊಂಡಿದ್ದ ಮತದಾನ ಪ್ರಕ್ರಿಯೆ ಮದ್ಯಾಹ್ನದ ಹೊತ್ತಿಗೆ ಮಂದಗತಿಯಲ್ಲಿ ಸಾಗಿತ್ತು.ಅಂತಿಮ ಸಮಯ ಮೀರುವ ಮುನ್ನವೇ ಬಹುತೇಕ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಒಂದು ಮತಗಟ್ಟೆಯಲ್ಲಿ ಇಬ್ಬರು ಮತದಾರರು ನಕಲಿ ಮತದಾನಕ್ಕೆ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಲು ಮುಂದಾದಾಗ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಕಾಂಗ್ರೆಸ್‌ ನಾಯಕರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ರಸ್ತೆ ಮಧ್ಯೆ ಬೆಂಕಿ ಹಚ್ಚಿ, ಟೈರ್‌ ಸುಡಲು ಯತ್ನಿಸಿದರು. ಪೊಲೀಸರು ಟೈರ್‌ ಅನ್ನು ಕುಸಿದುಕೊಂಡಾಗ ನೂಕಾಟ ಉಂಟಾಯಿತು. ಕಾರ್ಯಕರ್ತರು ಒಮ್ಮೆಲೆ ನುಗ್ಗಿದ್ದರಿಂದ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಅಲ್ಪ ಪ್ರಮಾಣದಲ್ಲಿ