ಡಿಸಿಜಿ ನ್ಯೂಸ್ ವರದಿ ಪರಿಣಾಮ : OXFORD PATIL’S TALENT SEARCH EXAM; 21 ವಿದ್ಯಾರ್ಥಿಗಳಿಗೆ ಸಂಪೂರ್ಣ ವಸತಿ ಸಮೇತ ಉಚಿತ ಶಿಕ್ಷಣ

ಡಿಸಿಜಿ ನ್ಯೂಸ್ ವರದಿ ಪರಿಣಾಮ : OXFORD PATIL’S TALENT SEARCH EXAM; 21 ವಿದ್ಯಾರ್ಥಿಗಳಿಗೆ ಸಂಪೂರ್ಣ ವಸತಿ ಸಮೇತ ಉಚಿತ ಶಿಕ್ಷಣ

ಮುದ್ದೇಬಿಹಾಳ : ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯಿAದ 21 ವಿದ್ಯಾರ್ಥಿಗಳಿಗೆ ಎರಡು ವರ್ಷದ ಸಂಪೂರ್ಣ ಉಚಿತ ಶಿಕ್ಷಣ, 20 ವಿದ್ಯಾರ್ಥಿಗಳಿಗೆ ಎರಡು ವರ್ಷದ ಉಚಿತ ಶಿಕ್ಷಣ,ಇನ್ನುಳಿದ 40 ವಿದ್ಯಾರ್ಥಿಗಳಿಗೆ ಶಿಕ್ಷಣದ ಶುಲ್ಕದಲ್ಲಿ ರಿಯಾಯತಿ ನೀಡಲಾಗುವುದು ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಹೇಳಿದರು.
ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ರವಿವಾರ ನಡೆದ ಟ್ಯಾಲೆಂಟ್ ಸರ್ಚ್ ಅವಾರ್ಡ್-2025ರ ಅಂತಿಮ ಸುತ್ತಿನ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಾಲೇಜಿನಲ್ಲಿ ಈಚೇಗೆ ಆಯೋಜಿಸಿದ್ದ ಟ್ಯಾಲೆಂಟ್ ಅವಾರ್ಡ್-2025ರ ಪರೀಕ್ಷೆಯಲ್ಲಿ 3555 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.ಆದರೆ ಸಂಸ್ಥೆಯಿAದ ಮುಂಚಿತವಾಗಿ ನಿಗದಿ ಪಡಿಸಿದ್ದ ಅಂಕಗಳನ್ನು ಯಾರೊಬ್ಬರೂ ಗಳಿಸದ ಕಾರಣ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲರ ಸೂಚನೆಯಂತೆ ಅದರಲ್ಲಿಯೇ ಅತೀ ಹೆಚ್ಚು ಅಂಕ ಪಡೆದ 220 ವಿದ್ಯಾರ್ಥಿಗಳನ್ನು ಅಂತಿಮ ಆಯ್ಕೆ ಸುತ್ತಿಗೆ ಪರಿಗಣಿಸಲಾಗಿದ್ದು ಅಂತಿಮವಾಗಿ ಮತ್ತೊಂದು ಪರೀಕ್ಷೆ ನಡೆಸಿದ್ದು ಅದರಲ್ಲಿ ಮೊದಲ 80 ಸ್ಥಾನ ಪಡೆದವರ ಫಲಿತಾಂಶ ಪ್ರಕಟಿಸಿದ್ದೇವೆ ಎಂದು ತಿಳಿಸಿದರು.

ತಾಳಿಕೋಟಿ ಶಿಕ್ಷಕ ಎಸ್.ಎಸ್.ಸಜ್ಜನ,ಪ್ರಮುಖರಾದ ರಾಮನಗೌಡ ಬಿರಾದಾರ,ಕೆ.ಎಸ್.ಕರೇಕಲ್ಲ, ಆಂಗ್ಲಮಾಧ್ಯಮ ಶಾಲೆಯ ಇಸ್ಮಾಯಿಲ್ ಮನಿಯಾರ್, ಮಂಜು ಮಂಕಣಿ, ರಾಜಶೇಖರ ಹಿರೇಮಠ, ರವಿ ನಾಯಕ, ಸಂಗಮೇಶ ಬಡಿಗೇರ, ರೇವಣಸಿದ್ದ ಮುರಾಳ ಮೊದಲಾದವರು ಇದ್ದರು.

ಎರಡು ವರ್ಷದ ಪೂರ್ಣ ವಸತಿ ಉಚಿತ ಶಿಕ್ಷಣಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು :
ಶಹಾಪೂರ ಆರ್.ಎಂ.ಎಸ್.ಎ ಶಾಲೆಯ ಅಮನ್, ಶಹಾಪೂರದ ದುದುಪುಡಿ ಶಾಲೆ ನಿಸರ್ಗ ಪೊಲೀಸಪಾಟೀಲ್,ಹುಮನಾಬಾದ ಚೆನ್ನಬಸವೇಶ್ವರ ಶಾಲೆಯ ವೈಷ್ಣವಿ ರೆಡ್ಡಿ, ಮುದ್ದೇಬಿಹಾಳ ಬಿ.ಎಸ್ ಸೆಂಟ್ರಲ್ ಶಾಲೆಯ ಮೊಹ್ಮದ ಜಿಹಾಮ್,ಮೈಲೇಶ್ವರ ಬ್ರಿಲಿಯಂಟ್ ಶಾಲೆಯ ಕಾರ್ತಿಕ ಕನಕರೆಡ್ಡಿ,ಹುಮನಾಬಾದ ಚನ್ನಬಸವೇಶ್ವರ ಶಾಲೆಯ ತ್ರಿಷಾ ಕೃಷ್ಣರೆಡ್ಡಿ, ಲಿಂಗಸುಗೂರು ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ನಿಖಿತಾ ವಸ್ತçದ,ಸಿಂದಗಿ ಆರ್.ಎಂ.ಎಸ್.ಎ ಶಾಲೆಯ ಶರಧಿ ಹಿರೇಮಠ, ಬೀಸಲದಿನ್ನಿ ಎಸ್.ಎಸ್.ಪಿ.ಎಸ್ ಶಾಲೆಯ ನವೀನಕುಮಾರ ಗೌಡರ, ಜಮಖಂಡಿ ತುಂಗಳ ಶಾಲೆಯ ಸೌಮ್ಯಾ ಉತ್ನಾಳ, ಕೊರ್ಲಹಳ್ಳಿ ಆರ್,ಎಂ.ಎಸ್.ಎ ಶಾಲೆಯ ಕಾವ್ಯಾ ಉಪ್ಪಾರ , ವಿಜಯಪುರ ಶ್ರೀರಾಮಕೃಷ್ಣ ಶಾಲೆಯ ಪ್ರೀತಮ ಪತ್ತಾರ, ಯಾದಗಿರ ಜೆಎನ್‌ವಿ ಶಾಲೆಯ ಸಿದ್ದೇಶ್ವರ ಎ.ಟಿ., ಬೀಳಗಿ ವಿವೇಕಾನಂದ ಇಂಟರ್‌ನ್ಯಾಶನಲ್ ಶಾಲೆಯ ಅನನ್ಯಾ ಕೊಕಟನೂರ,ರಕಬವಿ ಪದ್ಮಾವತಿ ಇಂಟರ್‌ನ್ಯಾಶನಲ್ ಸ್ಕೂಲ್‌ನ ಸುಕೃತ ಸಜ್ಜನ, ಆದವೈಭವಿ ಕೆ.ಆರ್.ಸಿ.ಆರ್ ಶಾಲೆ ಶ್ರೇಯಾ ಸೊಮ್ಲೆಪ್ಪ, ಶಹಾಪೂರ ಆರ್.ಎಂ.ಎಸ್.ಎ ಶಾಲೆಯ ಪ್ರವೀಣಕುಮಾರ ದಂಡಪ್ಪ, ಯಾದಗಿರಿಯ ಜೆಎನ್‌ವಿ ಶಾಲೆ ರೇವಣಸಿದ್ದ ಆಲ್ಯಾಳ, ಕೊಲ್ಹಾರ ಜೆಎನ್‌ವಿ ಶಾಲೆಯ ತರುಣ ಕೊಲ್ಹಾರ,ರಾಜಲಬಂಡಾ ಎಂಡಿಆರ್‌ಎಸ್ ಶಾಲೆ ನಾಗರಾಜ ಅವರು ಮೊದಲ 20 ಸ್ಥಾನಗಳಲ್ಲಿ ಆಯ್ಕೆಯಾಗಿದ್ದು ಅವರಿಗೆ ವಸತಿ ಸಮೇತ ಉಚಿತ ಶಿಕ್ಷಣ,ಇನ್ನುಳಿದಂತೆ 20-40 ವಿದ್ಯಾರ್ಥಿಗಳಿಗೆ ಎರಡು ವರ್ಷದ ಶಿಕ್ಷಣ ಉಚಿತ, 40-60 ನೇ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 90 ಸಾವಿರ ರೂ. ಶುಲ್ಕ ರಿಯಾಯಿತಿ,60-80 ನೇ ಸ್ಥಾನ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಎರಡು ವರ್ಷದ ಶುಲ್ಕದಲ್ಲಿ 25 ಸಾವಿರ ರೂ.ರಿಯಾಯಿತಿ ಘೋಷಣೆ ಮಾಡಲಾಯಿತು.


ವರದಿ ಮಾಡಿದ್ದು ನಿಮ್ಮ ಡಿಸಿಜಿ ನ್ಯೂಸ್ :
ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ ನಡೆಸಿದ್ದ ಸಂಸ್ಥೆಯವರು ಅಂದು 3550 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದ್ದರೂ ಬಹುಮಾನಕ್ಕೆ ಯಾರನ್ನೂ ಆಯ್ಕೆ ಮಾಡಿರಲಿಲ್ಲ.ಇದನ್ನು ನಿಮ್ಮ ಡಿಸಿಜಿ ನ್ಯೂಸ್ ವರದಿ ಮಾಡಿತ್ತು.ಅಲ್ಲದೇ ಸಾರ್ವತ್ರಿಕವಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂಬ ಕಿವಿಮಾತನ್ನು ಸಂಸ್ಥೆಯವರ ಗಮನಕ್ಕೆ ತಂದಿತ್ತು.ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಅವರು ಪ್ರತ್ಯೇಕ ಸಮಾರಂಭವ,ಸ್ಪರ್ಧೆ ಏರ್ಪಡಿಸಿ ಯಾರಿಗೂ ಅನ್ಯಾಯವಾಗದಂತೆ ವಿದ್ಯಾರ್ಥಿಗಳ ಸ್ನೇಹಿ ನಿರ್ಧಾರ ಕೈಗೊಂಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ