Death news: ನೀರಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

Death news: ನೀರಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

ನೆಲಮಂಗಲ: ಬಹಿರ್ದೆಸೆಗೆ ಹೋದ ಬಾಲಕರು ನೀರಿನಲ್ಲಿ ಮುಳುಗಿ ಮೃತ (Death news) ಪಟ್ಟಿರುವ ಘಟನೆ ಮಂಗಳವಾರ ರಾತ್ರಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸೊಂಡೆಕೊಪ್ಪ ಗ್ರಾಮದಲ್ಲಿ ಸಂಭವಿಸಿದೆ.

ಮೃತರನ್ನು ರಾಯಚೂರು ಜಿಲ್ಲೆಯವರಾದ ಅಭಿಲಾಷ (09 ವರ್ಷ), ಸಂತೋಷ (07 ವರ್ಷ) ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ದಾಸನಪುರ ಹೋಬಳಿ ಸೊಂಡೆಕೊಪ್ಪ ಬಳಿ ಇರುವ ಬಿಕೆ ನಗರದಲ್ಲಿ ವಾಸವಾಗಿದ್ದ ಹುಡುಗರು ಮಂಗಳವಾರ ರಾತ್ರಿ ಬಹಿರ್ದೆಸೆಗೆ ಹೋಗಿ ನೀರಿನ ಹೊಂಡಕೆ ಬಿದ್ದು ಮೃತ ಪಟ್ಟಿದ್ದಾರೆ (Death news) ಎನ್ನಲಾಗಿದೆ.

ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Astrology: ನಿಮಗೆ ಹಣದ ಸಮಸ್ಯೆ ಉಂಟಾಗುವ ಸಾಧ್ಯತೆ.. ದಿನ ಭವಿಷ್ಯ: ಬುಧವಾರ, ಆಗಸ್ಟ್ 21, 2024, ದೈನಂದಿನ ರಾಶಿ ಭವಿಷ್ಯ

ಯುವಕನ ಮರ್ಮಾಂಗವನ್ನೇ ಕತ್ತರಿಸಿದ ತೃತೀಯ ಲಿಂಗಿಗಳು!

ಬೆಂಗಳೂರು: ಯುವಕನೊಬ್ಬನನ್ನು ತೃತೀಯಲಿಂಗಿಯಾಗಿ ಪರಿವರ್ತನೆಯಾಗುವಂತೆ ಒತ್ತಾಯಿಸಿ ಬಲವಂತವಾಗಿ ಆತನ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಹಿಂಸೆ ನೀಡಿದ ಆರೋಪದಲ್ಲಿ ಐವರು ತೃತೀಯ ಲಿಂಗಿಗಳ ವಿರುದ್ಧ ಪುಲಿಕೇಶಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿತ್ರಾ, ಅಶ್ವಿನಿ, ಕಾಜಲ್, ಪ್ರೀತಿ ಹಾಗೂ ಮುಗಿಲ ಎಂಬ ತೃತೀಯ ಲಿಂಗಿಗಳ ವಿರುದ್ಧ ಪೊಲೀಸರು ಎಫ್‌ಐಆ‌ರ್ ದಾಖಲಿಸಿ ಬಲೆ ಬೀಸಿದ್ದಾರೆ.

ಏನಿದು ಪ್ರಕರಣ?:

ದೂರುದಾರ ಯುವಕ 3 ವರ್ಷದ ಹಿಂದೆ ಅಂಬೇಡ್ಕರ್ ಕಾಲೇಜು ಬಳಿ ಟೀ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರೋಪಿಗಳು ಟೀ ಕುಡಿಯಲು ಆಗಾಗ ಅಂಗಡಿಗೆ ಬರುತ್ತಿದ್ದರು. ಈ ವೇಳೆ ಯುವಕನನ್ನು ಪರಿಚಯಿಸಿ ಕೊಂಡು, ನೀನು ನಮ್ಮ ಜತೆ ಬಂದರೆ ಒಳ್ಳೆಯ ಮನೆ ಹೆಣ್ಣಾದರೆ ಹೆಚ್ಚು ದುಡಿಯುವೆ ಎಂದು ಯುವಕನಿಗೆ ಒತ್ತಾಯ ಅದಕ್ಕೆ ಇಂಜೆಕ್ಷನ್ ನೀಡಿ ಶಸ್ತ್ರಚಿಕಿತ್ಸೆಯಲ್ಲಿ ಇರಿಸಿ ಸಂಪಾದನೆಗೆ ದಾರಿ ಮಾಡಿಕೊಡುವು ದಾಗಿ ಪುಸಲಾಯಿಸಿದ್ದಾರೆ. ಯುವಕ ನಾನು ಬರು ವುದಿಲ್ಲ ಎಂದರೂ ಬಲವಂತವಾಗಿ ಟ್ಯಾನರಿ ರಸ್ತೆಯ ಮನೆಯೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪೋಷಕರ ಕೊಲೆ ಮಾಡುವುದಾಗಿ ಬೆದರಿಕೆ:

ನೀನು ಭಿಕ್ಷಾಟನೆ ಮಾಡದಿದ್ದರೆ, ನಿನ್ನ ಮನೆಯವರನ್ನು ಕೊಲೆ ಮಾಡುವುದಾಗಿ ಯುವಕನನ್ನು ಬೆದರಿಸಿದ್ದಾರೆ. ಬಲವಂತವಾಗಿ 3 ವರ್ಷಗಳ ಕಾಲ ಯುವಕನಿಂದ ಭಿಕ್ಷಾಟನೆ ಮಾಡಿಸಿ ಹಣ ಪಡೆದಿದ್ದಾರೆ. ಕಳೆದ ಜು.17ರಂದು ನೀನು ಗಂಡಸಾಗಿ ರುವಾಗಲೇ ಪ್ರತಿ ದಿನ 2000 ರು. ದುಡಿದು ಕೊಡುತ್ತಿರುವೆ. ನೀನು ಹೆಣ್ಣಾದರೆ ಹೆಚ್ಚು ದುಡಿಯಬಹುದು ಎಂದಿದ್ದಾರೆ.

ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿದರು: ಬಳಿಕ ಆರೋಪಿಗಳು ಗಾಂಜಾ, ಮದ್ಯ ಸೇವಿಸಿ ಮಹಿಳೆ ಯೊಬ್ಬಳನ್ನು ಮನೆಗೆ ಕರೆಸಿಕೊಂಡು ಬಲವಂತವಾಗಿ ಯುವಕನಿಗೆ ಇಂಜೆಕ್ಷನ್ ನೀಡಿ ಪ್ರಜ್ಞೆ ತಪ್ಪಿಸಿದ್ದಾರೆ. ನಂತರ ಆತನ ಮರ್ಮಾಂಗ ಕತ್ತರಿಸಿದ್ದಾರೆ. ಆತ ಎಚ್ಚರಗೊಂಡಾಗ ಮರ್ಮಾಂಗದ ಬಳಿ ರಕ್ತಗಾಯ ವಾಗಿದ್ದು, ಪೈಪ್‌ವೊಂದನ್ನು ಅಳವಡಿಸಿರುವುದು ಕಂಡು ಬಂದಿದೆ. ಬಳಿಕ ಆರೋಪಿಗಳು ಯುವಕನನ್ನು ಆ.3ರ ವರೆಗೂ ಆ ಮನೆಯಲ್ಲೇ ಕೂಡಿ ಹಾಕಿ ಬಳಿಕ ಬೇರೆಡೆ ಕರೆದೊಯು ಪೂಜೆ ಮಾಡಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆ ಕೆಲಸಕ್ಕೆ ಒತ್ತಾಯ:

ಇನ್ನು ಮುಂದೆ ನೀನು ಭಿಕ್ಷಾಟನೆ ಮಾಡುವುದರ ಜತೆಗೆ ಲೈಂಗಿಕ ಕಾರ್ಯಕರ್ತೆಯಾಗಿ ಕೆಲಸ ಮಾಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಯುವಕ ಒಪ್ಪದಿದ್ದಾಗ 5 ಲಕ್ಷ ರು. ಕೊಡುವಂತೆ ಒತ್ತಾಯಿಸಿದ್ದಾರೆ. ಆರೋಪಿ ಗಳ ಹಿಂಸೆ ತಾಳಲಾರದೆ ತಪ್ಪಿಸಿಕೊಂಡುದೂರು ನೀಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest News

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ