ಮೈಸೂರು: ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರೂ ಆದ ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು (68) ಅವರು ನಿಧನ (Death news) ಹೊಂದಿದ್ದಾರೆ.
ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರೊ. ಮಹೇಶ್ ಚಂದ್ರಗುರು ಅವರು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚಿಕಿತ್ಸೆ ಫಲಕಾರಿಯಾದೆ ಇಹಲೋಕ ತ್ಯಜಿಸಿದ್ದಾರೆ.
ಗ್ಯಾಂಗ್ರೀನ್ನಿಂದ ಗುಣಮುಖರಾಗಿದ್ದ ಅವರನ್ನು ಎರಡು ವಾರಗಳ ಹಿಂದೆ ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ, ಶನಿವಾರ ರಾತ್ರಿ 7:15ಕ್ಕೆ ವಿಜಯನಗರದ ಎರಡನೇ ಹಂತದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರು (Death News) ಎಳೆದಿದ್ದಾರೆ.
Join Our Telegram: https://t.me/dcgkannada
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯವರಾದ ಮಹೇಶ್ ಚಂದ್ರಗುರು 80ರ ದಶಕದಲ್ಲಿ ಹೈದರಾಬಾದ್ನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು. ಆ ಬಳಿಕ ಬಳಿಕ ಮೈಸೂರು ವಿಶ್ವವಿದ್ಯಾನಿಲಯಕ್ಕೆ ವರ್ಗಾವಣೆಗೊಂಡು 2019ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು. ನಿವೃತ್ತಿ ಬಳಿಕ ಪ್ರಗತಿಪರ ಚಳವಳಿಗಳಲ್ಲಿ ಅವರು ಹೆಚ್ಚಾಗಿ ಕಾಣಿಸಿಕೊಂಡಿದ್ದರು. ಪ್ರಗತಿಪರ ಹಾಗೂ ವೈಚಾರಿಕ ಚಿಂತನೆಗಳನ್ನು ಬಿತ್ತುತ್ತಿದ್ದರು.
ಪ್ರೊ.ಮಹೇಶ್ ಚಂದ್ರ ಗುರು ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ ನಾಡಿನ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ನನಗೆ ಆತ್ಮೀಯರಾಗಿದ್ದ ಮೈಸೂರಿನ ಪ್ರಗತಿಪರ ಚಿಂತಕ ಡಾ.ಮಹೇಶ್ ಚಂದ್ರಗುರು ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
— CM of Karnataka (@CMofKarnataka) August 17, 2024
ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಮಹೇಶ್ ಚಂದ್ರ ಗುರು ಅವರು ತರಗತಿಗಳಿಂದ ಹೊರಗೆ ಕೂಡಾ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದರು.
ಬುದ್ದ, ಬಸವ, ಅಂಬೇಡ್ಕರ್ ಚಿಂತನೆಗಳಿಂದ… pic.twitter.com/onuPVEuAeq
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನನಗೆ ಆತ್ಮೀಯರಾಗಿದ್ದ ಮೈಸೂರಿನ ಪ್ರಗತಿಪರ ಚಿಂತಕ ಡಾ.ಮಹೇಶ್ ಚಂದ್ರಗುರು ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಮಹೇಶ್ ಚಂದ್ರ ಗುರು ಅವರು ತರಗತಿಗಳಿಂದ ಹೊರಗೆ ಕೂಡಾ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದರು.
ಇದನ್ನೂ ಓದಿ: Shocking Video: ಕಿರುಕುಳದಿಂದ ಬೇಸತ್ತ ಬಾಲಕಿ.. ಕುತ್ತಿಗೆಗೆ ಚಾಕುವಿನಿಂದ ಹಿರಿದುಕೊಂಡು ಆತ್ಮಹತ್ಯೆಗೆ ಯತ್ನ..! (ವೈರಲ್ ವಿಡಿಯೋ ನೋಡಿ)
ಬುದ್ದ, ಬಸವ, ಅಂಬೇಡ್ಕರ್ ಚಿಂತನೆಗಳಿಂದ ಪ್ರಭಾವಿತರಾಗಿದ್ದ ಡಾ.ಮಹೇಶ್ ಚಂದ್ರ ಗುರು ಎಂದೂ ಮೌನಕ್ಕೆ ಮೊರೆಹೋಗದೆ ಮತ್ತು ಪರಿಣಾಮವನ್ನೂ ಲೆಕ್ಕಿಸದೆ ನೇರವಾಗಿ ಮತ್ತು ನಿಷ್ಠುರವಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು. ಡಾ.ಮಹೇಶ್ ಚಂದ್ರ ಗುರು ಅವರ ನಿಧನದಿಂದ ಸಮಾಜ ಒಬ್ಬ ಚಿಂತನಶೀಲ ಮಾರ್ಗದರ್ಶಕನನ್ನು ಕಳೆದುಕೊಂಡಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆಂದು ಹೇಳಿದ್ದಾರೆ.