Decision to teach ethical science: Schools to start from May 29-Minister Bangarappa

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು ಸರ್ಕಾರಿ ಶಾಲೆಗಳಿಗೆ ತೆರಳಿ ಮಕ್ಕಳನ್ನು ಸ್ವಾಗತಿಸಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಪಟ್ಟಣದ ಏಪಿಎಂಸಿ ಯಾರ್ಡ್ ನಲ್ಲಿ ಶನಿವಾರ ಪೂರ್ವಭಾವಿ ಸಭೆಯೊಂದರಲ್ಲಿ ಪಾಲ್ಗೊಂಡು ನಿರ್ಗಮಿಸುವ ವೇಳೆ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮುಖ್ಯಮಂತ್ರಿಗಳು ಶಾಲೆಗಳಲ್ಲಿ ನೈತಿಕ ಶಿಕ್ಷಣ ನೀಡಬೇಕು ಎಂದು ಸೂಚಿಸಿದ್ದು ಆ ಬಗ್ಗೆ ಮೇಲ್ಮನೆಯಲ್ಲೂ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದೆ. ಈ ವರ್ಷ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ, ಪ್ರೌಢ, ಪಿಯುಸಿ ಹಂತದಲ್ಲಿ ಮಕ್ಕಳಿಗೆ ಮಾನವೀಯ ಮೌಲ್ಯವುಳ್ಳ ಶಿಕ್ಷಣ ನೀಡುವ ಉದ್ದೇಶದಿಂದ ನೀತಿ ವಿಜ್ಞಾನ ಬೋಧಿಸಲಾಗುವುದು ಎಂದು ತಿಳಿಸಿದರು.

ಶಾಲಾ ಆರಂಭೋತ್ಸವದ ದಿನದಂದೇ ಎಲ್ಲ ಮಕ್ಕಳಿಗೆ ಸಮವಸ್ತ್ರ ಪಠ್ಯಪುಸ್ತಕ ವಿತರಿಸಲಾಗುತ್ತದೆ. ಶೂ, ಸಾಕ್ಸ್ ಹಂತಹಂತವಾಗಿ ಶಾಲೆಯಲ್ಲಿ ವಿತರಿಸಲಾಗುತ್ತಿದೆ. ಅದಕ್ಕೂ ಒಂದು ಕಠಿಣ ಕಾನೂನು ರೂಪಿಸಿ ಶಾಲಾ ಆರಂಭದಲ್ಲೇ ಮಕ್ಕಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶೂನ್ಯ ಫಲಿತಾಂಶ ಬಂದ ಶಾಲೆಗಳ ಗುಣಮಟ್ಟ ಸುಧಾರಣೆಗೆ ಕ್ರಮ : ಶೂನ್ಯ ಫಲಿತಾಂಶ ಬಾರದಂತೆ ನೋಡಿಕೊಳ್ಳಲಾಗುವುದು. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದಾಗ ಕೆಲವೊಂದು ಶಾಲೆಗಳು ಶೂನ್ಯ ಬರುತ್ತಿರುತ್ತವೆ. ಅವುಗಳು ಬರದಂತೆ ನೋಡಿಕೊಳ್ಳಲಾಗುವುದು. ಮಕ್ಕಳು ಸ್ವಂತ ಶಕ್ತಿಯ ಮೇಲೆ ಪರೀಕ್ಷೆ ಬರೆಯುತ್ತಿದ್ದಾರೆ. ಕಾಪಿ ಹೊಡೆಯುವುದು ಕಡಿಮೆ ಆಗಿದೆ. ದೇಶದಲ್ಲೇ ಮೊದಲು ನಮ್ಮಲ್ಲಿ ಪರೀಕ್ಷಾ ವ್ಯವಸ್ಥೆಗೆ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಜಾರಿಗೊಳಿಸಿದ್ದು ಅದನ್ನು ಕೇಂದ್ರದ ಪರೀಕ್ಷೆಗಳಿಗೂ ಅಳವಡಿಸಿಕೊಳ್ಳಲಾಗಿದೆ ಎಂದು ಬಂಗಾರಪ್ಪ ತಿಳಿಸಿದರು.

ಡಿಡಿಪಿಐ, ಬಿಇಒಗಳ ಕೊರತೆ: ರಾಜ್ಯದಲ್ಲಿ ಡಿಡಿಪಿಐ, ಬಿಇಒಗಳ ಕೊರತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರು ವಿಜಯಪುರ ಜಿಲ್ಲೆಗೆ ಕಾಯಂ ಡಿಡಿಪಿಐ ನೇಮಕ ಯಾವಾಗ ಮಾಡುತ್ತೀರಿ ಎಂದು ಕೇಳಲಾದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು. ಪದೋನ್ನತಿ ನೀಡಿ ನೇಮಕ ಮಾಡಬೇಕಾಗಿದೆ. ಸ್ಥಾನಗಳ ಸಂಖ್ಯೆಯಲ್ಲಿ ಏರುಪೇರಾಗಬಹುದು. ಉಸ್ತುವಾರಿ ಸಚಿವರ ಶಿಫಾರಸ್ಸು ಪಡೆದುಕೊಂಡು ನೇಮಕ ಮಾಡಲಾಗುತ್ತದೆ. ಕಲಿಕಾ ಬಂಧು, ಸೇತುಬಂಧ ಸಂದರ್ಭದಲ್ಲಿ ಡಿಡಿಪಿಐ ನೇಮಕ ಮಾಡಲಾಗುವುದು ಎಂದು ಶಿಕ್ಷಣ ಸಚಿವರು ಹೇಳಿದರು. ಶಾಸಕ ಸಿ.ಎಸ್.ನಾಡಗೌಡ ಉಪಸ್ಥಿತರಿದ್ದರು.

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ