Death news: ನೀರಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

Death news: ನೀರಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

ನೆಲಮಂಗಲ: ಬಹಿರ್ದೆಸೆಗೆ ಹೋದ ಬಾಲಕರು ನೀರಿನಲ್ಲಿ ಮುಳುಗಿ ಮೃತ (Death news) ಪಟ್ಟಿರುವ ಘಟನೆ ಮಂಗಳವಾರ ರಾತ್ರಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸೊಂಡೆಕೊಪ್ಪ ಗ್ರಾಮದಲ್ಲಿ ಸಂಭವಿಸಿದೆ.

ಮೃತರನ್ನು ರಾಯಚೂರು ಜಿಲ್ಲೆಯವರಾದ ಅಭಿಲಾಷ (09 ವರ್ಷ), ಸಂತೋಷ (07 ವರ್ಷ) ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ದಾಸನಪುರ ಹೋಬಳಿ ಸೊಂಡೆಕೊಪ್ಪ ಬಳಿ ಇರುವ ಬಿಕೆ ನಗರದಲ್ಲಿ ವಾಸವಾಗಿದ್ದ ಹುಡುಗರು ಮಂಗಳವಾರ ರಾತ್ರಿ ಬಹಿರ್ದೆಸೆಗೆ ಹೋಗಿ ನೀರಿನ ಹೊಂಡಕೆ ಬಿದ್ದು ಮೃತ ಪಟ್ಟಿದ್ದಾರೆ (Death news) ಎನ್ನಲಾಗಿದೆ.

ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Astrology: ನಿಮಗೆ ಹಣದ ಸಮಸ್ಯೆ ಉಂಟಾಗುವ ಸಾಧ್ಯತೆ.. ದಿನ ಭವಿಷ್ಯ: ಬುಧವಾರ, ಆಗಸ್ಟ್ 21, 2024, ದೈನಂದಿನ ರಾಶಿ ಭವಿಷ್ಯ

ಯುವಕನ ಮರ್ಮಾಂಗವನ್ನೇ ಕತ್ತರಿಸಿದ ತೃತೀಯ ಲಿಂಗಿಗಳು!

ಬೆಂಗಳೂರು: ಯುವಕನೊಬ್ಬನನ್ನು ತೃತೀಯಲಿಂಗಿಯಾಗಿ ಪರಿವರ್ತನೆಯಾಗುವಂತೆ ಒತ್ತಾಯಿಸಿ ಬಲವಂತವಾಗಿ ಆತನ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಹಿಂಸೆ ನೀಡಿದ ಆರೋಪದಲ್ಲಿ ಐವರು ತೃತೀಯ ಲಿಂಗಿಗಳ ವಿರುದ್ಧ ಪುಲಿಕೇಶಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿತ್ರಾ, ಅಶ್ವಿನಿ, ಕಾಜಲ್, ಪ್ರೀತಿ ಹಾಗೂ ಮುಗಿಲ ಎಂಬ ತೃತೀಯ ಲಿಂಗಿಗಳ ವಿರುದ್ಧ ಪೊಲೀಸರು ಎಫ್‌ಐಆ‌ರ್ ದಾಖಲಿಸಿ ಬಲೆ ಬೀಸಿದ್ದಾರೆ.

ಏನಿದು ಪ್ರಕರಣ?:

ದೂರುದಾರ ಯುವಕ 3 ವರ್ಷದ ಹಿಂದೆ ಅಂಬೇಡ್ಕರ್ ಕಾಲೇಜು ಬಳಿ ಟೀ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರೋಪಿಗಳು ಟೀ ಕುಡಿಯಲು ಆಗಾಗ ಅಂಗಡಿಗೆ ಬರುತ್ತಿದ್ದರು. ಈ ವೇಳೆ ಯುವಕನನ್ನು ಪರಿಚಯಿಸಿ ಕೊಂಡು, ನೀನು ನಮ್ಮ ಜತೆ ಬಂದರೆ ಒಳ್ಳೆಯ ಮನೆ ಹೆಣ್ಣಾದರೆ ಹೆಚ್ಚು ದುಡಿಯುವೆ ಎಂದು ಯುವಕನಿಗೆ ಒತ್ತಾಯ ಅದಕ್ಕೆ ಇಂಜೆಕ್ಷನ್ ನೀಡಿ ಶಸ್ತ್ರಚಿಕಿತ್ಸೆಯಲ್ಲಿ ಇರಿಸಿ ಸಂಪಾದನೆಗೆ ದಾರಿ ಮಾಡಿಕೊಡುವು ದಾಗಿ ಪುಸಲಾಯಿಸಿದ್ದಾರೆ. ಯುವಕ ನಾನು ಬರು ವುದಿಲ್ಲ ಎಂದರೂ ಬಲವಂತವಾಗಿ ಟ್ಯಾನರಿ ರಸ್ತೆಯ ಮನೆಯೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪೋಷಕರ ಕೊಲೆ ಮಾಡುವುದಾಗಿ ಬೆದರಿಕೆ:

ನೀನು ಭಿಕ್ಷಾಟನೆ ಮಾಡದಿದ್ದರೆ, ನಿನ್ನ ಮನೆಯವರನ್ನು ಕೊಲೆ ಮಾಡುವುದಾಗಿ ಯುವಕನನ್ನು ಬೆದರಿಸಿದ್ದಾರೆ. ಬಲವಂತವಾಗಿ 3 ವರ್ಷಗಳ ಕಾಲ ಯುವಕನಿಂದ ಭಿಕ್ಷಾಟನೆ ಮಾಡಿಸಿ ಹಣ ಪಡೆದಿದ್ದಾರೆ. ಕಳೆದ ಜು.17ರಂದು ನೀನು ಗಂಡಸಾಗಿ ರುವಾಗಲೇ ಪ್ರತಿ ದಿನ 2000 ರು. ದುಡಿದು ಕೊಡುತ್ತಿರುವೆ. ನೀನು ಹೆಣ್ಣಾದರೆ ಹೆಚ್ಚು ದುಡಿಯಬಹುದು ಎಂದಿದ್ದಾರೆ.

ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿದರು: ಬಳಿಕ ಆರೋಪಿಗಳು ಗಾಂಜಾ, ಮದ್ಯ ಸೇವಿಸಿ ಮಹಿಳೆ ಯೊಬ್ಬಳನ್ನು ಮನೆಗೆ ಕರೆಸಿಕೊಂಡು ಬಲವಂತವಾಗಿ ಯುವಕನಿಗೆ ಇಂಜೆಕ್ಷನ್ ನೀಡಿ ಪ್ರಜ್ಞೆ ತಪ್ಪಿಸಿದ್ದಾರೆ. ನಂತರ ಆತನ ಮರ್ಮಾಂಗ ಕತ್ತರಿಸಿದ್ದಾರೆ. ಆತ ಎಚ್ಚರಗೊಂಡಾಗ ಮರ್ಮಾಂಗದ ಬಳಿ ರಕ್ತಗಾಯ ವಾಗಿದ್ದು, ಪೈಪ್‌ವೊಂದನ್ನು ಅಳವಡಿಸಿರುವುದು ಕಂಡು ಬಂದಿದೆ. ಬಳಿಕ ಆರೋಪಿಗಳು ಯುವಕನನ್ನು ಆ.3ರ ವರೆಗೂ ಆ ಮನೆಯಲ್ಲೇ ಕೂಡಿ ಹಾಕಿ ಬಳಿಕ ಬೇರೆಡೆ ಕರೆದೊಯು ಪೂಜೆ ಮಾಡಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆ ಕೆಲಸಕ್ಕೆ ಒತ್ತಾಯ:

ಇನ್ನು ಮುಂದೆ ನೀನು ಭಿಕ್ಷಾಟನೆ ಮಾಡುವುದರ ಜತೆಗೆ ಲೈಂಗಿಕ ಕಾರ್ಯಕರ್ತೆಯಾಗಿ ಕೆಲಸ ಮಾಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಯುವಕ ಒಪ್ಪದಿದ್ದಾಗ 5 ಲಕ್ಷ ರು. ಕೊಡುವಂತೆ ಒತ್ತಾಯಿಸಿದ್ದಾರೆ. ಆರೋಪಿ ಗಳ ಹಿಂಸೆ ತಾಳಲಾರದೆ ತಪ್ಪಿಸಿಕೊಂಡುದೂರು ನೀಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest News

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ ಸ್ಥಾನಕ್ಕೆ ಅಂತಿಮಗೊoಡಿತ್ತು.ಆದರೆ ಕೊನೆ ಗಳಿಗೆಯಲ್ಲಿ ಎಸ್.ಆರ್.ಪಾಟೀಲರ ಹೆಸರು ಘೋಷಣೆಯಾಯಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರ ಬೆಂಬಲಿಗರು ನಾಡಗೌಡರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಸಿಎಂ ಕಚೇರಿಗೆ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು,ಬೆಂಬಲಿಗರನ್ನುದ್ದೇಶಿಸಿ ಸಿಎಂ ಡಿಕೆಶಿ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.ನಿಮ್ಮ ಆಸೆ,ವಿಚಾರ ನಾನು ಅರಿತಿದ್ದೇನೆ.ನಾಡಗೌಡರ ಬಗ್ಗೆ ಯಾರು