ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.

ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ ಇಚ್ಛಾಶಕ್ತಿಯ ಕೊರತೆ ಹಾಗೂ ಅಧಿಕಾರಿಗಳ ಉದಾಸೀನ ಮನೋಭಾವದಿಂದಾಗಿ ರೈತರು ತೊಂದರೆಯಲ್ಲಿ ಇದ್ದಾರೆ.ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಅನುಷ್ಠಾನಗೊಳಿಸಿರುವ ಯೋಜನೆ ಕೆಲವು ಕಾರಣಗಳಿಂದ ಸ್ಥಗಿತಗೊಂಡಿರುವುದನ್ನು ಬಗೆ ಹರಿಸಲಾಗದೇ ಇರುವುದು ಬೇಸರದ ಸಂಗತಿ ಎಂದು ಹೇಳಿದರು.

ಯೋಜನೆಯ ವ್ಯಾಪ್ತಿಯಲ್ಲಿ ಬರುವ ರೈತರನ್ನು ಒಗ್ಗೂಡಿಸಿಕೊಂಡು ನಾಗರಬೆಟ್ಟದಲ್ಲಿ ಬೃಹತ್ ಹೋರಾಟ ನಡೆಸಲಾಗುವುದು.ಅಧಿಕಾರಿಗಳು ನೆಪಗಳನ್ನು ಹೇಳದೇ ಕೆಲಸ ಶುರು ಮಾಡಬೇಕು.ರೈತರಪರವಾಗಿ ನಮ್ಮ ದ್ವನಿ ಸದಾ ಮೊಳಗಲಿದೆ ಎಂದು ಹೇಳಿದರು.

ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿದೆ.ಗಂಭೀರವಲ್ಲದ ಸಮಸ್ಯೆಯನ್ನು ದೊಡ್ಡದನ್ನಾಗಿ ಬಿಂಬಿಸಿ ಸಾವಿರಾರು ಎಕರೆ ನೀರಾವರಿ ಆಗುವುದರಿಂದ ವಂಚನೆ ಮಾಡಲಾಗುತ್ತಿದೆ.ಜಮೀನು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಒದಗಿಸುವುದು,ನ್ಯಾಯುತವಾಗಿ ರೈತರ ಬೇಡಿಕೆಗಳಿಗೆ ಸ್ಪಂದಿಸುವವರೆಗೂ ಹೋರಾಟ ಮುಂದುವರೆಯಲಿದೆ.ಜೂನ್ ಮೊದಲ ವಾರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ರಾಜ್ಯ ಅಧ್ಯಕ್ಷ ಚೂನಪ್ಪ ಪೂಜಾರಿ, ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಅವರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯಮನಪ್ಪ ರಕ್ಕಸಗಿ,ಶರಣಗೌಡ ಸಿದರೆಡ್ಡಿ,ಮಹೇಂದ್ರ ಬಂಗಾರಗುAಡ,ಶAಕರಗೌಡ ಸಿದರೆಡ್ಡಿ,ಹಣಮಂತ್ರಾಯಗೌಡ ಧನ್ನೂರ,ಈರಪ್ಪ ರಕ್ಕಸಗಿ,ಭೀಮನಗೌಡ ಸಿದರೆಡ್ಡಿ,ಮಹಾಂತಯ್ಯ ಹಿರೇಮಠ,
ಶೇಖರ ಸಿದರೆಡ್ಡಿ,ಶಿವಪ್ಪ ಛಲವಾದಿ ಮೊದಲಾದವರು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ