Decision for indefinite strike of village administrators from September 26

ಸೆ.26 ರಿಂದ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

ಸೆ.26 ರಿಂದ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

ಮುದ್ದೇಬಿಹಾಳ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.26 ರಂದು ರಾಜ್ಯವ್ಯಾಪಿ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲ್ಲೂಕು ಘಟಕದ ಅಧ್ಯಕ್ಷ ಮನೋಜ ರಾಠೋಡ, ಪ್ರಧಾನ ಕಾರ್ಯದರ್ಶಿ ರಿಯಾಜ್ ನಾಯ್ಕೋಡಿ ತಿಳಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಹೋರಾಟದಲ್ಲಿ ಭಾಗಿಯಾಗುವ ಕುರಿತು ತಹಶೀಲ್ದಾರ್‌ಗೆ ಬರೆದ ಮನವಿಯನ್ನು ಶಿರಸ್ತೇದಾರ್‌ರಿಗೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಷನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆಗಳನ್ನು ಸರಿಪಡಿಸಬೇಕು. ಸುಮಾರು 17ಕ್ಕೂ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು ಇವುಗಳ ನಿರ್ವಹಣೆಗೆ ಅವಶ್ಯಕತೆಯಾಗಿರುವ ಮೊಬೈಲ್, ಲ್ಯಾಪಟಾಪ್ , ಇಂಟರನೆಟ್, ಸ್ಕ್ಯಾನರ್ ಒದಗಿಸದೇ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿರುವುದರಿಂದ ರಾಜ್ಯದಲ್ಲಿ 17ಕ್ಕೂ ಅಧಿಕ ನೌಕರರು ಒತ್ತಡ ತಾಳದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೇ ಸಕಾಲಕ್ಕೆ ಕೆಲಸಗಳು ಆಗದೇ ಇರುವುದಕ್ಕೆ ಸಾರ್ವಜನಿಕರಿಂದ ಮಾರಣಾಂತಿಕ ಹಲ್ಲೆಯಂತಹ ಘಟನೆಗಳು ನಡೆದಿವೆ.ಗ್ರಾಮ ಆಡಳಿತಾಧಿಕಾರಿಗಳು ಸುಗಮವಾಗಿ ಕಾರ್ಯನಿರ್ವಹಿಸಲು ಅಗತ್ಯವಾದ ಮೂಲಸೌರ‍್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಇನ್ನುಳಿದಂತೆ ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳನ್ನು ಗ್ರಾಮ ಆಡಳಿತ ಅಧಿಕಾರಿ ಗ್ರೇಡ್-1 ಹುದ್ದೆಯನ್ನಾಗಿ ಪದೋನ್ನತಿ ನೀಡಬೇಕು. ಅಂತರ್‌ ಜಿಲ್ಲಾ ಪತಿ-ಪತ್ನಿ ಪ್ರಕರಣಗಳಿಗೆ ಚಾಲನೆ ನೀಡಬೇಕು.

ಈಗಾಗಲೇ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ ಮಾಡಬೇಕು ಎಂಬುದು ಸೇರಿದಂತೆ ಮೂಲಭೂತ ಸೌರ‍್ಯಗಳನ್ನು ಕಲ್ಪಿಸುವ ಕಾರ್ಯ ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿ ಸೆ.26 ರಂದು ಅನಿರ್ದಿಷ್ಟಾವಧಿಯ ಧರಣಿ ನಡೆಸುವುದಾಗಿ ತಿಳಿಸಿದರು.ಒಂದು ವೇಳೆ ಸರ್ಕಾರ ಸ್ಪಂದಿಸದಿದ್ದರೆ ರಾಜ್ಯ ಸಂಘದ ನಿರ್ಣಯದಂತೆ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದರು.

ಮನವಿಯನ್ನು ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಸ್ವೀಕರಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳಾದ ಡಿ.ಎಸ್.ಗುರಿಕಾರ, ಎಸ್.ಬಿ.ಕುಂಬಾರ, ಎ.ಎಸ್.ಬಾಬಾನಗರ, ಸಚಿನ ಗೌಡರ, ಆರ್.ಎಸ್.ಹೊಸೂರ, ಸಿ.ಬಿ.ಚವ್ಹಾಣ, ಕೆ.ಎಚ್.ನದಾಫ, ಎಸ್.ಎಂ.ಚವ್ಹಾಣ, ಕೆ.ಎಂ.ಅಲಗೂರ, ಹರ್ಷಿತಗೌಡ ಎಚ್., ಬಿ.ಕೆ.ನಂದಗಾವ, ಆರತಿ ಬಳವಾರ, ಎಂ.ಆರ್.ಇಬ್ರಾಹಿಂಪೂರ, ಅನುಪಮಾ ಪೂಜಾರ, ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ತಳವಾರ ಮೊದಲಾವರು ಇದ್ದರು.

ಇದನ್ನೂ ಓದಿ: ಬಾಲಾಜಿ ಶುಗರ‍್ಸ್ ಎಂ.ಡಿ. ವೆಂಕಟೇಶಗೌಡರ ಸ್ಮರಣೆ: ಕೇಸಾಪುರ, ಹುನಕುಂಟಿಯಲ್ಲಿ ಶುದ್ಧ ಕುಡಿವ ನೀರಿನ ಘಟಕ ಉದ್ಘಾಟನೆ

Latest News

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ವಿನಂತಿಸಿದರು. ಪಟ್ಟಣದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಆ.23ರಂದು ಮದ್ಯಾಹ್ನ 12ಗಂಟೆಗೆ ಸಂಗೊಳ್ಳಿ ರಾಯಣ್ಣನ ಜಾತ್ರೆಯ ಸಮಾರಂಭವಿದ್ದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಪ.ಪೂ. ನಿರಂಜನಾನOದಪುರಿ ಮಹಾಸ್ವಾಮೀಜಿಗಳು, ವಿವಿಧ ಜಿಲ್ಲೆಗಳ ಹರಗುರು ಚರಮೂರ್ತಿಗಳು, ಹುಲಜಂತಿ ಮಾಳಿಂಗರಾಯ ಮಹಾರಾಜರು, ರಾಜ್ಯದ ಮಂತ್ರಿ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ ಕೃತಿ ಲೋಕಾರ್ಪಣೆ ಹಾಗೂ ಸಾಧಕ ಕಲಾವಿದರಿಗೆ ಗೌರವ ಸನ್ಮಾನ ಕಾರ್ಯಕ್ರಮ ಆ.22 ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಕುಂಟೋಜಿ ಭಾವೈಕ್ಯತೆ ಮಠದ ಚೆನ್ನವೀರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸುವರು.ಬಸರಕೋಡ ಪವಾಡ ಬಸವೇಶ್ವರ ಕಮೀಟಿ ಅಧ್ಯಕ್ಷ ಕೆ.ವಾಯ್.ಬಿರಾದಾರ ಉದ್ಘಾಟಿಸುವರು.ಎಸ್.ಜಿ.ವಿ.ಸಿ ಕಾಲೇಜಿನ ಕಾರ್ಯದರ್ಶಿ ಅಶೋಕ ತಡಸದ ಕೃತಿ ಲೋಕಾರ್ಪಣೆ ಮಾಡುವರು.ಕರ್ನಾಟಕ