Death news: ನೀರಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

Death news: ನೀರಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

ನೆಲಮಂಗಲ: ಬಹಿರ್ದೆಸೆಗೆ ಹೋದ ಬಾಲಕರು ನೀರಿನಲ್ಲಿ ಮುಳುಗಿ ಮೃತ (Death news) ಪಟ್ಟಿರುವ ಘಟನೆ ಮಂಗಳವಾರ ರಾತ್ರಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸೊಂಡೆಕೊಪ್ಪ ಗ್ರಾಮದಲ್ಲಿ ಸಂಭವಿಸಿದೆ.

ಮೃತರನ್ನು ರಾಯಚೂರು ಜಿಲ್ಲೆಯವರಾದ ಅಭಿಲಾಷ (09 ವರ್ಷ), ಸಂತೋಷ (07 ವರ್ಷ) ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ದಾಸನಪುರ ಹೋಬಳಿ ಸೊಂಡೆಕೊಪ್ಪ ಬಳಿ ಇರುವ ಬಿಕೆ ನಗರದಲ್ಲಿ ವಾಸವಾಗಿದ್ದ ಹುಡುಗರು ಮಂಗಳವಾರ ರಾತ್ರಿ ಬಹಿರ್ದೆಸೆಗೆ ಹೋಗಿ ನೀರಿನ ಹೊಂಡಕೆ ಬಿದ್ದು ಮೃತ ಪಟ್ಟಿದ್ದಾರೆ (Death news) ಎನ್ನಲಾಗಿದೆ.

ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Astrology: ನಿಮಗೆ ಹಣದ ಸಮಸ್ಯೆ ಉಂಟಾಗುವ ಸಾಧ್ಯತೆ.. ದಿನ ಭವಿಷ್ಯ: ಬುಧವಾರ, ಆಗಸ್ಟ್ 21, 2024, ದೈನಂದಿನ ರಾಶಿ ಭವಿಷ್ಯ

ಯುವಕನ ಮರ್ಮಾಂಗವನ್ನೇ ಕತ್ತರಿಸಿದ ತೃತೀಯ ಲಿಂಗಿಗಳು!

ಬೆಂಗಳೂರು: ಯುವಕನೊಬ್ಬನನ್ನು ತೃತೀಯಲಿಂಗಿಯಾಗಿ ಪರಿವರ್ತನೆಯಾಗುವಂತೆ ಒತ್ತಾಯಿಸಿ ಬಲವಂತವಾಗಿ ಆತನ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಹಿಂಸೆ ನೀಡಿದ ಆರೋಪದಲ್ಲಿ ಐವರು ತೃತೀಯ ಲಿಂಗಿಗಳ ವಿರುದ್ಧ ಪುಲಿಕೇಶಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿತ್ರಾ, ಅಶ್ವಿನಿ, ಕಾಜಲ್, ಪ್ರೀತಿ ಹಾಗೂ ಮುಗಿಲ ಎಂಬ ತೃತೀಯ ಲಿಂಗಿಗಳ ವಿರುದ್ಧ ಪೊಲೀಸರು ಎಫ್‌ಐಆ‌ರ್ ದಾಖಲಿಸಿ ಬಲೆ ಬೀಸಿದ್ದಾರೆ.

ಏನಿದು ಪ್ರಕರಣ?:

ದೂರುದಾರ ಯುವಕ 3 ವರ್ಷದ ಹಿಂದೆ ಅಂಬೇಡ್ಕರ್ ಕಾಲೇಜು ಬಳಿ ಟೀ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರೋಪಿಗಳು ಟೀ ಕುಡಿಯಲು ಆಗಾಗ ಅಂಗಡಿಗೆ ಬರುತ್ತಿದ್ದರು. ಈ ವೇಳೆ ಯುವಕನನ್ನು ಪರಿಚಯಿಸಿ ಕೊಂಡು, ನೀನು ನಮ್ಮ ಜತೆ ಬಂದರೆ ಒಳ್ಳೆಯ ಮನೆ ಹೆಣ್ಣಾದರೆ ಹೆಚ್ಚು ದುಡಿಯುವೆ ಎಂದು ಯುವಕನಿಗೆ ಒತ್ತಾಯ ಅದಕ್ಕೆ ಇಂಜೆಕ್ಷನ್ ನೀಡಿ ಶಸ್ತ್ರಚಿಕಿತ್ಸೆಯಲ್ಲಿ ಇರಿಸಿ ಸಂಪಾದನೆಗೆ ದಾರಿ ಮಾಡಿಕೊಡುವು ದಾಗಿ ಪುಸಲಾಯಿಸಿದ್ದಾರೆ. ಯುವಕ ನಾನು ಬರು ವುದಿಲ್ಲ ಎಂದರೂ ಬಲವಂತವಾಗಿ ಟ್ಯಾನರಿ ರಸ್ತೆಯ ಮನೆಯೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪೋಷಕರ ಕೊಲೆ ಮಾಡುವುದಾಗಿ ಬೆದರಿಕೆ:

ನೀನು ಭಿಕ್ಷಾಟನೆ ಮಾಡದಿದ್ದರೆ, ನಿನ್ನ ಮನೆಯವರನ್ನು ಕೊಲೆ ಮಾಡುವುದಾಗಿ ಯುವಕನನ್ನು ಬೆದರಿಸಿದ್ದಾರೆ. ಬಲವಂತವಾಗಿ 3 ವರ್ಷಗಳ ಕಾಲ ಯುವಕನಿಂದ ಭಿಕ್ಷಾಟನೆ ಮಾಡಿಸಿ ಹಣ ಪಡೆದಿದ್ದಾರೆ. ಕಳೆದ ಜು.17ರಂದು ನೀನು ಗಂಡಸಾಗಿ ರುವಾಗಲೇ ಪ್ರತಿ ದಿನ 2000 ರು. ದುಡಿದು ಕೊಡುತ್ತಿರುವೆ. ನೀನು ಹೆಣ್ಣಾದರೆ ಹೆಚ್ಚು ದುಡಿಯಬಹುದು ಎಂದಿದ್ದಾರೆ.

ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿದರು: ಬಳಿಕ ಆರೋಪಿಗಳು ಗಾಂಜಾ, ಮದ್ಯ ಸೇವಿಸಿ ಮಹಿಳೆ ಯೊಬ್ಬಳನ್ನು ಮನೆಗೆ ಕರೆಸಿಕೊಂಡು ಬಲವಂತವಾಗಿ ಯುವಕನಿಗೆ ಇಂಜೆಕ್ಷನ್ ನೀಡಿ ಪ್ರಜ್ಞೆ ತಪ್ಪಿಸಿದ್ದಾರೆ. ನಂತರ ಆತನ ಮರ್ಮಾಂಗ ಕತ್ತರಿಸಿದ್ದಾರೆ. ಆತ ಎಚ್ಚರಗೊಂಡಾಗ ಮರ್ಮಾಂಗದ ಬಳಿ ರಕ್ತಗಾಯ ವಾಗಿದ್ದು, ಪೈಪ್‌ವೊಂದನ್ನು ಅಳವಡಿಸಿರುವುದು ಕಂಡು ಬಂದಿದೆ. ಬಳಿಕ ಆರೋಪಿಗಳು ಯುವಕನನ್ನು ಆ.3ರ ವರೆಗೂ ಆ ಮನೆಯಲ್ಲೇ ಕೂಡಿ ಹಾಕಿ ಬಳಿಕ ಬೇರೆಡೆ ಕರೆದೊಯು ಪೂಜೆ ಮಾಡಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆ ಕೆಲಸಕ್ಕೆ ಒತ್ತಾಯ:

ಇನ್ನು ಮುಂದೆ ನೀನು ಭಿಕ್ಷಾಟನೆ ಮಾಡುವುದರ ಜತೆಗೆ ಲೈಂಗಿಕ ಕಾರ್ಯಕರ್ತೆಯಾಗಿ ಕೆಲಸ ಮಾಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಯುವಕ ಒಪ್ಪದಿದ್ದಾಗ 5 ಲಕ್ಷ ರು. ಕೊಡುವಂತೆ ಒತ್ತಾಯಿಸಿದ್ದಾರೆ. ಆರೋಪಿ ಗಳ ಹಿಂಸೆ ತಾಳಲಾರದೆ ತಪ್ಪಿಸಿಕೊಂಡುದೂರು ನೀಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ