Decision for indefinite strike of village administrators from September 26

ಸೆ.26 ರಿಂದ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

ಸೆ.26 ರಿಂದ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

ಮುದ್ದೇಬಿಹಾಳ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.26 ರಂದು ರಾಜ್ಯವ್ಯಾಪಿ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲ್ಲೂಕು ಘಟಕದ ಅಧ್ಯಕ್ಷ ಮನೋಜ ರಾಠೋಡ, ಪ್ರಧಾನ ಕಾರ್ಯದರ್ಶಿ ರಿಯಾಜ್ ನಾಯ್ಕೋಡಿ ತಿಳಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಹೋರಾಟದಲ್ಲಿ ಭಾಗಿಯಾಗುವ ಕುರಿತು ತಹಶೀಲ್ದಾರ್‌ಗೆ ಬರೆದ ಮನವಿಯನ್ನು ಶಿರಸ್ತೇದಾರ್‌ರಿಗೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಷನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆಗಳನ್ನು ಸರಿಪಡಿಸಬೇಕು. ಸುಮಾರು 17ಕ್ಕೂ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು ಇವುಗಳ ನಿರ್ವಹಣೆಗೆ ಅವಶ್ಯಕತೆಯಾಗಿರುವ ಮೊಬೈಲ್, ಲ್ಯಾಪಟಾಪ್ , ಇಂಟರನೆಟ್, ಸ್ಕ್ಯಾನರ್ ಒದಗಿಸದೇ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿರುವುದರಿಂದ ರಾಜ್ಯದಲ್ಲಿ 17ಕ್ಕೂ ಅಧಿಕ ನೌಕರರು ಒತ್ತಡ ತಾಳದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೇ ಸಕಾಲಕ್ಕೆ ಕೆಲಸಗಳು ಆಗದೇ ಇರುವುದಕ್ಕೆ ಸಾರ್ವಜನಿಕರಿಂದ ಮಾರಣಾಂತಿಕ ಹಲ್ಲೆಯಂತಹ ಘಟನೆಗಳು ನಡೆದಿವೆ.ಗ್ರಾಮ ಆಡಳಿತಾಧಿಕಾರಿಗಳು ಸುಗಮವಾಗಿ ಕಾರ್ಯನಿರ್ವಹಿಸಲು ಅಗತ್ಯವಾದ ಮೂಲಸೌರ‍್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಇನ್ನುಳಿದಂತೆ ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳನ್ನು ಗ್ರಾಮ ಆಡಳಿತ ಅಧಿಕಾರಿ ಗ್ರೇಡ್-1 ಹುದ್ದೆಯನ್ನಾಗಿ ಪದೋನ್ನತಿ ನೀಡಬೇಕು. ಅಂತರ್‌ ಜಿಲ್ಲಾ ಪತಿ-ಪತ್ನಿ ಪ್ರಕರಣಗಳಿಗೆ ಚಾಲನೆ ನೀಡಬೇಕು.

ಈಗಾಗಲೇ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ ಮಾಡಬೇಕು ಎಂಬುದು ಸೇರಿದಂತೆ ಮೂಲಭೂತ ಸೌರ‍್ಯಗಳನ್ನು ಕಲ್ಪಿಸುವ ಕಾರ್ಯ ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿ ಸೆ.26 ರಂದು ಅನಿರ್ದಿಷ್ಟಾವಧಿಯ ಧರಣಿ ನಡೆಸುವುದಾಗಿ ತಿಳಿಸಿದರು.ಒಂದು ವೇಳೆ ಸರ್ಕಾರ ಸ್ಪಂದಿಸದಿದ್ದರೆ ರಾಜ್ಯ ಸಂಘದ ನಿರ್ಣಯದಂತೆ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದರು.

ಮನವಿಯನ್ನು ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಸ್ವೀಕರಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳಾದ ಡಿ.ಎಸ್.ಗುರಿಕಾರ, ಎಸ್.ಬಿ.ಕುಂಬಾರ, ಎ.ಎಸ್.ಬಾಬಾನಗರ, ಸಚಿನ ಗೌಡರ, ಆರ್.ಎಸ್.ಹೊಸೂರ, ಸಿ.ಬಿ.ಚವ್ಹಾಣ, ಕೆ.ಎಚ್.ನದಾಫ, ಎಸ್.ಎಂ.ಚವ್ಹಾಣ, ಕೆ.ಎಂ.ಅಲಗೂರ, ಹರ್ಷಿತಗೌಡ ಎಚ್., ಬಿ.ಕೆ.ನಂದಗಾವ, ಆರತಿ ಬಳವಾರ, ಎಂ.ಆರ್.ಇಬ್ರಾಹಿಂಪೂರ, ಅನುಪಮಾ ಪೂಜಾರ, ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ತಳವಾರ ಮೊದಲಾವರು ಇದ್ದರು.

ಇದನ್ನೂ ಓದಿ: ಬಾಲಾಜಿ ಶುಗರ‍್ಸ್ ಎಂ.ಡಿ. ವೆಂಕಟೇಶಗೌಡರ ಸ್ಮರಣೆ: ಕೇಸಾಪುರ, ಹುನಕುಂಟಿಯಲ್ಲಿ ಶುದ್ಧ ಕುಡಿವ ನೀರಿನ ಘಟಕ ಉದ್ಘಾಟನೆ

Latest News

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ ಜೊತೆಗೆ ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ ಜಾಗೃತಿ ಮೂಡಿಸಿದ್ದರು ಎಂದು ಹೆಸ್ಕಾಂ ಎಇಇ ಆರ್.ಆರ್.ಹಂಡಿ ಹೇಳಿದರು. ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸಾಮಾಜಿಕ ಅಸಮಾನತೆ,ಜಾತೀಯತೆ,ಅಸ್ಪೃಶ್ಯತೆಯ ವಿರುದ್ಧ ಹಿಂದಿನ ಕಾಲದಲ್ಲಿ ಶರಣರು,ಸಮಾಜ ಸುಧಾರಕರು ಹೋರಾಡಿದ್ದಾರೆ.ಮೂಢನಂಬಿಕೆಯ ವಿರುದ್ಧ ಜಾಗೃತಿ ಮೂಡಿಸುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿರುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ ಎಂದು ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ರಾಜೀನಾಮೆ ನೀಡಿ ಮನೆಗೆ ಹೋಗುವಂತೆ ಆಗ್ರಹಿಸಿದ್ದಾರೆ. ಪಟ್ಟಣದ ಮಾರುತಿ ನಗರದಲ್ಲಿರುವ ಫಾರ್ಮ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು