Decision to teach ethical science: Schools to start from May 29-Minister Bangarappa

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು ಸರ್ಕಾರಿ ಶಾಲೆಗಳಿಗೆ ತೆರಳಿ ಮಕ್ಕಳನ್ನು ಸ್ವಾಗತಿಸಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಪಟ್ಟಣದ ಏಪಿಎಂಸಿ ಯಾರ್ಡ್ ನಲ್ಲಿ ಶನಿವಾರ ಪೂರ್ವಭಾವಿ ಸಭೆಯೊಂದರಲ್ಲಿ ಪಾಲ್ಗೊಂಡು ನಿರ್ಗಮಿಸುವ ವೇಳೆ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮುಖ್ಯಮಂತ್ರಿಗಳು ಶಾಲೆಗಳಲ್ಲಿ ನೈತಿಕ ಶಿಕ್ಷಣ ನೀಡಬೇಕು ಎಂದು ಸೂಚಿಸಿದ್ದು ಆ ಬಗ್ಗೆ ಮೇಲ್ಮನೆಯಲ್ಲೂ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದೆ. ಈ ವರ್ಷ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ, ಪ್ರೌಢ, ಪಿಯುಸಿ ಹಂತದಲ್ಲಿ ಮಕ್ಕಳಿಗೆ ಮಾನವೀಯ ಮೌಲ್ಯವುಳ್ಳ ಶಿಕ್ಷಣ ನೀಡುವ ಉದ್ದೇಶದಿಂದ ನೀತಿ ವಿಜ್ಞಾನ ಬೋಧಿಸಲಾಗುವುದು ಎಂದು ತಿಳಿಸಿದರು.

ಶಾಲಾ ಆರಂಭೋತ್ಸವದ ದಿನದಂದೇ ಎಲ್ಲ ಮಕ್ಕಳಿಗೆ ಸಮವಸ್ತ್ರ ಪಠ್ಯಪುಸ್ತಕ ವಿತರಿಸಲಾಗುತ್ತದೆ. ಶೂ, ಸಾಕ್ಸ್ ಹಂತಹಂತವಾಗಿ ಶಾಲೆಯಲ್ಲಿ ವಿತರಿಸಲಾಗುತ್ತಿದೆ. ಅದಕ್ಕೂ ಒಂದು ಕಠಿಣ ಕಾನೂನು ರೂಪಿಸಿ ಶಾಲಾ ಆರಂಭದಲ್ಲೇ ಮಕ್ಕಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶೂನ್ಯ ಫಲಿತಾಂಶ ಬಂದ ಶಾಲೆಗಳ ಗುಣಮಟ್ಟ ಸುಧಾರಣೆಗೆ ಕ್ರಮ : ಶೂನ್ಯ ಫಲಿತಾಂಶ ಬಾರದಂತೆ ನೋಡಿಕೊಳ್ಳಲಾಗುವುದು. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದಾಗ ಕೆಲವೊಂದು ಶಾಲೆಗಳು ಶೂನ್ಯ ಬರುತ್ತಿರುತ್ತವೆ. ಅವುಗಳು ಬರದಂತೆ ನೋಡಿಕೊಳ್ಳಲಾಗುವುದು. ಮಕ್ಕಳು ಸ್ವಂತ ಶಕ್ತಿಯ ಮೇಲೆ ಪರೀಕ್ಷೆ ಬರೆಯುತ್ತಿದ್ದಾರೆ. ಕಾಪಿ ಹೊಡೆಯುವುದು ಕಡಿಮೆ ಆಗಿದೆ. ದೇಶದಲ್ಲೇ ಮೊದಲು ನಮ್ಮಲ್ಲಿ ಪರೀಕ್ಷಾ ವ್ಯವಸ್ಥೆಗೆ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಜಾರಿಗೊಳಿಸಿದ್ದು ಅದನ್ನು ಕೇಂದ್ರದ ಪರೀಕ್ಷೆಗಳಿಗೂ ಅಳವಡಿಸಿಕೊಳ್ಳಲಾಗಿದೆ ಎಂದು ಬಂಗಾರಪ್ಪ ತಿಳಿಸಿದರು.

ಡಿಡಿಪಿಐ, ಬಿಇಒಗಳ ಕೊರತೆ: ರಾಜ್ಯದಲ್ಲಿ ಡಿಡಿಪಿಐ, ಬಿಇಒಗಳ ಕೊರತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರು ವಿಜಯಪುರ ಜಿಲ್ಲೆಗೆ ಕಾಯಂ ಡಿಡಿಪಿಐ ನೇಮಕ ಯಾವಾಗ ಮಾಡುತ್ತೀರಿ ಎಂದು ಕೇಳಲಾದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು. ಪದೋನ್ನತಿ ನೀಡಿ ನೇಮಕ ಮಾಡಬೇಕಾಗಿದೆ. ಸ್ಥಾನಗಳ ಸಂಖ್ಯೆಯಲ್ಲಿ ಏರುಪೇರಾಗಬಹುದು. ಉಸ್ತುವಾರಿ ಸಚಿವರ ಶಿಫಾರಸ್ಸು ಪಡೆದುಕೊಂಡು ನೇಮಕ ಮಾಡಲಾಗುತ್ತದೆ. ಕಲಿಕಾ ಬಂಧು, ಸೇತುಬಂಧ ಸಂದರ್ಭದಲ್ಲಿ ಡಿಡಿಪಿಐ ನೇಮಕ ಮಾಡಲಾಗುವುದು ಎಂದು ಶಿಕ್ಷಣ ಸಚಿವರು ಹೇಳಿದರು. ಶಾಸಕ ಸಿ.ಎಸ್.ನಾಡಗೌಡ ಉಪಸ್ಥಿತರಿದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ