Decision to teach ethical science: Schools to start from May 29-Minister Bangarappa

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು ಸರ್ಕಾರಿ ಶಾಲೆಗಳಿಗೆ ತೆರಳಿ ಮಕ್ಕಳನ್ನು ಸ್ವಾಗತಿಸಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಪಟ್ಟಣದ ಏಪಿಎಂಸಿ ಯಾರ್ಡ್ ನಲ್ಲಿ ಶನಿವಾರ ಪೂರ್ವಭಾವಿ ಸಭೆಯೊಂದರಲ್ಲಿ ಪಾಲ್ಗೊಂಡು ನಿರ್ಗಮಿಸುವ ವೇಳೆ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮುಖ್ಯಮಂತ್ರಿಗಳು ಶಾಲೆಗಳಲ್ಲಿ ನೈತಿಕ ಶಿಕ್ಷಣ ನೀಡಬೇಕು ಎಂದು ಸೂಚಿಸಿದ್ದು ಆ ಬಗ್ಗೆ ಮೇಲ್ಮನೆಯಲ್ಲೂ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದೆ. ಈ ವರ್ಷ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ, ಪ್ರೌಢ, ಪಿಯುಸಿ ಹಂತದಲ್ಲಿ ಮಕ್ಕಳಿಗೆ ಮಾನವೀಯ ಮೌಲ್ಯವುಳ್ಳ ಶಿಕ್ಷಣ ನೀಡುವ ಉದ್ದೇಶದಿಂದ ನೀತಿ ವಿಜ್ಞಾನ ಬೋಧಿಸಲಾಗುವುದು ಎಂದು ತಿಳಿಸಿದರು.

ಶಾಲಾ ಆರಂಭೋತ್ಸವದ ದಿನದಂದೇ ಎಲ್ಲ ಮಕ್ಕಳಿಗೆ ಸಮವಸ್ತ್ರ ಪಠ್ಯಪುಸ್ತಕ ವಿತರಿಸಲಾಗುತ್ತದೆ. ಶೂ, ಸಾಕ್ಸ್ ಹಂತಹಂತವಾಗಿ ಶಾಲೆಯಲ್ಲಿ ವಿತರಿಸಲಾಗುತ್ತಿದೆ. ಅದಕ್ಕೂ ಒಂದು ಕಠಿಣ ಕಾನೂನು ರೂಪಿಸಿ ಶಾಲಾ ಆರಂಭದಲ್ಲೇ ಮಕ್ಕಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶೂನ್ಯ ಫಲಿತಾಂಶ ಬಂದ ಶಾಲೆಗಳ ಗುಣಮಟ್ಟ ಸುಧಾರಣೆಗೆ ಕ್ರಮ : ಶೂನ್ಯ ಫಲಿತಾಂಶ ಬಾರದಂತೆ ನೋಡಿಕೊಳ್ಳಲಾಗುವುದು. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದಾಗ ಕೆಲವೊಂದು ಶಾಲೆಗಳು ಶೂನ್ಯ ಬರುತ್ತಿರುತ್ತವೆ. ಅವುಗಳು ಬರದಂತೆ ನೋಡಿಕೊಳ್ಳಲಾಗುವುದು. ಮಕ್ಕಳು ಸ್ವಂತ ಶಕ್ತಿಯ ಮೇಲೆ ಪರೀಕ್ಷೆ ಬರೆಯುತ್ತಿದ್ದಾರೆ. ಕಾಪಿ ಹೊಡೆಯುವುದು ಕಡಿಮೆ ಆಗಿದೆ. ದೇಶದಲ್ಲೇ ಮೊದಲು ನಮ್ಮಲ್ಲಿ ಪರೀಕ್ಷಾ ವ್ಯವಸ್ಥೆಗೆ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಜಾರಿಗೊಳಿಸಿದ್ದು ಅದನ್ನು ಕೇಂದ್ರದ ಪರೀಕ್ಷೆಗಳಿಗೂ ಅಳವಡಿಸಿಕೊಳ್ಳಲಾಗಿದೆ ಎಂದು ಬಂಗಾರಪ್ಪ ತಿಳಿಸಿದರು.

ಡಿಡಿಪಿಐ, ಬಿಇಒಗಳ ಕೊರತೆ: ರಾಜ್ಯದಲ್ಲಿ ಡಿಡಿಪಿಐ, ಬಿಇಒಗಳ ಕೊರತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರು ವಿಜಯಪುರ ಜಿಲ್ಲೆಗೆ ಕಾಯಂ ಡಿಡಿಪಿಐ ನೇಮಕ ಯಾವಾಗ ಮಾಡುತ್ತೀರಿ ಎಂದು ಕೇಳಲಾದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು. ಪದೋನ್ನತಿ ನೀಡಿ ನೇಮಕ ಮಾಡಬೇಕಾಗಿದೆ. ಸ್ಥಾನಗಳ ಸಂಖ್ಯೆಯಲ್ಲಿ ಏರುಪೇರಾಗಬಹುದು. ಉಸ್ತುವಾರಿ ಸಚಿವರ ಶಿಫಾರಸ್ಸು ಪಡೆದುಕೊಂಡು ನೇಮಕ ಮಾಡಲಾಗುತ್ತದೆ. ಕಲಿಕಾ ಬಂಧು, ಸೇತುಬಂಧ ಸಂದರ್ಭದಲ್ಲಿ ಡಿಡಿಪಿಐ ನೇಮಕ ಮಾಡಲಾಗುವುದು ಎಂದು ಶಿಕ್ಷಣ ಸಚಿವರು ಹೇಳಿದರು. ಶಾಸಕ ಸಿ.ಎಸ್.ನಾಡಗೌಡ ಉಪಸ್ಥಿತರಿದ್ದರು.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್