Decision for indefinite strike of village administrators from September 26

ಸೆ.26 ರಿಂದ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

ಸೆ.26 ರಿಂದ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

ಮುದ್ದೇಬಿಹಾಳ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.26 ರಂದು ರಾಜ್ಯವ್ಯಾಪಿ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲ್ಲೂಕು ಘಟಕದ ಅಧ್ಯಕ್ಷ ಮನೋಜ ರಾಠೋಡ, ಪ್ರಧಾನ ಕಾರ್ಯದರ್ಶಿ ರಿಯಾಜ್ ನಾಯ್ಕೋಡಿ ತಿಳಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಹೋರಾಟದಲ್ಲಿ ಭಾಗಿಯಾಗುವ ಕುರಿತು ತಹಶೀಲ್ದಾರ್‌ಗೆ ಬರೆದ ಮನವಿಯನ್ನು ಶಿರಸ್ತೇದಾರ್‌ರಿಗೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಷನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆಗಳನ್ನು ಸರಿಪಡಿಸಬೇಕು. ಸುಮಾರು 17ಕ್ಕೂ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು ಇವುಗಳ ನಿರ್ವಹಣೆಗೆ ಅವಶ್ಯಕತೆಯಾಗಿರುವ ಮೊಬೈಲ್, ಲ್ಯಾಪಟಾಪ್ , ಇಂಟರನೆಟ್, ಸ್ಕ್ಯಾನರ್ ಒದಗಿಸದೇ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿರುವುದರಿಂದ ರಾಜ್ಯದಲ್ಲಿ 17ಕ್ಕೂ ಅಧಿಕ ನೌಕರರು ಒತ್ತಡ ತಾಳದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೇ ಸಕಾಲಕ್ಕೆ ಕೆಲಸಗಳು ಆಗದೇ ಇರುವುದಕ್ಕೆ ಸಾರ್ವಜನಿಕರಿಂದ ಮಾರಣಾಂತಿಕ ಹಲ್ಲೆಯಂತಹ ಘಟನೆಗಳು ನಡೆದಿವೆ.ಗ್ರಾಮ ಆಡಳಿತಾಧಿಕಾರಿಗಳು ಸುಗಮವಾಗಿ ಕಾರ್ಯನಿರ್ವಹಿಸಲು ಅಗತ್ಯವಾದ ಮೂಲಸೌರ‍್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಇನ್ನುಳಿದಂತೆ ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳನ್ನು ಗ್ರಾಮ ಆಡಳಿತ ಅಧಿಕಾರಿ ಗ್ರೇಡ್-1 ಹುದ್ದೆಯನ್ನಾಗಿ ಪದೋನ್ನತಿ ನೀಡಬೇಕು. ಅಂತರ್‌ ಜಿಲ್ಲಾ ಪತಿ-ಪತ್ನಿ ಪ್ರಕರಣಗಳಿಗೆ ಚಾಲನೆ ನೀಡಬೇಕು.

ಈಗಾಗಲೇ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ ಮಾಡಬೇಕು ಎಂಬುದು ಸೇರಿದಂತೆ ಮೂಲಭೂತ ಸೌರ‍್ಯಗಳನ್ನು ಕಲ್ಪಿಸುವ ಕಾರ್ಯ ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿ ಸೆ.26 ರಂದು ಅನಿರ್ದಿಷ್ಟಾವಧಿಯ ಧರಣಿ ನಡೆಸುವುದಾಗಿ ತಿಳಿಸಿದರು.ಒಂದು ವೇಳೆ ಸರ್ಕಾರ ಸ್ಪಂದಿಸದಿದ್ದರೆ ರಾಜ್ಯ ಸಂಘದ ನಿರ್ಣಯದಂತೆ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದರು.

ಮನವಿಯನ್ನು ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಸ್ವೀಕರಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳಾದ ಡಿ.ಎಸ್.ಗುರಿಕಾರ, ಎಸ್.ಬಿ.ಕುಂಬಾರ, ಎ.ಎಸ್.ಬಾಬಾನಗರ, ಸಚಿನ ಗೌಡರ, ಆರ್.ಎಸ್.ಹೊಸೂರ, ಸಿ.ಬಿ.ಚವ್ಹಾಣ, ಕೆ.ಎಚ್.ನದಾಫ, ಎಸ್.ಎಂ.ಚವ್ಹಾಣ, ಕೆ.ಎಂ.ಅಲಗೂರ, ಹರ್ಷಿತಗೌಡ ಎಚ್., ಬಿ.ಕೆ.ನಂದಗಾವ, ಆರತಿ ಬಳವಾರ, ಎಂ.ಆರ್.ಇಬ್ರಾಹಿಂಪೂರ, ಅನುಪಮಾ ಪೂಜಾರ, ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ತಳವಾರ ಮೊದಲಾವರು ಇದ್ದರು.

ಇದನ್ನೂ ಓದಿ: ಬಾಲಾಜಿ ಶುಗರ‍್ಸ್ ಎಂ.ಡಿ. ವೆಂಕಟೇಶಗೌಡರ ಸ್ಮರಣೆ: ಕೇಸಾಪುರ, ಹುನಕುಂಟಿಯಲ್ಲಿ ಶುದ್ಧ ಕುಡಿವ ನೀರಿನ ಘಟಕ ಉದ್ಘಾಟನೆ

Latest News

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship 2025: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ ನೀಡಿದೆ. 2024 ಮತ್ತು 2025 ನೇ ಸಾಲಿನ ಮೆಟ್ರಿಕ್ ನಂತರ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಅರ್ಜಿಯನ್ನು ಕರೆಯಲಾಗಿದೆ. Join Our Telegram: https://t.me/dcgkannada ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣ ಅನುಕೂಲಕ್ಕಾಗಿ ಸಾಕಷ್ಟು ಯೋಜನೆ ಮತ್ತು ಸ್ಕಾಲರ್ಶಿಪ್ ಗಳನ್ನು ಜಾರಿಗೆ ತರುತ್ತಿದೆ ಮತ್ತು ಅವರ ಪರೀಕ್ಷೆ ಉತ್ತಮವಾಗಿ ಪಾಸಾಗಿದ್ದರೆ ಸಾಕು.

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ