ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.
ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ ಇಚ್ಛಾಶಕ್ತಿಯ ಕೊರತೆ ಹಾಗೂ ಅಧಿಕಾರಿಗಳ ಉದಾಸೀನ ಮನೋಭಾವದಿಂದಾಗಿ ರೈತರು ತೊಂದರೆಯಲ್ಲಿ ಇದ್ದಾರೆ.ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಅನುಷ್ಠಾನಗೊಳಿಸಿರುವ ಯೋಜನೆ ಕೆಲವು ಕಾರಣಗಳಿಂದ ಸ್ಥಗಿತಗೊಂಡಿರುವುದನ್ನು ಬಗೆ ಹರಿಸಲಾಗದೇ ಇರುವುದು ಬೇಸರದ ಸಂಗತಿ ಎಂದು ಹೇಳಿದರು.
ಯೋಜನೆಯ ವ್ಯಾಪ್ತಿಯಲ್ಲಿ ಬರುವ ರೈತರನ್ನು ಒಗ್ಗೂಡಿಸಿಕೊಂಡು ನಾಗರಬೆಟ್ಟದಲ್ಲಿ ಬೃಹತ್ ಹೋರಾಟ ನಡೆಸಲಾಗುವುದು.ಅಧಿಕಾರಿಗಳು ನೆಪಗಳನ್ನು ಹೇಳದೇ ಕೆಲಸ ಶುರು ಮಾಡಬೇಕು.ರೈತರಪರವಾಗಿ ನಮ್ಮ ದ್ವನಿ ಸದಾ ಮೊಳಗಲಿದೆ ಎಂದು ಹೇಳಿದರು.
ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿದೆ.ಗಂಭೀರವಲ್ಲದ ಸಮಸ್ಯೆಯನ್ನು ದೊಡ್ಡದನ್ನಾಗಿ ಬಿಂಬಿಸಿ ಸಾವಿರಾರು ಎಕರೆ ನೀರಾವರಿ ಆಗುವುದರಿಂದ ವಂಚನೆ ಮಾಡಲಾಗುತ್ತಿದೆ.ಜಮೀನು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಒದಗಿಸುವುದು,ನ್ಯಾಯುತವಾಗಿ ರೈತರ ಬೇಡಿಕೆಗಳಿಗೆ ಸ್ಪಂದಿಸುವವರೆಗೂ ಹೋರಾಟ ಮುಂದುವರೆಯಲಿದೆ.ಜೂನ್ ಮೊದಲ ವಾರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ರಾಜ್ಯ ಅಧ್ಯಕ್ಷ ಚೂನಪ್ಪ ಪೂಜಾರಿ, ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಅವರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯಮನಪ್ಪ ರಕ್ಕಸಗಿ,ಶರಣಗೌಡ ಸಿದರೆಡ್ಡಿ,ಮಹೇಂದ್ರ ಬಂಗಾರಗುAಡ,ಶAಕರಗೌಡ ಸಿದರೆಡ್ಡಿ,ಹಣಮಂತ್ರಾಯಗೌಡ ಧನ್ನೂರ,ಈರಪ್ಪ ರಕ್ಕಸಗಿ,ಭೀಮನಗೌಡ ಸಿದರೆಡ್ಡಿ,ಮಹಾಂತಯ್ಯ ಹಿರೇಮಠ,
ಶೇಖರ ಸಿದರೆಡ್ಡಿ,ಶಿವಪ್ಪ ಛಲವಾದಿ ಮೊದಲಾದವರು ಇದ್ದರು.







