ಡಿಸಿಜಿ ನ್ಯೂಸ್ ವರದಿ ಪರಿಣಾಮ : OXFORD PATIL’S TALENT SEARCH EXAM; 21 ವಿದ್ಯಾರ್ಥಿಗಳಿಗೆ ಸಂಪೂರ್ಣ ವಸತಿ ಸಮೇತ ಉಚಿತ ಶಿಕ್ಷಣ

ಡಿಸಿಜಿ ನ್ಯೂಸ್ ವರದಿ ಪರಿಣಾಮ : OXFORD PATIL’S TALENT SEARCH EXAM; 21 ವಿದ್ಯಾರ್ಥಿಗಳಿಗೆ ಸಂಪೂರ್ಣ ವಸತಿ ಸಮೇತ ಉಚಿತ ಶಿಕ್ಷಣ

ಮುದ್ದೇಬಿಹಾಳ : ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯಿAದ 21 ವಿದ್ಯಾರ್ಥಿಗಳಿಗೆ ಎರಡು ವರ್ಷದ ಸಂಪೂರ್ಣ ಉಚಿತ ಶಿಕ್ಷಣ, 20 ವಿದ್ಯಾರ್ಥಿಗಳಿಗೆ ಎರಡು ವರ್ಷದ ಉಚಿತ ಶಿಕ್ಷಣ,ಇನ್ನುಳಿದ 40 ವಿದ್ಯಾರ್ಥಿಗಳಿಗೆ ಶಿಕ್ಷಣದ ಶುಲ್ಕದಲ್ಲಿ ರಿಯಾಯತಿ ನೀಡಲಾಗುವುದು ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಹೇಳಿದರು.
ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ರವಿವಾರ ನಡೆದ ಟ್ಯಾಲೆಂಟ್ ಸರ್ಚ್ ಅವಾರ್ಡ್-2025ರ ಅಂತಿಮ ಸುತ್ತಿನ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಾಲೇಜಿನಲ್ಲಿ ಈಚೇಗೆ ಆಯೋಜಿಸಿದ್ದ ಟ್ಯಾಲೆಂಟ್ ಅವಾರ್ಡ್-2025ರ ಪರೀಕ್ಷೆಯಲ್ಲಿ 3555 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.ಆದರೆ ಸಂಸ್ಥೆಯಿAದ ಮುಂಚಿತವಾಗಿ ನಿಗದಿ ಪಡಿಸಿದ್ದ ಅಂಕಗಳನ್ನು ಯಾರೊಬ್ಬರೂ ಗಳಿಸದ ಕಾರಣ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲರ ಸೂಚನೆಯಂತೆ ಅದರಲ್ಲಿಯೇ ಅತೀ ಹೆಚ್ಚು ಅಂಕ ಪಡೆದ 220 ವಿದ್ಯಾರ್ಥಿಗಳನ್ನು ಅಂತಿಮ ಆಯ್ಕೆ ಸುತ್ತಿಗೆ ಪರಿಗಣಿಸಲಾಗಿದ್ದು ಅಂತಿಮವಾಗಿ ಮತ್ತೊಂದು ಪರೀಕ್ಷೆ ನಡೆಸಿದ್ದು ಅದರಲ್ಲಿ ಮೊದಲ 80 ಸ್ಥಾನ ಪಡೆದವರ ಫಲಿತಾಂಶ ಪ್ರಕಟಿಸಿದ್ದೇವೆ ಎಂದು ತಿಳಿಸಿದರು.

ತಾಳಿಕೋಟಿ ಶಿಕ್ಷಕ ಎಸ್.ಎಸ್.ಸಜ್ಜನ,ಪ್ರಮುಖರಾದ ರಾಮನಗೌಡ ಬಿರಾದಾರ,ಕೆ.ಎಸ್.ಕರೇಕಲ್ಲ, ಆಂಗ್ಲಮಾಧ್ಯಮ ಶಾಲೆಯ ಇಸ್ಮಾಯಿಲ್ ಮನಿಯಾರ್, ಮಂಜು ಮಂಕಣಿ, ರಾಜಶೇಖರ ಹಿರೇಮಠ, ರವಿ ನಾಯಕ, ಸಂಗಮೇಶ ಬಡಿಗೇರ, ರೇವಣಸಿದ್ದ ಮುರಾಳ ಮೊದಲಾದವರು ಇದ್ದರು.

ಎರಡು ವರ್ಷದ ಪೂರ್ಣ ವಸತಿ ಉಚಿತ ಶಿಕ್ಷಣಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು :
ಶಹಾಪೂರ ಆರ್.ಎಂ.ಎಸ್.ಎ ಶಾಲೆಯ ಅಮನ್, ಶಹಾಪೂರದ ದುದುಪುಡಿ ಶಾಲೆ ನಿಸರ್ಗ ಪೊಲೀಸಪಾಟೀಲ್,ಹುಮನಾಬಾದ ಚೆನ್ನಬಸವೇಶ್ವರ ಶಾಲೆಯ ವೈಷ್ಣವಿ ರೆಡ್ಡಿ, ಮುದ್ದೇಬಿಹಾಳ ಬಿ.ಎಸ್ ಸೆಂಟ್ರಲ್ ಶಾಲೆಯ ಮೊಹ್ಮದ ಜಿಹಾಮ್,ಮೈಲೇಶ್ವರ ಬ್ರಿಲಿಯಂಟ್ ಶಾಲೆಯ ಕಾರ್ತಿಕ ಕನಕರೆಡ್ಡಿ,ಹುಮನಾಬಾದ ಚನ್ನಬಸವೇಶ್ವರ ಶಾಲೆಯ ತ್ರಿಷಾ ಕೃಷ್ಣರೆಡ್ಡಿ, ಲಿಂಗಸುಗೂರು ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ನಿಖಿತಾ ವಸ್ತçದ,ಸಿಂದಗಿ ಆರ್.ಎಂ.ಎಸ್.ಎ ಶಾಲೆಯ ಶರಧಿ ಹಿರೇಮಠ, ಬೀಸಲದಿನ್ನಿ ಎಸ್.ಎಸ್.ಪಿ.ಎಸ್ ಶಾಲೆಯ ನವೀನಕುಮಾರ ಗೌಡರ, ಜಮಖಂಡಿ ತುಂಗಳ ಶಾಲೆಯ ಸೌಮ್ಯಾ ಉತ್ನಾಳ, ಕೊರ್ಲಹಳ್ಳಿ ಆರ್,ಎಂ.ಎಸ್.ಎ ಶಾಲೆಯ ಕಾವ್ಯಾ ಉಪ್ಪಾರ , ವಿಜಯಪುರ ಶ್ರೀರಾಮಕೃಷ್ಣ ಶಾಲೆಯ ಪ್ರೀತಮ ಪತ್ತಾರ, ಯಾದಗಿರ ಜೆಎನ್‌ವಿ ಶಾಲೆಯ ಸಿದ್ದೇಶ್ವರ ಎ.ಟಿ., ಬೀಳಗಿ ವಿವೇಕಾನಂದ ಇಂಟರ್‌ನ್ಯಾಶನಲ್ ಶಾಲೆಯ ಅನನ್ಯಾ ಕೊಕಟನೂರ,ರಕಬವಿ ಪದ್ಮಾವತಿ ಇಂಟರ್‌ನ್ಯಾಶನಲ್ ಸ್ಕೂಲ್‌ನ ಸುಕೃತ ಸಜ್ಜನ, ಆದವೈಭವಿ ಕೆ.ಆರ್.ಸಿ.ಆರ್ ಶಾಲೆ ಶ್ರೇಯಾ ಸೊಮ್ಲೆಪ್ಪ, ಶಹಾಪೂರ ಆರ್.ಎಂ.ಎಸ್.ಎ ಶಾಲೆಯ ಪ್ರವೀಣಕುಮಾರ ದಂಡಪ್ಪ, ಯಾದಗಿರಿಯ ಜೆಎನ್‌ವಿ ಶಾಲೆ ರೇವಣಸಿದ್ದ ಆಲ್ಯಾಳ, ಕೊಲ್ಹಾರ ಜೆಎನ್‌ವಿ ಶಾಲೆಯ ತರುಣ ಕೊಲ್ಹಾರ,ರಾಜಲಬಂಡಾ ಎಂಡಿಆರ್‌ಎಸ್ ಶಾಲೆ ನಾಗರಾಜ ಅವರು ಮೊದಲ 20 ಸ್ಥಾನಗಳಲ್ಲಿ ಆಯ್ಕೆಯಾಗಿದ್ದು ಅವರಿಗೆ ವಸತಿ ಸಮೇತ ಉಚಿತ ಶಿಕ್ಷಣ,ಇನ್ನುಳಿದಂತೆ 20-40 ವಿದ್ಯಾರ್ಥಿಗಳಿಗೆ ಎರಡು ವರ್ಷದ ಶಿಕ್ಷಣ ಉಚಿತ, 40-60 ನೇ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 90 ಸಾವಿರ ರೂ. ಶುಲ್ಕ ರಿಯಾಯಿತಿ,60-80 ನೇ ಸ್ಥಾನ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಎರಡು ವರ್ಷದ ಶುಲ್ಕದಲ್ಲಿ 25 ಸಾವಿರ ರೂ.ರಿಯಾಯಿತಿ ಘೋಷಣೆ ಮಾಡಲಾಯಿತು.


ವರದಿ ಮಾಡಿದ್ದು ನಿಮ್ಮ ಡಿಸಿಜಿ ನ್ಯೂಸ್ :
ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ ನಡೆಸಿದ್ದ ಸಂಸ್ಥೆಯವರು ಅಂದು 3550 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದ್ದರೂ ಬಹುಮಾನಕ್ಕೆ ಯಾರನ್ನೂ ಆಯ್ಕೆ ಮಾಡಿರಲಿಲ್ಲ.ಇದನ್ನು ನಿಮ್ಮ ಡಿಸಿಜಿ ನ್ಯೂಸ್ ವರದಿ ಮಾಡಿತ್ತು.ಅಲ್ಲದೇ ಸಾರ್ವತ್ರಿಕವಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂಬ ಕಿವಿಮಾತನ್ನು ಸಂಸ್ಥೆಯವರ ಗಮನಕ್ಕೆ ತಂದಿತ್ತು.ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಅವರು ಪ್ರತ್ಯೇಕ ಸಮಾರಂಭವ,ಸ್ಪರ್ಧೆ ಏರ್ಪಡಿಸಿ ಯಾರಿಗೂ ಅನ್ಯಾಯವಾಗದಂತೆ ವಿದ್ಯಾರ್ಥಿಗಳ ಸ್ನೇಹಿ ನಿರ್ಧಾರ ಕೈಗೊಂಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ