Death news: Progressive thinker Prof. Mahesh Chandraguru is no more

Death news: ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು ಇನ್ನಿಲ್ಲ.. ಸಿಎಂ ಸಂತಾಪ

Death news: ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು ಇನ್ನಿಲ್ಲ.. ಸಿಎಂ ಸಂತಾಪ

ಮೈಸೂರು: ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರೂ ಆದ ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು (68) ಅವರು ನಿಧನ (Death news) ಹೊಂದಿದ್ದಾರೆ.

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ‌ ಪ್ರೊ. ಮಹೇಶ್ ಚಂದ್ರಗುರು ಅವರು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚಿಕಿತ್ಸೆ ಫಲಕಾರಿಯಾದೆ ಇಹಲೋಕ ತ್ಯಜಿಸಿದ್ದಾರೆ.

ಗ್ಯಾಂಗ್ರೀನ್​​ನಿಂದ ಗುಣಮುಖರಾಗಿದ್ದ ಅವರನ್ನು‌ ಎರಡು ವಾರಗಳ ಹಿಂದೆ ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ, ಶನಿವಾರ ರಾತ್ರಿ 7:15ಕ್ಕೆ ವಿಜಯನಗರದ ಎರಡನೇ ಹಂತದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರು (Death News) ಎಳೆದಿದ್ದಾರೆ.

Join Our Telegram: https://t.me/dcgkannada

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯವರಾದ ಮಹೇಶ್ ಚಂದ್ರಗುರು 80ರ ದಶಕದಲ್ಲಿ ಹೈದರಾಬಾದ್​​ನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು. ಆ ಬಳಿಕ ಬಳಿಕ ಮೈಸೂರು ವಿಶ್ವವಿದ್ಯಾನಿಲಯಕ್ಕೆ ವರ್ಗಾವಣೆಗೊಂಡು 2019ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು. ನಿವೃತ್ತಿ ಬಳಿಕ ಪ್ರಗತಿಪರ ಚಳವಳಿಗಳಲ್ಲಿ ಅವರು ಹೆಚ್ಚಾಗಿ ಕಾಣಿಸಿಕೊಂಡಿದ್ದರು. ಪ್ರಗತಿಪರ ಹಾಗೂ ವೈಚಾರಿಕ ಚಿಂತನೆಗಳನ್ನು ಬಿತ್ತುತ್ತಿದ್ದರು.

ಪ್ರೊ.ಮಹೇಶ್‌ ಚಂದ್ರ ಗುರು ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ ನಾಡಿನ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನನಗೆ ಆತ್ಮೀಯರಾಗಿದ್ದ ಮೈಸೂರಿನ ಪ್ರಗತಿಪರ ಚಿಂತಕ ಡಾ.ಮಹೇಶ್ ಚಂದ್ರಗುರು ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಮಹೇಶ್ ಚಂದ್ರ ಗುರು ಅವರು ತರಗತಿಗಳಿಂದ ಹೊರಗೆ ಕೂಡಾ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದರು.

ಇದನ್ನೂ ಓದಿ: Shocking Video: ಕಿರುಕುಳದಿಂದ ಬೇಸತ್ತ ಬಾಲಕಿ.. ಕುತ್ತಿಗೆಗೆ ಚಾಕುವಿನಿಂದ ಹಿರಿದುಕೊಂಡು ಆತ್ಮಹತ್ಯೆಗೆ ಯತ್ನ..! (ವೈರಲ್ ವಿಡಿಯೋ ನೋಡಿ)

ಬುದ್ದ, ಬಸವ, ಅಂಬೇಡ್ಕರ್ ಚಿಂತನೆಗಳಿಂದ ಪ್ರಭಾವಿತರಾಗಿದ್ದ ಡಾ.ಮಹೇಶ್ ಚಂದ್ರ ಗುರು ಎಂದೂ ಮೌನಕ್ಕೆ ಮೊರೆಹೋಗದೆ ಮತ್ತು ಪರಿಣಾಮವನ್ನೂ ಲೆಕ್ಕಿಸದೆ ನೇರವಾಗಿ ಮತ್ತು ನಿಷ್ಠುರವಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು. ಡಾ.ಮಹೇಶ್ ಚಂದ್ರ ಗುರು ಅವರ ನಿಧನದಿಂದ ಸಮಾಜ ಒಬ್ಬ ಚಿಂತನಶೀಲ ಮಾರ್ಗದರ್ಶಕನನ್ನು ಕಳೆದುಕೊಂಡಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆಂದು ಹೇಳಿದ್ದಾರೆ.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು